ಕನ್ನಡಪ್ರಭ ವಾರ್ತೆ ಮೂಲ್ಕಿ
ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 4 ಡಯಾಲಿಸಿಸ್ ಯಂತ್ರಗಳ ಮೂಲಕ ಸೇವೆ ಆರಂಭಗೊಂಡಿದೆ. ಶೆಡ್ಯೂಲ್ ಬಿಟ್ಟು ತೀವ್ರ ಸಮಸ್ಯೆಯ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ಈ ರೀತಿ ಚಿಕಿತ್ಸೆ ದೊರೆಯದೆ ರೋಗಿಯೊಬ್ಬರು ಮೃತಪಟ್ಟಿದ್ದು ಆದ್ಯತೆ ಮೇರೆಗೆ ಪ್ರತ್ಯೇಕ ಯಂತ್ರ ಕಾದಿರಿಸುವಂತೆ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷರಾಜ್ ಆಗ್ರಹಿಸಿದರು.ಕೇವಲ 4 ಯಂತ್ರಗಳ ಮೂಲಕ ಕನಿಷ್ಠ 28 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂಲ್ಕಿ ತಾಲೂಕು ಹೊರತುಪಡಿಸಿ ಹಲವಾರು ರೋಗಿಗಳೂ ಚಿಕಿತ್ಸೆ ಪಡೆಯುತ್ತಿದ್ದು, ಶೆಡ್ಯೂಲ್ ತಪ್ಪಿಸಲು ಅಸಾಧ್ಯ ಎಂದು ವೈದ್ಯಾಧಿಕಾರಿ ಡಾ.ಕೃಷ್ಣ ತಿಳಿಸಿದರು. ಮೆಸ್ಕಾಂ, ರಾಷ್ಟ್ರೀಯ ಹೆದ್ದಾರಿ, ಪೊಲೀಸ್, ಅರಣ್ಯ ಸಹಿತ ನಾನಾ ಇಲಾಖಾಧಿಕಾರಿ ಗಳ ಗೈರು ಬಗ್ಗೆ ಸದಸ್ಯರಾದ ಯೋಗೀಶ್ ಕೋಟ್ಯಾನ್, ಮಂಜುನಾಥ ಕಂಬಾರ್, ಬಾಲಚಂದ್ರ ಕಾಮತ್ ಆಕ್ಷೇಪ ವ್ಯಕ್ತಪಡಿಸಿದರು.ಪಡುಬೈಲು, ಚಿತ್ರಾಪು ಪರಿಸರದಲ್ಲಿ ಉಪ್ಪು ನೀರು ಒಳಗೆ ನುಗ್ಗಿ ಕೃಷಿ ಭೂಮಿಗೆ ಹಾನಿಯಾಗಿದ್ದು ಪರಿಹಾರ ನೀಡಬೇಕೆಂದು ಸದಸ್ಯ ಯೋಗೀಶ್ ಕೋಟ್ಯಾನ್, ರಾಧಿಕಾ ಕೋಟ್ಯಾನ್ ಒತ್ತಾಯಿಸಿದರು.
ಮುಖ್ಯಾಧಿಕಾರಿ ಮಧುಕರ್ ಕೆ. ಕಾರ್ಯ ಕಲಾಪ ನಡೆಸಿಕೊಟ್ಟರು. ನಗರ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷರಾಜ್ ಶೆಟ್ಟಿ ಮತ್ತು ಸದಸ್ಯರು ಇದ್ದರು.