ಮುಸ್ಲಿಂ ಬಾಂಧವರಿಗೆ ತಂಪು ಪಾನೀಯ ವಿತರಿಸಿದ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ

KannadaprabhaNewsNetwork |  
Published : Mar 22, 2026, 01:15 AM IST
21ಕೆಆರ್ ಎಂಎನ್ 3.ಜೆಪಿಜಿರಾಮನಗರದ ಗಾಂಧಿ ಪಾರ್ಕ್ ಬಳಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ)ರವರು ಮುಸ್ಲಿಂ ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು. | Kannada Prabha

ಸಾರಾಂಶ

ರಾಮನಗರ: ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮಸ್ಲಿಂ ಬಾಂಧವರೊಂದಿಗೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಶುಭಾಶಯ ವಿನಿಮಯ ಮಾಡಿಕೊಂಡು ತಂಪು ಪಾನೀಯ, ಮಜ್ಜಿಗೆ ವಿತರಣೆ ಮಾಡಿದರು

ರಾಮನಗರ: ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮಸ್ಲಿಂ ಬಾಂಧವರೊಂದಿಗೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಶುಭಾಶಯ ವಿನಿಮಯ ಮಾಡಿಕೊಂಡು ತಂಪು ಪಾನೀಯ, ಮಜ್ಜಿಗೆ ವಿತರಣೆ ಮಾಡಿದರು.

ನಗರದ ಗಾಂಧಿ ಪಾರ್ಕ್ ಬಳಿ ಬೃಹತ್ ಶಾಮಿಯಾನ ಅಳವಡಿಸಿ ಮಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿದರು. ಕೆ.ಶೇಷಾದ್ರಿರವರು ಮುಸ್ಲಿಂ ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ವೇಳೆ ಮಾತನಾಡಿದ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಮಾತನಾಡಿ, ರಂಜಾನ್ ಮಾಸದಲ್ಲಿ ಒಂದು ತಿಂಗಳ ಕಾಲ ಉಪವಾಸ ಅಂದರೆ, ಆಹಾರ ತ್ಯಜಿಸುವುದಲ್ಲ. ಬದಲಾಗಿ ಕೆಟ್ಟ ಆಲೋಚನೆಗಳು, ಸುಳ್ಳು, ಅಸೂಯೆ ಮತ್ತು ದ್ವೇಷವನ್ನು ತ್ಯಜಿಸಿ, ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸುವ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.

ರಾಮನಗರದಲ್ಲಿ ಹಿಂದಿನಿಂದಲೂ ಹಿಂದೂಗಳು ಮತ್ತು ಮುಸಲ್ಮಾನ ಬಾಂಧವರು ಸಾಮರಸ್ಯದಿಂದ ಬದುಕು ನಡೆಸುತ್ತಿದ್ದಾರೆ. ಅದನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡುತ್ತಿದ್ದೇವೆ ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ಸುರೇಶ್ (ದೊಡ್ಡಿ), ನಗರಸಭೆ ಸದಸ್ಯ ಮುತ್ತುರಾಜು, ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಪ್ರವೀಣ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಭೂಷಣ್, ಮುಖಂಡರಾದ ಹಾಲಿನಚಂದ್ರು, ಕಬ್ಬಡಿ ವಿಜಿ, ದೇವರಾಜು, ಮಲ್ಲೇಗೌಡ, ರಾಮು, ಪ್ರಮೋದ್ , ಉಮಾಶಂಕರ್, ಲವ, ನಂದೀಶ್, ಶಿವರಾಜು ಮತ್ತಿತರರು ಹಾಜರಿದ್ದರು.

21ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ಗಾಂಧಿ ಪಾರ್ಕ್ ಬಳಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ)ರವರು ಮುಸ್ಲಿಂ ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಶಾಸಕ ಪ್ರದೀಪ್ ಈಶ್ವರ್
ಶಾಶ್ವತವಾಗಿ ಉಳಿಯುವಂತಹ ಕೆಲಸ ಮಾಡುವೆ