ಚಳ್ಳಕೆರೆಯಲ್ಲಿ ನಗರಸಭೆಯಿಂದ ಪಾದಚಾರಿ ಮಾರ್ಗದ ಗೂಡಂಗಡಿ ತೆರವು

KannadaprabhaNewsNetwork |  
Published : Jun 19, 2025, 12:34 AM ISTUpdated : Jun 19, 2025, 12:35 AM IST
ಪೋಟೋ೧೮ಸಿಎಲ್‌ಕೆ೧ ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ಪುಟ್‌ಬಾತ್‌ಗಳ ಮೇಲಿದ್ದ ಗೂಂಡಗಡಿಗಳನ್ನು ತೆರವು ಮಾಡಿಸಿದ ನಗರಸಭೆ ಅಧಿಕಾರಿಗಳು. | Kannada Prabha

ಸಾರಾಂಶ

ನಗರದ ಚಿತ್ರದುರ್ಗ ರಸ್ತೆಯೂ ಸೇರಿದಂತೆ ವಿವಿಧೆಡೆಗಳಲ್ಲಿ ಫುಟ್‌ಪಾತ್ ಆಕ್ರಮಿಸಿಕೊಂಡು ಶೆಡ್ ನಿರ್ಮಿಸಿ ಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆ ಉಂಟು ಮಾಡುತ್ತಿದ್ದ ಹಿನ್ನೆಲೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರಸಭೆ ಆಡಳಿತ ಬುಧವಾರ ಬೆಳ್ಳಂಬೆಳಗ್ಗೆ ಮಿಂಚಿನ ವೇಗದಲ್ಲಿ ಪಾದಚಾರಿ ಮಾರ್ಗದ ತೆರವು ಕಾರ್ಯಾಚರಣೆ ನಡೆಸಿತು.

ನಗರಸಭೆ ಅಧಿಕಾರಿಗಳ ದಿಢೀರ್ ಕಾರ್ಯಾಚರಣೆ । ಸಾರ್ವಜನಿಕರ ಪ್ರಶಂಸೆ । ಜೆಸಿಬಿ ಮೂಲಕ ಕಾರ್ಯಾಚರಣೆ

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ನಗರದ ಚಿತ್ರದುರ್ಗ ರಸ್ತೆಯೂ ಸೇರಿದಂತೆ ವಿವಿಧೆಡೆಗಳಲ್ಲಿ ಫುಟ್‌ಪಾತ್ ಆಕ್ರಮಿಸಿಕೊಂಡು ಶೆಡ್ ನಿರ್ಮಿಸಿ ಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆ ಉಂಟು ಮಾಡುತ್ತಿದ್ದ ಹಿನ್ನೆಲೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರಸಭೆ ಆಡಳಿತ ಬುಧವಾರ ಬೆಳ್ಳಂಬೆಳಗ್ಗೆ ಮಿಂಚಿನ ವೇಗದಲ್ಲಿ ಪಾದಚಾರಿ ಮಾರ್ಗದ ತೆರವು ಕಾರ್ಯಾಚರಣೆ ನಡೆಸಿತು.

ಪಾದಚಾರಿ ಮಾರ್ಗ ತೆರವುಗೊಳಿಸುವಂತೆ ಸಾರ್ವಜನಿಕರು ಹಲವಾರು ಬಾರಿ ಶಾಸಕರು, ನಗರಸಭೆ ಆಡಳಿತ ಹಾಗೂ ತಾಲೂಕು ಆಡಳಿತಕ್ಕೆ ನಿರಂತರ ಮನವಿ ಮಾಡಿದ್ದರು. ಪೌರಾಯುಕ್ತ ಜಗರೆಡ್ಡಿ, ಕಂದಾಯಾಧಿಕಾರಿ ಸತೀಶ್, ನೈರ್ಮಲ್ಯ ಎಂಜಿನಿಯರ್ ನರೇಂದ್ರಬಾಬು, ಹಿರಿಯ ಆರೋಗ್ಯ ನಿರೀಕ್ಷಕರಾದ ಮಹಾಲಿಂಗಪ್ಪ, ಗಣೇಶ್, ಗೀತಾಕುಮಾರಿ, ರುದ್ರಮುನಿ,ನಗರಸಭೆ ಅಧಿಕಾರಿ ವರ್ಗ ಹಾಗೂ ಪೊಲೀಸ್ ಇಲಾಖೆ ಸಹಕಾರದಿಂದ ಪುಟ್‌ಬಾತ್ ತೆರವು ಕಾರ್ಯಾಚರಣೆ ಆರಂಭಿಸಿದರು.

ಪ್ರಾರಂಭದಲ್ಲಿ ಚಿತ್ರದುರ್ಗ ರಸ್ತೆಯ ಪಿಡಬ್ಲ್ಯುಡಿ ಕಚೇರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಾಲೂಕು ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆಗೆ ಹೊಂದಿಕೊಂಡಿದ್ದ ಹತ್ತಾರು ಶೆಡ್‌ಗಳನ್ನು ಯಾವುದೇ ಮುಲಾಜಿಲ್ಲದೆ ನಗರಸಭೆ ಅಧಿಕಾರಿಗಳು ಜೆಸಿಬಿ ಮೂಲಕ ನೆಲಸಮಗೊಳಿಸಿದರು.

ಎರಡು ದಿನಗಳ ಮೊದಲೇ ನಗರಸಭೆ ಆಡಳಿತ ಈ ಬಗ್ಗೆ ಸಾರ್ವಜನಿಕರಿಗೆ ಮನವಿ ಮಾಡಿ ಫುಟ್‌ಪಾತ್‌ಗಳಲ್ಲಿ ಅಕ್ರಮವಾಗಿ ಅಂಗಡಿಗಳನ್ನು ನಡೆಸುವವರು ಕೂಡಲೇ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಆದರೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಅಂತಿಮವಾಗಿ ಬುಧವಾರ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿ ಹಲವಾರು ಶೆಡ್‌ಗಳನ್ನು ಜೆಸಿಬಿ ಸಹಕಾರದಿಂದ ನೆಲಸಮಗೊಳಿಸಿದರು. ಪುಟ್‌ಬಾತ್ ಅಂಗಡಿ ವ್ಯಾಪಾರಸ್ಥರಿಗೆ ನಗರಸಭೆಯ ದಿಢೀರ್ ಕಾರ್ಯಾಚರಣೆ ಭಯ ಹುಟ್ಟಿಸಿತು.

ಪುಟ್‌ಬಾತ್ ಕಾರ್ಯಾಚರಣೆಯ ಬಗ್ಗೆ ಇಲ್ಲಿನ ಅನೇಕ ನಾಗರಿಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ಧಾರೆ. ಚಿತ್ರದುರ್ಗ ರಸ್ತೆಯೂ ಸೇರಿದಂತೆ ನಗರದ ಎಲ್ಲಾ ರಸ್ತೆಗಳಲ್ಲಿ ಜನ, ವಾಹನ ಓಡಾಟ ನಿರಂತರವಾಗಿದ್ದು ಫುಟ್‌ಪಾತ್ ಅಕ್ರಮಣದಿಂದ ಸಾರ್ವಜನಿಕರು ಪ್ರತಿನಿತ್ಯ ತಮ್ಮ ಪ್ರಾಣ ಕೈಯಲ್ಲಿ ಹಿಡಿದು ರಸ್ತೆಯ ಮೇಲೆ ಸಂಚರಿಸಬೇಕಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು ಫುಟ್‌ಪಾತ್ ತೆರವುಗೊಳಿಸುವಂತೆ ಒತ್ತಾಯಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ನಗರಸಭೆ ಆಡಳಿತ ತೆರವು ಕಾರ್ಯಾಚರಣೆಗೆ ಧುಮಿಕಿದ್ದು ನಗರಸಭೆಯ ದಿಟ್ಟತನದ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಪ್ರಾರಂಭದಲ್ಲಿ ನಗರಸಭೆ ಅಧಿಕಾರಿಗಳೊಂದಿಗೆ ಫುಟ್‌ಪಾತ್ ಅಂಗಡಿ ಮಾಲೀಕರು ನಮಗೆ ನೋಟಿಸ್ ನೀಡದೆ ಖಾಲಿಮಾಡಿಸುವುದು ಸರಿಯಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಪ್ರತಿನಿತ್ಯವೂ ನಗರಸಭೆ ತಮ್ಮ ವಾಹನಗಳ ಮೂಲಕ ಸಾರ್ವಜನಿಕರಿಗೆ ಫುಟ್‌ಪಾತ್ ತೆರವು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡುತ್ತ ಬಂದಿದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ