ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾದರಿ: ಆರಗ ಜ್ಞಾನೇಂದ್ರ

KannadaprabhaNewsNetwork |  
Published : Dec 08, 2023, 01:45 AM IST
ಫೋಟೋ 08 ಟಿಟಿಎಚ್ 02: ನರಗುಂದ ತಾಲೂಕಿನ ಬಹುಗ್ರಾಮ ಶುದ್ದೀಕೃತ ಕುಡಿಯುವ ನೀರಿನ ಘಟಕದಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಆರಗ ಜ್ಞಾನೇಂದ್ರ. | Kannada Prabha

ಸಾರಾಂಶ

5 ಎಕರೆ ಪ್ರದೇಶದಲ್ಲಿ ಟ್ರೀಟ್‍ಮೆಂಟ್ ಪ್ಲಾಂಟ್ ನಿರ್ಮಿಸಿ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲಾದ ಈ ಯೋಜನೆಯಲ್ಲಿ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ನೀರಿನ ಟ್ಯಾಂಕ್‍ಗೆ ಪೈಪ್ ಮೂಲಕ ನೀರನ್ನು ಒದಗಿಸುವ ಮೂಲಕ ಶುದ್ಧ ನೀರನ್ನು ಒದಗಿಸಲಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ 36 ಗ್ರಾ.ಪಂ. ವ್ಯಾಪ್ತಿಯ 1.30 ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶಿತ ಕುಡಿಯುವ ನೀರಿನ ಯೋಜನೆಗೂ ಮಾದರಿಯಾಗಿದೆ ಎಂದಿದ್ದಾರೆ.

ಗುತ್ತಿಗೆದಾರರು ಮತ್ತು ಅಧಿಕಾರಿಗಳೊಂದಿಗೆ ನರಗುಂದ ತಾಲೂಕಿಗೆ ಭೇಟಿ, ಮಾಹಿತಿ ಸಂಗ್ರಹ

ಕನ್ನಡಪ್ರಭವಾರ್ತೆ ತೀರ್ಥಹಳ್ಳಿ

ತಾಲೂಕಿಗೆ ಮಂಜೂರಾಗಿರುವ 344 ಕೋಟಿ ರು. ಅನುದಾನದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಸ್ಥಳೀಯವಾಗಿ ಎದುರಾಗಿರುವ ನೀರಿನ ಅಡಚಣೆಗೆ ಪರಿಹಾರವನ್ನು ಕಂಡುಕೊಳ್ಳಲು ಸಹಕಾರಿಯಾಗಿದೆ. ನರಗುಂದ ತಾಲೂಕಿನಲ್ಲಿ ಕಳೆದ ಐದು ವರ್ಷದಿಂದ 3 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾದರಿಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಬೆಳಗಾವಿ ಅಧಿವೇಶನಕ್ಕೆ ಹೋಗುವ ಮಾರ್ಗದಲ್ಲಿ ತಾಲೂಕಿಗೆ ಮಂಜೂರಾಗಿರುವ 344 ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಹಿಡಿದಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳೊಂದಿಗೆ ನರಗುಂದ, ರೋಣ ಮತ್ತು ಗಜೇಂದ್ರಗಡ ತಾಲೂಕುಗಳಿಗೆ ಶುದ್ಧೀಕೃತ ಕುಡಿಯುವ ನೀರನ್ನು ಒದಗಿಸುವ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದರು.

ನರಗುಂದಕ್ಕೆ ಸುಮಾರು 30 ಕಿ.ಮೀ. ದೂರದ ಮಲಪ್ರಭಾ ನದಿಯಿಂದ ಶುದ್ಧೀಕರಣ ಘಟಕಕ್ಕೆ ನೀರನ್ನು ತಂದು ಪ್ರತಿದಿನ ₹3.60 ಲಕ್ಷ ಜನರಿಗೆ ತಲಾ 75 ಲೀಟರ್‌ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ತಾಲೂಕಿಗೆ ಮಂಜೂರಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸ್ಥಳೀಯವಾಗಿ ಎದುರಾಗಿರುವ ಅಡಚಣೆಗೆ ನರಗುಂದದ ಈ ಯೋಜನೆಯಿಂದ ಸೂಕ್ತ ಪರಿಹಾರವನ್ನು ಕಂಡುಕೊಳ್ಳಲು ಮಾದರಿಯಾಗಿದೆ.

5 ಎಕರೆ ಪ್ರದೇಶದಲ್ಲಿ ಟ್ರೀಟ್‍ಮೆಂಟ್ ಪ್ಲಾಂಟ್ ನಿರ್ಮಿಸಿ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲಾದ ಈ ಯೋಜನೆಯಲ್ಲಿ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ನೀರಿನ ಟ್ಯಾಂಕ್‍ಗೆ ಪೈಪ್ ಮೂಲಕ ನೀರನ್ನು ಒದಗಿಸುವ ಮೂಲಕ ಶುದ್ಧ ನೀರನ್ನು ಒದಗಿಸಲಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ 36 ಗ್ರಾ.ಪಂ. ವ್ಯಾಪ್ತಿಯ 1.30 ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶಿತ ಕುಡಿಯುವ ನೀರಿನ ಯೋಜನೆಗೂ ಮಾದರಿಯಾಗಿದೆ ಎಂದಿದ್ದಾರೆ.

ಶುದ್ಧ ಕುಡಿಯುವ ನೀರಿನಿಂದ ಜನರ ಆರೋಗ್ಯ ಮಾತ್ರವಲ್ಲದೇ ಆಯಸ್ಸು ಕೂಡಾ ವೃದ್ಧಿಯಾಗುತ್ತದೆ ಎಂದರು. ಶಾಸಕರೊಂದಿಗೆ ತಾಲೂಕಿನ ಯೋಜನೆಯ ಗುತ್ತಿಗೆದಾರರಾಗಿರುವ ಇಬ್ರಾಹಿಂ ಷರೀಫ್ ಹಾಗೂ ಡಿ.ಎಸ್. ಅಬ್ದುಲ್ ರಹಮಾನ್ ಇತರರು ಇದ್ದರು.

- - -

08 ಟಿಟಿಎಚ್ 02: ನರಗುಂದ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಘಟಕದಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಆರಗ ಜ್ಞಾನೇಂದ್ರ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ