ಹೊಸೂರಿನಲ್ಲಿ ವಕೀಲ ಕೊಲೆ: ಜಿಲ್ಲಾ ನ್ಯಾಯವಾದಿಗಳ ಖಂಡನೆ

KannadaprabhaNewsNetwork |  
Published : Nov 22, 2024, 01:18 AM IST
ಕ್ಯಾಪ್ಷನ 21ಕೆಡಿವಿಜಿ42, 43 ಹೊಸೂರಿನಲ್ಲಿ ಹಾಡುಹಗಲೇ ನಡೆದ ವಕೀಲ ಕಣ್ಣನ ಅವರ ಕೊಲೆಯನ್ನು ಖಂಡಿಸಿ ದಾವಣಗೆರೆಯಲ್ಲಿ ಜಿಲ್ಲಾ ವಕೀಲರ ಸಂಘದಿಂದ ವಕೀಲರು ಬೃಹತ್ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ಬುಧವಾರ ಹಾಡುಹಗಲೇ ವಕೀಲ ಕಣ್ಣನ ಕೊಲೆ ಮಾಡಿರುವ ಘಟನೆ ಖಂಡಿಸಿ ಗುರುವಾರ ಜಿಲ್ಲಾ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ, ದಾವಣಗೆರೆ

ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ಬುಧವಾರ ಹಾಡುಹಗಲೇ ವಕೀಲ ಕಣ್ಣನ ಕೊಲೆ ಮಾಡಿರುವ ಘಟನೆ ಖಂಡಿಸಿ ಗುರುವಾರ ಜಿಲ್ಲಾ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲಾ ಕೋರ್ಟ್‌ ಆವರಣಲ್ಲಿ ಸಭೆ ಸೇರಿದ ವಕೀಲರು ಘಟನೆ ವಿರುದ್ಧ ಮಾನವ ಸರಪಳಿ ರಚಿಸಿ ಖಂಡಿಸಿದರು. ಹಾಡಹಗಲೇ ನಡೆದ ಘಟನೆಯಿಂದ ವಕೀಲರು ಭಯದಲ್ಲಿ ನ್ಯಾಯಾಲಯಗಳಲ್ಲಿ ಹಾಜರಾಗುವಂತಾಗಿದೆ. ಹಲ್ಲೆಗೈದವರ ವಿರುದ್ಧ ಹಾಗೂ ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ, ಗೃಹ ಸಚಿವರು, ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು ವಕೀಲರಿಗೆ ಸೂಕ್ತ ಭದ್ರತೆ ಒದಗಿಸಿಕೊಡಬೇಕೆಂದು ಒತ್ತಾಯಿಸಿ ಡಿಸಿ ಕಚೇರಿ ಮೂಲಕ ಮನವಿ ಸಲ್ಲಿಸಲಾಯಿತು.

ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಎಲ್.ಎಚ್.ಅರುಣಕುಮಾರ, ಕಾರ್ಯದರ್ಶಿ ಎಸ್.ಬಸವರಾಜ, ಉಪಾಧ್ಯಕ್ಷ ಜಿ.ಕೆ.ಬಸವರಾಜ ಗೋಪನಾಳ್, ಎಸ್.ಬಸವರಾಜ, ಸಹ ಕಾರ್ಯದರ್ಶಿ ಎ.ಎಸ್.ಮಂಜುನಾಥ್, ಬಿ.ಅಜ್ಜಯ್ಯ ಆವರಗೆರೆ ಇತರರು ಭಾಗವಹಿಸಿದ್ದರು.

- - -

-21ಕೆಡಿವಿಜಿ42, 43:

ಹೊಸೂರಿನಲ್ಲಿ ಹಾಡುಹಗಲೇ ನಡೆದ ವಕೀಲ ಕಣ್ಣನ್ ಕೊಲೆ ಖಂಡಿಸಿ ದಾವಣಗೆರೆಯಲ್ಲಿ ಜಿಲ್ಲಾ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!