ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಕನ್ನಡಪ್ರಭ ವರದಿ ಶನಿವಾರ ಬೆಳಗ್ಗೆ ಗಮನಿಸಿದ ಪುರಸಭೆ ನೂತನ ಮುಖ್ಯಾಧಿಕಾರಿ ಎಸ್.ಶರವಣ ಸಿಬ್ಬಂದಿಗೆ ಸೂಚನೆ ನೀಡಿ ಕಸ ಬಿದ್ದಿರುವ ಕಡೆ ಕೂಡಲೇ ಸ್ವಚ್ಛ ಮಾಡಿ ಫೋಟೋ ಕಳುಹಿಸಬೇಕು ಎಂದು ತಾಕೀತು ಮಾಡಿದ ಬೆನ್ನಲ್ಲೆ ಪುರಸಭೆ ಸಿಬ್ಬಂದಿ ಕಸ ಬಿದ್ದ ಸ್ಥಳಗಳನ್ನು ಹುಡುಕಿಕೊಂಡು ಟ್ರ್ಯಾಕ್ಟರ್ಗೆ ಕಸ ತುಂಬಿಸಿ ಸ್ವಚ್ಛ ಮಾಡಿದ್ದಾರೆ. ಅಧಿಕಾರಿಗಳ ಕಣ್ಣು ತೆರೆಸಿ ಕಸ ಸ್ವಚ್ಛ ಮಾಡಿದ್ದಕ್ಕೆ ಪಟ್ಟಣದ ನಿವಾಸಿ ವೆಂಕಟೇಶ್ ಕನ್ನಡಪ್ರಭಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕನ್ನಡಪ್ರಭ ವರದಿ ಬಂದ ಬಳಿಕ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಟ್ಟಣದ ಸ್ವಚ್ಛತೆಗೆ ಮುಂದಾಗಿದ್ದಾರೆ ಎಂದು ತಿಳಿಸಿದ್ದು, ಪತ್ರಿಕೆಗಳಲ್ಲಿ ವರದಿ ಬರುವ ತನಕ ಅಧಿಕಾರಿಗಳು ಏಕೆ ನಿರ್ಲಕ್ಷ್ಯ ವಹಿಸಿದ್ದರು ಎಂಬುದು ಜನರ ಪ್ರಶ್ನೆಯಾಗಿದೆ.ಪಟ್ಟಣದ ಕೆಲ ಪಾರ್ಕ್ಗಳನ್ನು ಪುರಸಭೆ ನೂತನ ಮುಖ್ಯಾಧಿಕಾರಿ ಎಸ್.ಶರವಣ ವೀಕ್ಷಿಸಿ ಪಾರ್ಕ್ ಅನ್ನು ಮೊದಲು ಸ್ವಚ್ಛ ಮಾಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಶನಿವಾರ ಬೆಳಗ್ಗೆ ಪಟ್ಟಣದ ಕೆಲ ವಾರ್ಡ್ನ ಪಾರ್ಕ್ಗೆ ತೆರಳಿ ಪರಿಶೀಲನೆ ನಡೆಸಿದ ಬಳಿಕ ಪಾರ್ಕ್ ಸ್ವಚ್ಛತೆ ಬಳಿಕ ಪಾರ್ಕ್ಗೆ ಬರುವ ಸಾರ್ವಜನಿಕರಿಗೆ ಕೂರಲು ಆಸನದ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ.