ಕನ್ನಡಪ್ರಭ ವಾರ್ತೆ ನಂಜನಗೂಡು
ನಗರಸಭೆ ಅಧ್ಯಕ್ಷ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತ ವಿಜಯ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಹಲವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ವಿಶೇಷವಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ನಂಜನಗೂಡು ಶಾಸಕರಾಗಿದ್ದ ವಿ. ಶ್ರೀನಿವಾಸ ಪ್ರಸಾದ್ ನಂಜನಗೂಡಿನ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡಿದ್ದಾರೆ. ಅದರಲ್ಲೂ ವಿಶೇಷವಾಗಿ ಚಾಮರಾಜನಗರ ರಸ್ತೆಯಿಂದ ಮೈಸೂರು ರಸ್ತೆಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಅಡ್ಡಲಾಗಿದ್ದ ರೈಲ್ವೆಗೇಟ್ ನಿಂದ ಉಂಟಾಗುತ್ತಿದ್ದ ವಾಹನ ದಟ್ಟಣೆಯನ್ನು ತಡೆಗಟ್ಟಲು ರೈಲ್ವೆ ಮೇಲ್ಸೇತುವೆ ನಿರ್ಮಿಸಲು ನೆರವಾಗಿದ್ದರು, ಹೀಗಾಗಿ ಅವರ ಹೆಸರನ್ನೇ ಇಡುವಂತೆ ಈ ಹಿಂದಿನಿಂದಲೂ ಒತ್ತಡ ಹೇರಲಾಗುತ್ತಿದೆ, ಆದರೆ ಕಳೆದ ಅ. 15ರಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹೆಸರನ್ನು ಮೇಲ್ಸೇತುವೆಗೆ ಇಡಲು ತೀರ್ಮಾನಿಸಲಾಗಿದೆ, ಈ ತೀರ್ಮಾನಕ್ಕೆ ನಮ್ಮೆಲ್ಲರ ಆಕ್ಷೇಪಣೆಯಿದ್ದು, ಸಾರ್ವಜನಿಕರ ಅಪೇಕ್ಷೆಯಂತೆ ಮಾಜಿ ಸಂಸದ ವಿ. ಶ್ರೀನಿವಾಸಪ್ರಸಾದ್ ಹೆಸರನ್ನು ಇಡಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ಮಾತನಾಡಿ, ರೇಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಯಾರು ಕಾರಣೀ ಭೂತರಾಗಿದ್ದಾರೆ ಎಂಬ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ ಅವರ ಹೆಸರನ್ನು ಇಡಲು ಶಿಫಾರಸ್ಸು ಮಾಡಲಾಗುವುದು ಎಂದರು.ಬಿಜೆಪಿ ನಗರಾಧ್ಯಕ್ಷ ಸಿದ್ದರಾಜು, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ಜಿಪಂ ಮಾಜಿ ಸದಸ್ಯ ಸಿ. ಚಿಕ್ಕರಂಗನಾಯಕ ಸೇರಿದಂತೆ ಇದ್ದರು.
-------------