ಕೊಂಕಣಿಗರಿಗೆ ಸಂಗೀತ ರಕ್ತಗತ: ದಿನೇಶ್ ಗುಂಡೂರಾವ್‌

KannadaprabhaNewsNetwork |  
Published : Apr 13, 2026, 02:30 AM IST
ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಲಾಂಛನ ಅನಾವರಣಗೊಳಿಸುತ್ತಿರುವ ಸಚಿವ ದಿನೇಶ್ ಗುಂಡೂರಾವ್  | Kannada Prabha

ಸಾರಾಂಶ

ಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು ಸಾವಿರ ಗಾಯಕರು ಮತ್ತು ಐದು ಸಾವಿರ ಹಾಡುಗಳಿಂದ ಹೊಸ ವಿಶ್ವ ದಾಖಲೆಯನ್ನು ರಚಿಸಲು ಸಜ್ಜಾಗಿದೆ.

ಮಂಗಳೂರು: ಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು ಸಾವಿರ ಗಾಯಕರು ಮತ್ತು ಐದು ಸಾವಿರ ಹಾಡುಗಳಿಂದ ಹೊಸ ವಿಶ್ವ ದಾಖಲೆಯನ್ನು ರಚಿಸಲು ಸಜ್ಜಾಗಿದೆ. ಖಂಡಿತಾ ಈ ದಾಖಲೆ ಆಗಲಿದೆ ಎಂಬ ವಿಶ್ವಾಸವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಕೊಂಕಣಿಯ ಪ್ರಮುಖ ಸಾಂಸೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಅಸ್ತಿತ್ವದ ಮಾಣಿಕ್ಯ ಮಹೋತ್ಸವ ಆಚರಣಾ ಸಂದರ್ಭದಲ್ಲಿ ನ. 3ರಿಂದ 15ರವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತವನ್ನು ವೀಣೆಯ ಪ್ರತಿಕೃತಿ ಮೇಲಿರುವ 12 ವಿಭಿನ್ನ ರಂಗಿನ ದೀಪಗಳನ್ನು ಬೆಳಗಿಸಿ ಮತ್ತು ಹೂವಿನ ಮೊಗ್ಗಿನಿಂದ ಸಮಾವೇಶದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು.ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಸಂಗೀತ ನಿರ್ದೇಶಕ ಜೊಯೆಲ್ ಪಿರೇರಾಗೆ ಸಂಗೀತ ಬೇಟನ್ ಹಸ್ತಾಂತರಿಸಿ ಮಾತನಾಡಿ, ಮಹಾನ್ ಸಾಧನೆ ಮಾಡಿದ ಮಾಂಡ್ ಸೊಭಾಣ್ ಸಂಸ್ಥೆಗೆ ಇದುವರೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಿಲ್ಲ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು. ಕೊಂಕಣಿಯ ಕೀರ್ತಿ ಬಾವುಟವನ್ನು ಸದಾಕಾಲ ಹಾರಿಸುವ ಸಂಸ್ಥೆಯ ಈ ಕಾರ್ಯಕ್ರಮಕ್ಕೆ ಸರ್ಕಾರ ಅನುದಾನ ನೀಡಬೇಕು. ಈ ದಾಖಲೆಯೂ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಗೋವಾದ ಕಲಾವಿದ ಮೈಕಲ್ ಗ್ರೇಶಿಯಸ್ ಶುಭ ಹಾರೈಸಿದರು.ಅಕಾಡೆಮಿ ಅಧ್ಯಕ್ಷ ಲುವಿ ಪಿಂಟೊ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಂಕಣಿ ಸಂಗೀತಕ್ಕೆ ಮಹೋನ್ನತ ಹಿರಿಮೆ ತಂದು ಕೊಟ್ಟ ಎರಿಕ್ ಒಝೇರಿಯೊರ ಕೆಲಸಗಳನ್ನು ಮುಂದುವರಿಸುವುದೇ ನಾವು ಅವರಿಗೆ ಸಲ್ಲಿಸುವ ನೈಜ ಶ್ರದ್ಧಾಂಜಲಿ. ಇದು ಕೇವಲ ಗಿನ್ನೆಸ್ ದಾಖಲೆಯ ಪ್ರಯತ್ನವಾಗದೆ, ಕೊಂಕಣಿ ಒಗ್ಗಟ್ಟನ್ನು ಆಚರಿಸುವ, ಕೊಂಕಣಿ ಬಾವುಟವನ್ನು ಜಗದೆತ್ತರಕ್ಕೆ ಏರಿಸುವ ಹಾಗೂ ಈ ಮೂಲಕ ಕೊಂಕಣಿ ಸಂಗೀತದ ಶ್ರೀಮಂತ ಪರಂಪರೆಯನ್ನು ಸಂಭ್ರಮಿಸುವ ಅವಕಾಶವಾಗಲಿದೆ ಎಂದು ಹೇಳಿದರು. ಗಾಯಕಿ ಜೊಯ್ಸ್ ಒಝೇರಿಯೊರನ್ನು ಗೌರವಿಸಲಾಯಿತು.

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಸಂಘಟಕ ಸ್ಟ್ಯಾನಿ ಆಲ್ವಾರಿಸ್ ಮತ್ತು ಕಾರ್ಯದರ್ಶಿ ರೊನಾಲ್ಡ್ ಕ್ರಾಸ್ತಾ ಇದ್ದರು. ರೈನಾ ಸಿಕ್ವೇರಾ ನೇತೃತ್ವದಲ್ಲಿ ಸುಮೇಳ್ ತಂಡದಿಂದ ಗಾಯನ ನಡೆಯಿತು. ಮಾಂಡ್ ಸೊಭಾಣ್ ನಡೆದು ಬಂದ ಹಾದಿಯ ಬಗ್ಗೆ ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು. ಕಲಾಂಗಣ ಪಿರ್ಜೆಂತ್ ರೊಯ್ ಕ್ಯಾಸ್ತೆಲಿನೊ ವಂದಿಸಿದರು. ಐರಿನ್ ರೆಬೆಲ್ಲೊ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು
ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರಿಡಿ