-ಪೌರಾಡಳಿತ ಸಚಿವ ರಹಿಂಖಾನ್ ಅವರಿಂದ ಸುಸಜ್ಜಿತ, ಭವ್ಯ ಕಟ್ಟಡ ಉದ್ಘಾಟನೆ
----
ಕನ್ನಡಪ್ರಭ ವಾರ್ತೆ ಯಾದಗಿರಿನೂತನ ನಗರಸಭೆ ಕಟ್ಟಡದ ಉದ್ಘಾಟನೆಗೆ ಮೂಹೂರ್ತ ನಿಗದಿಯಾಗಿದೆ. ಸುಸಜ್ಜಿತ ಮತ್ತು ಲಿಫ್ಟ್ ಸೌಲಭ್ಯ ಹೊಂದಿರುವ ಭವ್ಯ ಕಟ್ಟಡದ ಉದ್ಘಾಟನೆಗೆ 20ರಂದು ದಿನಾಂಕ ನಿಗದಿಗೊಳಿಸಲಾಗಿದೆ ಎಂಬ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ತಿಳಿಸಿದ್ದಾರೆ.
ನಗರಸಭೆ ಸರ್ವ ಸದಸ್ಯರ ಸಭೆ ಹಾಗೂ ಅಧಿಕಾರಿಗಳ ಪೂರ್ವಭಾವಿಯಾಗಿ ನೂತನ ಕಟ್ಟಡದ ವೀಕ್ಷಿಸಿ ಬಳಿಕ ಮಾತನಾಡಿದ ಅವರು, ಅಲ್ಲಿನ ಮುಗಿದಿರುವ ಮತ್ತು ಉಳಿದ ಕಾಮಗಾರಿ ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೌರಾಡಳಿತ ಸಚಿವ ರಹಿಂಖಾನ್ ಕಟ್ಟಡ 20 ರಂದು ಕಟ್ಟಡ ಉದ್ಘಾಟಿಸಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಸೇರಿದಂತೆಯೇ ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ನಗರಸಭೆ ಅಧಿಕಾರಿಗಳ ಸಭೆ ನಡೆಸಿರುವ ಅವರು, ಜಿಲ್ಲೆಯಲ್ಲಿ ಮಾದರಿ ಕಟ್ಟಡ ಇದಾಗಿದ್ದು, ಯಾವುದೇ ಲೋಪ ಆಗದಂತೆಯೆ ಯಶಸ್ಸಿಗೊಳಿಸಬೇಕೆಂದು ಅವರು ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.
ನಗರಸಭೆ ಉಪಾಧ್ಯಕ್ಷೆ ರೂಕಿಯಾ ಬೇಗಂ, ಪೌರಾಯುಕ್ತ ಉಮೇಶ ಚವ್ಹಾಣ, ಉಪಾದಕ್ಷರಾದ ರುಕಿಯಾ ಬೇಗಂ ಮತ್ತು ನಗರಸಭೆ ಸದಸ್ಯರು ಇದ್ದರು.-----
ಫೋಟೊ: ಯಾದಗಿರಿ ನಗರಸಭೆ ನೂತನ ಕಟ್ಟಡವನ್ನು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಅವರು ವೀಕ್ಷಣೆ ಮಾಡಿದರು.10ವೈಡಿಆರ್8