ಕನ್ನಡಪ್ರಭವಾರ್ತೆ ಚಿಕ್ಕಮಗಳೂರು
ನಗರಸಭೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುವ ಪ್ರಕಾಶ್ ರೈ, ಮೊಹಿಯುದ್ದೀನ್ ಷರೀಫ್, ಕೀರ್ತಿಶೇಟ್, ಸುರೇಶ್, ತಬ್ರೀಜ್ ಅಹ್ಮದ್ ಹಾಗೂ ಆಶ್ರಯ ಸಮಿತಿ ಸದಸ್ಯರಾದ ಪ್ರಸಾದ್ ಅಮೀನ್, ಮಧುಕುಮಾರ್, ಫಯಾಜ್ ಅವರಿಗೆ ತಮ್ಮ ಕಾರ್ಯಾಲಯದಲ್ಲಿ ಶಾಸಕರು ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಆಯಾ ವಾರ್ಡಿನ ಚುನಾಯಿತ ಪ್ರತಿನಿಧಿಗಳು ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಕೆಲಸ ಮಾಡಲಿದ್ದು, ನಾಮಿನಿ ಸದಸ್ಯರು ವಾರ್ಡಿನ ಬಡ ಕುಟುಂಬಕ್ಕೆ ಜನನ ಮರಣ ಪ್ರಮಾಣ ಪತ್ರ, ಖಾತೆ ಮಾಡಿಸುವುದು ಹಾಗೂ ಮನೆ ನಿರ್ಮಿಸಲು ಅನುಮತಿ ಪತ್ರವನ್ನು ಒದಗಿಸುವ ಕಾರ್ಯಕ್ಕೆ ಮುಂದಾಗಿ ಜನತೆಯ ವಿಶ್ವಾಸ ಗಳಿಸಬೇಕು ಎಂದರು.ಅಧಿಕಾರ ಯಾರಿಗೂ ಶಾಶ್ವತವಲ್ಲ. ಇರುವಷ್ಟು ದಿವಸ ಕೈಗೊಂಡ ಕಾರ್ಯ ಜನಪ್ರತಿನಿಧಿಗಳಿಗೆ ಪ್ರೇರಣೆಯಾಗಲಿವೆ. ತಾವು ಕೂಡಾ ರಾಜಕೀಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ನಗರಸಭಾ ನಾಮನಿರ್ದೇಶಿತ ಸದಸ್ಯರಾಗಿ ಪಾದಾರ್ಪಣೆ ಮಾಡಿ ಇದೀಗ ಶಾಸಕನಾಗಿ ಕಾರ್ಯನಿರ್ವಹಿಸುವ ಸ್ಥಾನ ಪಡೆದಿದ್ದೇನೆ ಎಂದು ಉದಾಹರಣೆ ನೀಡಿದರು.ಆಶ್ರಯ ಸಮಿತಿ ಸದಸ್ಯರು ಸಭೆಗಳಲ್ಲಿ ಹಾಜರಾಗುವ ಮೂಲಕ ಬಡವರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ದಾಖಲಾತಿ ಪಡೆದು ಅರ್ಜಿ ಸಲ್ಲಿಸುವ ಕೆಲಸ ಮಾಡಬೇಕು. ಸಿಕ್ಕಂತಹ ಅವಧಿಯಲ್ಲಿ ಕನಿಷ್ಠ ಪ್ರತಿ ಕುಟುಂಬಕ್ಕೆ ನಿವೇಶನ ಒದಗಿಸಿಕೊಡಬೇಕು. ಜೊತೆಗೆ ಪಕ್ಷ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ಪಕ್ಷದಲ್ಲಿ ಹಲವಾರು ವರ್ಷ ದುಡಿದಿರುವ ಮುಖಂಡರಿಗೆ ನಾಮನಿರ್ದೇಶಕ ಸದಸ್ಯ ಸ್ಥಾನವನ್ನು ಸರ್ಕಾರ ಒದಗಿಸಿದೆ. ಆ ಹಿನ್ನೆಲೆಯಲ್ಲಿ ಮುಖಂಡರು ಜನತೆಯಲ್ಲಿ ಉತ್ತಮ ಬಾಂಧವ್ಯ ವೃದ್ದಿಸಿಕೊಂಡು ಮುನ್ನೆಡೆದರೆ ಯಶಸ್ಸು ಸಾಧ್ಯ ಎಂದರು.