ವಿಶೇಷ ಮಕ್ಕಳೊಂದಿಗೆ ಮುನಿಯಾಲು ಉದಯಕುಮಾರ್ ಶೆಟ್ಟಿ ಹುಟ್ಟುಹಬ್ಬ ಆಚರಣೆ

KannadaprabhaNewsNetwork |  
Published : Jun 09, 2025, 03:08 AM ISTUpdated : Jun 09, 2025, 03:09 AM IST
8ಉದಯ | Kannada Prabha

ಸಾರಾಂಶ

ಉದಯಕುಮಾರ್ ಶೆಟ್ಟಿ ಅವರು ತಮ್ಮ ಪತ್ನಿ ನಮಿತಾ ಉದಯ್ ಶೆಟ್ಟಿ ಅವರೊಂದಿಗೆ ವಿಶೇಷ ಮಕ್ಕಳಿಗೆ ಸಿಹಿ ತಿನ್ನಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದರು. ಅವರಿಗೆ ಶಾಲೆಯ ವತಿಯಿಂದ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಇಲ್ಲಿನ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲಾ ಗೌರವಾಧ್ಯಕ್ಷರಾಗಿರುವ ಉದ್ಯಮಿಗಳು ಮತ್ತು ಬಂಟ್ಸ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಅವರ 52ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ವಿಜೇತ ಶಾಲೆಯ ವಿಶೇಷ ಮಕ್ಕಳೊಂದಿಗೆ ಆಚರಿಸಿದರು. ಈ ಸಂದರ್ಭದಲ್ಲಿ ಉದಯಕುಮಾರ್ ಶೆಟ್ಟಿ ಅವರು ತಮ್ಮ ಪತ್ನಿ ನಮಿತಾ ಉದಯ್ ಶೆಟ್ಟಿ ಅವರೊಂದಿಗೆ ವಿಶೇಷ ಮಕ್ಕಳಿಗೆ ಸಿಹಿ ತಿನ್ನಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದರು. ಅವರಿಗೆ ಶಾಲೆಯ ವತಿಯಿಂದ ಗೌರವಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯೋಗೀಶ್ ಇನ್ನಾ, ಪ್ರಮುಖರಾದ ಸಂತೋಷ್ ದೇವಾಡಿಗ, ಕಿಶೋರ್ ಬೋಳ, ಯೋಗೀಶ್ ಮೂಲ್ಯ, ಉದ್ಯಮಿಗಳಾದ ರಿತೇಶ್ ಹಾಗೂ ಉದಯ್ ಶೆಟ್ಟಿ ಅಭಿಮಾನಿ ಬಳಗದ ಪದಾಧಿಕಾರಿಗಳು ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನವನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಕಾರ್ಕಳ ಕಾಂಗ್ರೆಸ್‌ ವಕ್ತಾರರು ಪ್ರದೀಪ್ ಬೇಲಾಡಿ, ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದರ್ಶನ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಉಪಸ್ಥಿತರಿದ್ದರು.ತನ್ನ ಸಂಸ್ಥೆಗೆ ಸದಾ ಸಹಕಾರ ನೀಡುತ್ತಿರುವ ಉದಯಕುಮಾರ್ ಶೆಟ್ಟಿ ಅವರಿಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲೆಂದು ವಿಜೇತ ಶಾಲಾ ಶಿಕ್ಷಕಿಯರು ಮತ್ತು ಮಕ್ಕಳು ಆರತಿ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಶಾಲೆಯ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ