ಕನ್ನಡಪ್ರಭ ವಾರ್ತೆ ಮೂಲ್ಕಿ
ಈ ಬಗ್ಗೆ ಅನೇಕ ಬಾರಿ ಕ್ಷೇತ್ರದ ಶಾಸಕರಿಗೆ, ಮೂಲ್ಕಿ ನಗರ ಪಂಚಾಯತಿಗೆ ಕಳೆದ ಆರು ವರ್ಷಗಳಿಂದ ಮನವಿ ಸಲ್ಲಿಸಿದ್ದರೂ ಇದುವರೆಗೂ ದುರಸ್ತಿಯಾಗಿಲ್ಲ. ಈ ಬಾರಿ ಸ್ಥಳೀಯರು ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿ ಮತದಾನ ಬಹಿಷ್ಕಾರದ ಬಗ್ಗೆ ಬ್ಯಾನರ್ ಅಳವಡಿಸಿದ್ದಾರೆ.
ಏನಿದು ಸಮಸ್ಯೆ?:ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯಿಂದ ಕ್ಷೀರಸಾಗರದ ಹಿಂಭಾಗದ ಸಂಪರ್ಕ ರಸ್ತೆ ಸುಮಾರು ಒಂದು ಕಿಲೋಮೀಟರ್ ಉದ್ದವಿದ್ದು ಈ ಭಾಗದಲ್ಲಿ ಸುಮಾರು 50-60 ಮನೆಗಳಿದ್ದು ಮನೆಗೆ ಹೋಗಲು ಈ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಕಳೆದ ಆರು ವರ್ಷಗಳಿಂದ ಈ ಭಾಗದ ಜನ ರಸ್ತೆ ಡಾಂಬರೀಕರಣಕ್ಕೆ ಸ್ಥಳೀಯ ಆಡಳಿತಕ್ಕೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸುತ್ತಲೇ ಇದ್ದಾರೆ. ಆದರೆ ಇದುವರೆಗೂ ರಸ್ತೆ ದುರಸ್ತಿಯಾಗಿಲ್ಲ.
-----------------------
ಮೂಲ್ಕಿಯ ಮಿಷನ್ ಬಂಗ್ಲೆ ಸಮೀಪ ಕ್ಷೀರ ಸಾಗರದ ಬದಿಯಲ್ಲಿ ಒಳ ರಸ್ತೆಯಲ್ಲಿ ಸುಮಾರು 50 ಮನೆಗಳಿದ್ದು ರಸ್ತೆ ಸಂಪೂರ್ಣ ಹದಗೆಟ್ಟಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.ಈ ಬಗ್ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗದ ಕಾರಣ ಈ ಬಾರಿಯ ಲೋಕ ಸಭಾ ಚುನಾವಣೆಗೆ ಇಲ್ಲಿಯ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಿದ್ದೇವೆ.-ಹೂಬರ್ಟ್ ಕೈರನ್ನ, ಆಟೋ ಚಾಲಕರು, ಸ್ಥಳೀಯ ನಿವಾಸಿ.