ಪೌರ ನೌಕರರ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷರ ಬೆಂಬಲ

KannadaprabhaNewsNetwork |  
Published : May 28, 2025, 11:48 PM IST
28ಕೆಎಂಎನ್ ಡಿ28 | Kannada Prabha

ಸಾರಾಂಶ

ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರತಿಭಟನೆಯು ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ರಾಜ್ಯ ಪೌರ ನೌಕರರ ಸಂಘವು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಕುಮಾರ್ ಬೆಂಬಲ ವ್ಯಕ್ತಪಡಿಸಿ ಪಾಲ್ಗೊಂಡರು.

ಎರಡನೇ ದಿನವೂ ನೌಕರರು ಕೆಲಸಕ್ಕೆ ಹಾಜರಾಗಲಿಲ್ಲ. ಇದರಿಂದ ಸಾರ್ವಜನಿಕರು ವಾಪಸ್‌ ಹೋಗುತ್ತಿದ್ದ ದೃಶ್ಯ ಕಂಡು ಬಂತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದರು.

ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರತಿಭಟನೆಯು ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.

ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರಿ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡ್ನರ್, ಸ್ಯಾನಿಟರಿ ಸೂಪರವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಕಾಯಂ, ಎಲ್ಲಾ ನೌಕರರಿಗೆ ಎಸ್ ಎಫ್ ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಮಾಡಿ ಕಚೇರಿಗಾಗಲಿ ಅಥವಾ ಸ್ವಚ್ಛತೆಗಾಗಲಿ ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ರಘು, ಜಿಲ್ಲಾ ಸಂಚಾಲಕ ಪುರುಷೋತ್ತಮ, ಕುಮಾರ್, ಬಾಬು, ಪುಟ್ಟಸ್ವಾಮಿ, ಶ್ರೀಧರ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ