ಮೂಲ್ಕಿ: ಬಿಲ್ಲವ ಸಂಘದಿಂದ ಉಚಿತ ಪುಸ್ತಕ ವಿತರಣೆ

KannadaprabhaNewsNetwork |  
Published : May 25, 2025, 01:28 AM IST
ಮೂಲ್ಕಿ ಬಿಲ್ಲವ ಸಂಘ ಉಚಿತ ಪುಸ್ತಕ ವಿತರಣೆ   | Kannada Prabha

ಸಾರಾಂಶ

ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸಂಘದ ಸಭಾಗೃಹದಲ್ಲಿ ಸುಮಾರು ೮೫ ಸಾವಿರ ರು. ವೆಚ್ಚದಲ್ಲಿ ಮೂರನೇ ತರಗತಿಯಿಂದ ಹತ್ತನೇ ತರಗತಿಯ ೨೧೫ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ವಿದ್ಯಾರ್ಜನೆಯಿಂದ ಸ್ವತಂತ್ರರಾಗಿರಿ ಎಂಬ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಆದರ್ಶದಂತೆ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಅಭಿನಂದನೀಯ ಎಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಹಾಗೂ ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಸದಸ್ಯ ಚಂದ್ರಶೇಖರ ನಾನಿಲ್ ಹೇಳಿದರು.

ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸಂಘದ ಸಭಾಗೃಹದಲ್ಲಿ ಸುಮಾರು ೮೫ ಸಾವಿರ ರು. ವೆಚ್ಚದಲ್ಲಿ ಮೂರನೇ ತರಗತಿಯಿಂದ ಹತ್ತನೇ ತರಗತಿಯ ೨೧೫ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು ವಹಿಸಿದ್ದರು.

ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ ಮಾತನಾಡಿ, ಶಿಕ್ಷಣ ಪ್ರೋತ್ಸಾಹ ಪಡೆದ ವಿದ್ಯಾರ್ಥಿಗಳು ಸದುಪಯೋಗಪಡೆಸಿಕೊಳ್ಳುವ ಜೊತೆಗೆ ಮುಂದೆ ತಾವು ಕೂಡ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ವ್ಯಕ್ತಿಗಳಾಗಿ ಬೆಳೆಯಬೇಕೆಂದು ಹೇಳಿದರು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ ಚೇಳ್ಯೆರು, ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಮೂಲ್ಕಿ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು ಸಂಚಾಲಕ ಹರೀಂದ್ರ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಕುಬೆವೂರು, ಕೋಶಾಧಿಕಾರಿ ಚಂದ್ರಶೇಖರ್, ಮಹಿಳಾ ಮಂಡಳಿ ಅಧ್ಯಕ್ಷೆ ಶಶಿಕಲಾ ಯದೀಶ್ ಅಮೀನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಾಮನ ಕೋಟ್ಯಾನ್ ನಡಿಕುದ್ರು ಸ್ವಾಗತಿಸಿದರು. ಗೋಪಿನಾಥ ಪಡಂಗ ನಿರೂಪಿಸಿದರು. ಜಯಕುಮಾರ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲು ಹೆಚ್ಚಳ: ಸಿದ್ದು vs ಬೆಲ್ಲದ್‌ ಜಟಾಪಟಿ
ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ