ಪ್ರೀತಮ್ ಸಂಗೀತ, ಗಾಯನಕ್ಕೆ ಯುವ ಸಮೂಹ ಫಿದಾ

KannadaprabhaNewsNetwork |  
Published : Sep 25, 2025, 01:00 AM IST
86 | Kannada Prabha

ಸಾರಾಂಶ

ಕನ್ನಡದ ಸುದೀಪ್ ನಟನೆಯ ಎಕ್ಕ ಸಕ್ಕ ಎಕ್ಕ ಸಕ್ಕ ಹಾಡು ಹಾಡುತ್ತಿದ್ದಂತೆ ಇಡೀ ಪ್ರೇಕ್ಷಕರು ಎದ್ದು ಡ್ಯಾನ್ಸ್ ಮಾಡಿದರು.

ಕನ್ನಡಪ್ರಭ ವಾರ್ತೆ ಮೈಸೂರುಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ, ಗಾಯಕ ಪ್ರೀತಮ್ ಚಕ್ರವರ್ತಿ ಗಾನಸುಧೆಗೆ ಮೈಸೂರು ಜನತೆ ಫಿದಾ ಆಗಿ ಕುಣಿದು ಕುಪ್ಪಳಿಸಿದರು.ನಗರದ ಉತ್ತನಹಳ್ಳಿ ಬಳಿಯ ಮೈದಾನದಲ್ಲಿ ಆಯೋಜಿಸಿರುವ ಯುವ ದಸರೆಯಲ್ಲಿ ಬುಧವಾರ ರಾತ್ರಿ ಪ್ರೀತಮ್ ವೇದಿಕೆಗೆ ಬರುತ್ತಿದ್ದಂತೆ ಯುವ ಸಮೂಹ ಶಿಳ್ಳೆ ಚಪ್ಪಾಳೆ ಮೂಲಕ ಸ್ವಾಗಿತಿಸಿದರು.ಯುವ ಸಮೂಹದ ಹರ್ಷ ನೋಡಿದ ಗಾಯಕ ಪ್ರೀತಮ್, ಹೇ ದಿಲ್ ಹೇ ಮುಸ್ಕಿಲ್, ಥೂ ಮೇರಿ ಸನಮ್, ಥುಮ್ ಜೋ ಆಯೆ, ಅಭಿ ಕುಚ್ ದೇನೆ, ಹಲ್ಕಾ ಹಲ್ಕಾ ಹೇ ಸಮಾ, ಬಿನ್ ತೇರಿ ಸೇರಿದಂತೆ ತಮ್ಮ ಹಲವು ಹಿಂದಿ ಹಿಟ್ ಚಿತ್ರಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು.ಇದಲ್ಲದೆ ಕನ್ನಡದ ಸುದೀಪ್ ನಟನೆಯ ಎಕ್ಕ ಸಕ್ಕ ಎಕ್ಕ ಸಕ್ಕ ಹಾಡು ಹಾಡುತ್ತಿದ್ದಂತೆ ಇಡೀ ಪ್ರೇಕ್ಷಕರು ಎದ್ದು ಡ್ಯಾನ್ಸ್ ಮಾಡಿದರು. ಇದಕ್ಕೂ ಮುನ್ನ ಬಾಲಿವುಡ್ ಶೋರ್ ಪೊಲೀಸ್ ಗಾಯಕರ ತಂಡ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ತೊಬ್ ತೋಬ, ಊರ್ವಶಿ ಊರ್ವಶಿ ಹಾಗೂ ಇನ್ನಿತರ ಹಿಂದಿ ಗೀತೆಗಳನ್ನು ಹಾಡಿ ಯುವ ದಸರಾ ವೇದಿಕೆಯಲ್ಲಿ ಮೋಡಿ ಮಾಡಿದರು. ಸಿಎಂ, ಡಿಸಿಎಂಗೆ ಸನ್ಮಾನಯುವ ದಸರಾ ವೇದಿಕೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ಭೈರತಿ ಸುರೇಶ್ ಅವರಿಗೆ ಯುವ ದಸರಾ ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಸಂಸದ ಸುನೀಲ್ ಬೋಸ್, ವಿಧಾನಪರಿಷತ್ತು ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಡಾ.ಕೆ. ಶಿವಕುಮಾರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ