ರಾಮನಗರ: ಮಳೆ, ಗಾಳಿ, ಬಿಸಿಲು ಎನ್ನದೆ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರ ಹಿತಕಾಪಾಡಲು ನಗರಸಭೆ ಬದ್ಧವಾಗಿದೆ. ನಗರಸಭೆ ಗೌರವವನ್ನು ವ್ಯಾಪಾರಿಗಳು ಕಾಪಾಡಬೇಕು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಕಿವಿಮಾತು ಹೇಳಿದರು.
ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆಯಡಿ 2,585 ಬೀದಿ ಬದಿ ವ್ಯಾಪಾರಿಗಳಿಗೆ 4 ಕೋಟಿ 27 ಲಕ್ಷ ರು. ಸಾಲ ಸೌಲಭ್ಯಗಳನ್ನು ಒದಗಿಸಿದ್ದು, ಅದರಲ್ಲಿ 1,702 ವ್ಯಾಪಾರಿಗಳು ಮತ್ತು ಅವರ ಕುಟುಂಬಸ್ಥರಿಗೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಭೀಮಾ ವಿಮಾ ಯೋಜನೆಯಡಿ 2,219 ಬೀದಿ ಬದಿ ವ್ಯಾಪಾರಿಗಳಿಗೆ ವಿಮೆ ಮಾಡಿಸಲಾಗಿದೆ. ಪ್ರಧಾನಮಂತ್ರಿ ಜನ-ಧನ ಯೋಜನೆಯಡಿ 201 ವ್ಯಾಪಾಸ್ಥರಿಗೆ ಬ್ಯಾಂಕಿನಲ್ಲಿ ಜೀರೋ ಬ್ಯಾಲೆನ್ಸ್ ಖಾತೆಗಳನ್ನು ತೆರೆಯಲು ಅನುಕೂಲ ಕಲ್ಪಿಸಿದೆ ಎಂದು ತಿಳಿಸಿದರು.
ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಕಾರ್ಯಕ್ರಮ ಕೊಡಲು ನಾವು ಸಿದ್ದರಿದ್ದೇವೆ. ಆದರೆ ಪೊಲೀಸರು, ಬೀದಿ ಬದಿ ವ್ಯಾಪಾರಿಗಳು ರಸ್ತೆಗೆ ಬಂದು ಸಾರ್ವಜನಿಕರಿಗೆ ತೊಂದರೆ ಮಾಡುತ್ತಿರುವ ಬಗ್ಗೆ ದೂರು ಹೇಳುತ್ತಾರೆ. ಬೇರೆಯವರಿಗೆ ತೊಂದರೆ ಆಗದಂತೆ ವ್ಯಾಪಾರ ಮಾಡಿ, ನಗರಸಭೆ ಅಧಿಕಾರಿಗಳು ತೋರಿಸಿರುವ ಸ್ಥಳದಲ್ಲಿಯೇ ವ್ಯಾಪಾರ ಮಾಡಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ನಗರಸಭೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ. ಅಂತಹ ವಾತಾವರಣ ಸೃಷ್ಡಿಸಿಕೊಳ್ಳಬೇಡಿ ಎಂದು ಕೆ.ಶೇಷಾದ್ರಿ ಎಚ್ಚರಿಕೆ ನೀಡಿದರು.ಇದೇ ವೇಳೆ 2026-27ನೇ ಸಾಲಿನ ಬಜೆಟ್ ನಲ್ಲಿ ವಿವೇಕಾನಂದರ ಪುತ್ಥಳಿಗೆ 7 ಲಕ್ಷ ರುಪಾಯಿ ಅನುದಾನ ಮೀಸಲಿಟ್ಟಿರುವುದಕ್ಕೆ ಅಧ್ಯಕ್ಷ ಕೆ.ಶೇಷಾದ್ರಿ ಅವರನ್ನು ವಿದ್ಯಾರ್ಥಿ ಪರಿಷತ್ತು ಹಾಗೂ ಸಮಿತಿಯ ಮುಖಂಡರು ಸನ್ಮಾನಿಸಿದರು.
7ಕೆಆರ್ ಎಂಎನ್ 3.ಜೆಪಿಜಿ
ರಾಮನಗರ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಕೆ.ಶೇಷಾದ್ರಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಿದರು.