ಕನ್ನಡಪ್ರಭ ವಾರ್ತೆ ಶ್ರೀನಿವಾಸಪುರವಾಲಿಬಾಲ್ ಪಂದ್ಯಾವಳಿಯಲ್ಲಿ ಎರಡು ತಂಡಗಳ ನಡುವೆ ಉಂಟಾದ ಘರ್ಷಣೆಯನ್ನು ತಪ್ಪಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ ಸಂದರ್ಭದಲ್ಲಿ ಪುರಸಭೆ ಸದಸ್ಯರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ನಂಬಿಹಳ್ಳಿಯಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.
ಈ ಸಂದರ್ಭದಲ್ಲಿ ನಾಗೇಶ್ ಕುಮಾರ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ನಾಗೇಶ್ ಕುಮಾರ್ ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿದರು ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸುತ್ತಿದ್ದ ಪೊಲೀಸರು ನಾಗೇಶ್ಕುಮಾರ್ ಅವರನ್ನು ಥಳಿಸಿದ್ದಾರೆ. ಗಾಯಗೊಂಡ ನಾಗೇಶ್ರನ್ನು ಸ್ಥಳೀಯ ಗ್ರಾಮಸ್ಥರು ಪೊಲೀಸರಿಂದ ಬಿಡಿಸಿಕೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕಿತ್ಸೆಗೆಂದು ಕರೆದುಕೊಂಡು ಹೋದಾಗ ಆಸ್ಪತ್ರೆಯಲ್ಲಿ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದರೂ ಪೊಲೀಸರು ಬಾರದ ಕಾರಣ ನಾಗೇಶ್ ಕುಮಾರ್ ಪ್ರತಿಭಟಿಸಿದರು. ಆಸ್ಪತ್ರೆಗೆ ಆಗಮಿಸಿದ ಪುರಸಭೆಯ ಇತರ ಸದಸ್ಯರು ಪ್ರತಿಭಟನೆ ನಡೆಸಿದರಲ್ಲಿದೆ ಲಾಠಿ ಪ್ರಹಾರ ಮಾಡಿದ ಮೂವರು ಪೇದೆಗಳ ವಿರುದ್ದ ಪ್ರಕರಣ ದಾಖಲಿಸಿ ಅಮಾನತು ಮಾಡುವಂತೆ ಒತ್ತಾಯಿಸಿದರು.ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವ ಮಾಹಿತಿ ಅರಿತ ಡಿ.ವೈ.ಎಸ್.ಪಿ. ನಂದ ಕುಮಾರ್ ಸ್ಥಳಕ್ಕೆ ಆಗಮಿಸಿ ಪೊಲೀಸರ ವಿರುದ್ದ ಕ್ರಮ ಜರುಗಿಸುವುದಾಗಿ ಭರವಸೆ ನೀಡಿ ಪ್ರತಿಭಟನಾಕರರನ್ನು ಸಮಾಧಾನಗೊಳಿಸಿದರು.
ಒಂದು ವೇಳೆ ನಾಗೇಶ್ರನ್ನು ಅವರನ್ನು ಅಲ್ಲಿಂದ ಕಳುಹಿಸದಿದ್ದರೆ ಇನ್ನು ಹೆಚ್ಚಿನ ಅನಾಹುತಗಳು ಆಗುವ ಸಂಭವ ಇತ್ತು, ಅವರ ಮೈಮೇಲೆ ಆಗರುವ ಗಾಯಗಳು ನಾವು ಲಾಠಿಯಿಂದ ಹೊಡೆದಾಗ ಉಂಟಾದ ಗಾಯಗಳಲ್ಲ. ಅವು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಅವರಿಗೆ ಉಂಟಾದ ಗಾಯಗಳಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.