ಕನ್ನಡಪ್ರಭವಾರ್ತೆ ನಾಪೋಕ್ಲು
ಮಡಿಕೇರಿ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ, ಬಳಕೆಯಲ್ಲಿರುವ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ಚಿತ್ರ ಸಮೇತ ಪಿಪಿಟಿ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ತೋರಿಸಿಕೊಟ್ಟರು. ವಿದ್ಯಾರ್ಥಿಗಳು ಪೊಲೀಸ್ ವ್ಯವಸ್ಥೆಯ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಉತ್ತರಿಸಿದವರಿಗೆ ಪೊಲೀಸ್ ಇಲಾಖೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲ ಕಲ್ಪನಾ ಸಾಮ್ರಾಟ್ ಮಾತನಾಡಿದರು. ಕಾಲೇಜಿನ ಮಾದಕ ದ್ರವ್ಯ ನಿಷೇಧದಳದ ಅಧಿಕಾರಿ ವಿಲ್ಮಾ ನಿರೂಪಿಸಿದರು.