ಪುರಸಭೆ ಮಳಿಗೆಗೆ ಬೀಗ ಭಯ: ₹5 ಲಕ್ಷ ಬಾಡಿಗೆ ವಸೂಲಿ

KannadaprabhaNewsNetwork |  
Published : Jun 25, 2025, 11:48 PM IST
ಹೊನ್ನಾಳಿ ಫೋಟೋ 25ಎಚ್.ಎಲ್.ಐ1.ಹೊನ್ನಾಳಿ ಖಾಸಗಿ ಬಸ್ ನಿಲ್ದಾಣ ಪ್ರದೇಶದಲ್ಲಿ ಮಳಿಗೆಯ ಬಾಡಿಗೆ ಬಾಕಿ ಇರುವವರ ಮಳಿಗೆ ಬಂದ್ ಮಾಡಿಸುತ್ತಿರುವ ಪುರಸಭೆ ಅಧಿಕಾರಿಗಳು. | Kannada Prabha

ಸಾರಾಂಶ

ಪುರಸಭೆ ವ್ಯಾಪ್ತಿಯಲ್ಲಿನ ಸುಮಾರು 73 ಮಳಿಗೆಗಳ ಬಾಡಿಗೆ ಬಾಕಿ ಮೊತ್ತ ₹65 ಲಕ್ಷ ವಸೂಲಿಗೆ ಮುಖ್ಯಾಧಿಕಾರಿ ಸೇರಿ ಅಧಿಕಾರಿಗಳ ತಂಡ ಬೀಗ ಹಾಕುವ ದಿಟ್ಟ ಕ್ರಮ ಕೈಗೊಂಡಿದ್ದರ ಫಲವಾಗಿ ₹5 ಲಕ್ಷ ಬಾಡಿಗೆ ಬಾಕಿ ಹಣ ವಸೂಲಾಗಿದೆ.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಪುರಸಭೆ ವ್ಯಾಪ್ತಿಯಲ್ಲಿನ ಸುಮಾರು 73 ಮಳಿಗೆಗಳ ಬಾಡಿಗೆ ಬಾಕಿ ಮೊತ್ತ ₹65 ಲಕ್ಷ ವಸೂಲಿಗೆ ಮುಖ್ಯಾಧಿಕಾರಿ ಸೇರಿ ಅಧಿಕಾರಿಗಳ ತಂಡ ಬೀಗ ಹಾಕುವ ದಿಟ್ಟ ಕ್ರಮ ಕೈಗೊಂಡಿದ್ದರ ಫಲವಾಗಿ ₹5 ಲಕ್ಷ ಬಾಡಿಗೆ ಬಾಕಿ ಹಣ ವಸೂಲಾಗಿದೆ.

ಮುಖ್ಯಾಧಿಕಾರಿ ಲೀಲಾವತಿ ಮಳಿಗೆಗಳ ಬಾಡಿಗೆ ಹಾಗೂ ವಿದ್ಯುತ್ ಶುಲ್ಕ ಬಾಕಿ ವಸೂಲಿಗೆ 3 ವಾರಗಳ ಹಿಂದೆ ಮಳಿಗೆ ಬಾಡಿಗೆದಾರರಿಗೆ ನೋಟಿಸ್ ಮೂಲಕ, ನಂತರ ಪುರಸಭೆ ಸಿಬ್ಬಂದಿ ಮೂಲಕ ಮೌಖಿಕ ಸೂಚನೆ ನೀಡಿದ್ದರು. ಆದರೂ, ಬಾಡಿಗೆದಾರರು ಬಾಡಿಗೆ ಹಾಗೂ ವಿದ್ಯುತ್ ಶುಲ್ಕ ಬಾಕಿ ಕಟ್ಟುವಲ್ಲಿ ತಾತ್ಸಾರ ತೋರಿದ್ದರು. ಆದರೆ, ಮಂಗಳವಾರ ಬಾಡಿಗೆ ಬಾಕಿ ಉಳಿಸಿಕೊಂಡ ಮಳಿಗೆಗಳಿಗೆ ಪುರಸಭೆ ಅಧಿಕಾರಿಗಳ ತಂಡ ಬೀಗ ಜಡಿಯುವ ಕಾರ್ಯಾಚರಣೆ ನಡೆಸಿತು.

ಪುರಸಭೆ ದಿಟ್ಟ ಕ್ರಮದಿಂದ ತಮ್ಮ ದುಡಿಮೆಗೆ ತೊಂದರೆ ಆಗುತ್ತದೆ ಎಂದರಿತ ಕೆಲ ಮಳಿಗೆ ಬಾಡಿಗೆದಾರರು ಬಾಕಿ ಮೊತ್ತ ಪಾವತಿಸಲು ಮುಂದಾಗಿದ್ದಾರೆ. 23 ಮಳಿಗೆಗಳ ಬಾಡಿಗೆದಾರರು ಬಾಡಿಗೆ ಕಟ್ಟದ ಕಾರಣ ಅವರ ಮಳಿಗೆಗಳಿಗೆ ಪುರಸಭೆ ಅಧಿಕಾರಿಗಳು ಬೀಗ ಜಡಿದರು.

ಕೆಲವು ಬಾಡಿಗೆದಾರರು ಬರೋಬ್ಬರಿ 50 ರಿಂದ 60 ತಿಂಗಳು ಪುರಸಭೆಗೆ ಮಳಿಗೆ ಬಾಡಿಗೆಯೇ ಕಟ್ಟಿಲ್ಲ. ಈಗ ಬಾಕಿ ಉಳಿಸಿಕೊಂಡವರ ಮಳಿಗೆಗಳಿಗೆ ಬೀಗ ಹಾಕಲಾಗಿದೆ. 2-3 ತಿಂಗಳ ಬಾಡಿಗೆ ಬಾಕಿ ಉಳಿಸಿಕೊಂಡವರಿಗೆ ಸಮಯಾವಕಾಶ ನೀಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಲೀಲಾವತಿ ಮಾಹಿತಿ ನೀಡಿದರು.

ಕೆಲ ಮಳಿಗೆಗಳವರು ಒಟ್ಟು ₹3 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬೆಸ್ಕಾಂನವರು ವಿದ್ಯುತ್ ಕಡಿತಗೊಳಿಸಿದ್ದಾರೆ. ವಿದ್ಯುತ್ ಶುಲ್ಕ ಪಾವತಿಸುವವರೆಗೊ ವಿದ್ಯುತ್ ಸಂಪರ್ಕ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪುರಸಭೆ ಒಡೆತನದ ಮಳಿಗೆಗಳನ್ನು ಬಾಡಿಗೆ ಪಡೆದಿರುವ ಕೆಲವರು ಮಳಿಗೆ ಮುಂಭಾಗದಲ್ಲಿ ಅನಧಿಕೃತವಾಗಿ 20 ಅಡಿಗೂ ಹೆಚ್ಚಿನ ಜಾಗ ಅತಿಕ್ರಮಿಸಿಕೊಂಡು ಮತ್ತೊಬ್ಬರಿಗೆ ಮಳಿಗೆ ಬಾಡಿಗೆಗೆ ನೀಡಿದ್ದಾರೆ. ಇಂಥವರಿಗೆ ಕೂಡ ಎಚ್ಚರಿಗೆ ನೀಡಲಾಗಿದೆ ಎಂದು ಪುರಸಭೆ ಅಧಿಕಾರಿಗಳು ತಿಳಿಸಿದರು.

ಒತ್ತುವರಿ ಮಾಡಿ ಶೆಡ್ ನಿರ್ಮಿಸಿದವರಿಗೆ ಸ್ವಯಂಪ್ರೇರಿತವಾಗಿ ಶೇಡ್‌ ತೆರವುಗೊಳಿಸಲು ಒಂದೆರಡು ದಿನಗಳ ಸಮಯಾವಕಾಶ ಕೊಡಲಾಗಿದೆ. ತಪ್ಪಿದಲ್ಲಿ ಜೆಸಿಬಿ ಯಂತ್ರ ಬಳಸಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಮುಖ್ಯಾಧಿಕಾರಿ ಹೇಳಿದ್ದಾರೆ.

ಈ ಸಂದರ್ಭ ಪುರಸಭೆ ಎಂಜಿನಿಯರ್ ದೇವರಾಜ್, ಆರೋಗ್ಯಾಧಿಕಾರಿ ಪರಮೇಶ್ ನಾಯ್ಕ, ಮೋಹನ್, ಸಾಕಮ್ಮ, ಪುನೀತ್, ಪೌರಕಾರ್ಮಿಕರು ಇದ್ದರು.

- - -

-25ಎಚ್.ಎಲ್.ಐ1.ಜೆಪಿಜಿ:

ಹೊನ್ನಾಳಿ ಖಾಸಗಿ ಬಸ್ ನಿಲ್ದಾಣ ಪ್ರದೇಶದಲ್ಲಿ ಮಳಿಗೆ ಬಾಡಿಗೆ ಬಾಕಿ ಇರುವವರ ಮಳಿಗೆ ಬಂದ್ ಮಾಡಿಸುತ್ತಿರುವ ಪುರಸಭೆ ಅಧಿಕಾರಿಗಳು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ