ಕನ್ನಡಪ್ರಭ ವಾರ್ತೆ ಮೂರ್ನಾಡು
ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ೧೬ನೇ ವರ್ಷದ ಓಣಂ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಹಿಂದೂ ಸಮಾಜದವರುತಮ್ಮ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿದಾಗ ಮಾತ್ರ ಸಮಾಜ ಗಟ್ಟಿಗೊಳ್ಳುತ್ತದೆ. ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊoಡಾಗ ದೇಶವೂ ಅಭಿವೃದ್ಧಿ ಹೊಂದುತ್ತದೆ. ಸಮಾಜ ಕಟ್ಟುವುದೊಂದಿಗೆ ದೇಶ ಕಟ್ಟುವ ಕೆಲಸ ಮಾಡಬೇಕು. ಒಗ್ಗಟ್ಟು ಪ್ರದರ್ಶಿಸಿ ಆರ್ಥಿಕವಾಗಿ ಸಬಲರಾಗುವಂತೆ ಪ್ರಯತ್ನಶೀಲರಾಗಬೇಕು ಎಂದರು.
ಶಶಿಕುಮಾರ್, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣ, ಮಡಿಕೇರಿ ಹಿಂದೂ ಮಲಯಾಳಿ ಸಂಘದ ಸಲಹಾ ಸಮಿತಿ ಅಧ್ಯಕ್ಷ ವಾಸುದೇವನ್, ವಿರಾಜಪೇಟೆ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ವಿನುತ್, ಒಂಟಿಯಂಗಡಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ನಂದಕುಮಾರ್, ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್, ಸೋಮವಾರಪೇಟೆ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಪ್ರಕಾಶ್, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಪಿ. ರವೀಂದ್ರನ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ. ಹಂಸ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿ ಉಪಾಧ್ಯಕ್ಷ ಟಿ.ಕೆ. ಸುಧೀರ್, ಮೂರ್ನಾಡು
ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು
ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ಮೂರ್ನಾಡಿನ ಕಿಶೋರ್ ಚಿನ್ನ ಪ್ರಥಮ ಸ್ಥಾನ ಗಳಿಸಿದರು. ಕಬಡಕೇರಿಯ ಜಿತಿನ್ ದ್ವಿತೀಯ ಹಾಗೂ ಪಾಲೆಮಾಡಿನ ಸುನೀತಾ ರಾಜನ್ ತೃತೀಯ ಬಹುಮಾನ ಪಡೆದರು.
ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ರಂಗೋಲಿ
ಗೋಪಿ, ಸುಜಾತಾ ಗೋಪಿ ಪ್ರಾರ್ಥಿಸಿದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿ ಉಪಾಧ್ಯಕ್ಷ ಟಿ.ಕೆ. ಸುಧೀರ್ ಸ್ವಾಗತಿಸಿದರು. ಸಜೀವ ನಿರೂಪಿಸಿದರು. ಟಿ. ಸಂತೋಷ್ ಕುಮಾರ್ ವಂದಿಸಿದರು.