ಪರಿಷ್ಕೃತ ವೇತನಕ್ಕಾಗಿ ಪಾಲಿಕೆ ಅಧಿಕಾರಿ, ನೌಕರರ ಹೋರಾಟ

KannadaprabhaNewsNetwork |  
Published : Apr 17, 2025, 12:03 AM IST
ಹೋರಾಟ | Kannada Prabha

ಸಾರಾಂಶ

7ನೇ ವೇತನ ಆಯೋಗದ ಪರಿಷ್ಕೃತ ವೇತನ ಪಾವತಿಗೆ ಅವಶ್ಯವಿರುವ ಹೆಚ್ಚುವರಿ ಅನುದಾನವನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಲ್ಲಿನ ಮಹಾನಗರಪಾಲಿಕೆ ಅಧಿಕಾರಿಗಳ ಹಾಗೂ ನೌಕರರ ಸಂಘದ ಕರೆಯ ಮೇರೆಗೆ ಅಧಿಕಾರಿ, ನೌಕರರು ಬುಧವಾರ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು7ನೇ ವೇತನ ಆಯೋಗದ ಪರಿಷ್ಕೃತ ವೇತನ ಪಾವತಿಗೆ ಅವಶ್ಯವಿರುವ ಹೆಚ್ಚುವರಿ ಅನುದಾನವನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಲ್ಲಿನ ಮಹಾನಗರಪಾಲಿಕೆ ಅಧಿಕಾರಿಗಳ ಹಾಗೂ ನೌಕರರ ಸಂಘದ ಕರೆಯ ಮೇರೆಗೆ ಅಧಿಕಾರಿ, ನೌಕರರು ಬುಧವಾರ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು. ಈ ಸಂಬಂಧ ನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಅಧಿಕಾರಿ, ನೌಕರರು, ರಾಜ್ಯ ಸಂಘದ ವತಿಯಿಂದ ಸರ್ಕಾರಕ್ಕೆ ನೀಡಿರುವ ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ ಬರುವ ಮೇ 26 ರಂದು ಸಾಂದರ್ಭಿಕ ರಜೆ ಹಾಕಿ, ನ್ಯಾಯಯುತ ಬೇಡಿಕೆಗಳನ್ನು ಪಡೆಯುವ ಹಿತದೃಷ್ಟಿಯಿಂದ ಕೆಲಸ ಕಾರ್ಯಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿ, ಅನಿವಾರ್ಯ ಕಾರಣಗಳಿಂದ ಹೋರಾಟವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿರುತ್ತದೆ ಎಂದು ಹೇಳಿದರು. ಹಂತಹಂತವಾಗಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ.ಮಹಾನಗರ ಪಾಲಿಕೆಗಳು ಖಾಯಂ ನೌಕರರ ವೇತನಾನುದಾನಕ್ಕೆ ನಿಗದಿತ ನಮೂನೆ ಅಪೆಂಡಿಕ್ಸ್-ಬಿಯಲ್ಲಿ ಸಲ್ಲಿಸಿದ್ದ ಬೇಡಿಕೆಯಲ್ಲಿ ಶೇ.90/ಶೇ.85ರಷ್ಟು ಅನುದಾನವನ್ನು ಮಾತ್ರ ಹಂಚಿಕೆ ಮಾಡಿ ವ್ಯತ್ಯಾಸದ ಉಳಿಕೆ ಶೇ.10/ಶೇ.15 ಅನುದಾನವನ್ನು ಮಹಾನಗರ ಪಾಲಿಕೆಗಳು ಕ್ರೋಢೀಕರಿಸಿದ ಸ್ವಂತ ಸಂಪನ್ಮೂಲಗಳಿಂದ ಭರಿಸಲು ಆರ್ಥಿಕ ಇಲಾಖೆಯ 2025-26ನೇ ಸಾಲಿನ ಆಯವ್ಯಯ ವೆಚ್ಚ ಸಂಪುಟ-04 ರಟಿಪ್ಪಣಿಯಂತೆ ಪೌರಾಡಳಿತ ನಿರ್ದೇಶನಾಲಯದಿಂದ ಆದೇಶ ಹೊರಡಿಸಲಾಗಿದೆ. ಸದರಿ ಆದೇಶವನ್ನು ಹಿಂಪಡೆದು, ಖಾಯಂ ನೌಕರರ ವೇತನಾನುದಾನಕ್ಕೆ ಅವಶ್ಶವಿರುವ ಸಂಪೂರ್ಣ ಅನುದಾನವನ್ನು ಎಸ್‌ಎಫ್‌ಸಿ ನಿಧಿಯಿಂದ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಆದೇಶದಂತೆ ಜಾರಿಗೊಳಿಸಿರುವ ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯ ಸೂಚಿಯನ್ನುನಗರಾಭಿವೃದ್ಧಿ ಇಲಾಖೆಯಡಿ ಬರುವ ಮಹಾನಗರಪಾಲಿಕೆ ಹಾಗೂ ಇತರೆ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಯಥಾವತ್ತಾಗಿ ವಿಸ್ತರಿಸಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.ಸಂಘದ ಅಧ್ಯಕ್ಷ ಪ್ರಸನ್ನಕುಮಾರ್,ಉಪಾಧ್ಯಕ್ಷೆ ಪುಷ್ಪಲತ, ಪದಾಧಿಕಾರಿಗಳಾದ ಸಿದ್ಧಲಿಂಗಯ್ಯ, ಶೆಟ್ಟಳ್ಳಪ್ಪ, ಮಧು, ಸುನೀತಾ, ಮಹೇಶ್ ಬಾಬು, ವಿಜಯಕುಮಾರ್ ಮೊದಲಾದವರು ಭಾಗವಹಿಸಿದ್ದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ