ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ರಾಜು ತನ್ನ ತಾಯಿಯೊಂದಿಗೆ ಇಲ್ಲಿನ ಉದಯನಗರದಲ್ಲಿ ವಾಸವಾಗಿದ್ದಾನೆ. ಆಟೋ ಚಾಲಕನಾಗಿದ್ದ ಪವನ ಕುಟುಂಬದವರೊಂದಿಗೆ ಜಗಳ ಮಾಡಿಕೊಂಡು ನಾಲ್ಕು ತಿಂಗಳ ಹಿಂದೆ, ಚಂದ್ರನಾಥ ನಗರದಲ್ಲಿ ಮನೆ ಬಾಡಿಗೆ ಪಡೆದು ವಾಸವಾಗಿದ್ದ. ಹಣದ ವಿಚಾರವಾಗಿ ಪವನ ತಾಯಿಯೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ. ಮಂಗಳವಾರವೂ ಜಗಳ ನಡೆದಿದ್ದು, ಬಳಿಕ ಆತ ಮನೆಗೆ ಹೋಗಿ ಮಲಗಿದ್ದ. ರಾತ್ರಿ ಅವರ ಮನೆಗೆ ಹೋಗಿದ್ದ ರಾಜು ಮತ್ತು ಪವನ ನಡುವೆ ಮತ್ತೆ ಜಗಳವಾಗಿದೆ. ಅದು ವಿಕೋಪಕ್ಕೆ ಹೋಗಿ ಆತ ಚಾಕುವಿನಿಂದ ಇರಿದಿದ್ದಾನೆ. ಪವನ ಸ್ಥಳದಲ್ಲೇ ಸಾವನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.