ಇಂದು ಪಂ.ಓಂಕಾರ್ ಗುಲ್ವಾಡಿಗೆ ಸಂಗೀತ ಸನ್ಮಾನ

KannadaprabhaNewsNetwork |  
Published : Apr 13, 2025, 02:11 AM IST
ಪಂ.ಓಂಕಾರ್‌ ಗುಲ್ವಾಡಿ | Kannada Prabha

ಸಾರಾಂಶ

ಮಂಗಳೂರಿನ ಯುವ ಸಿತಾರ್ ಕಲಾವಿದ ಅಂಕುಶ್ ನಾಯಕ್ ಹಾಗೂ ಯುವ ಬಾನ್ಸುರಿ ಕಲಾವಿದ ಕಾರ್ತಿಕ್ ಭಟ್ ಅವರ ಸಿತಾರ್- ಬಾನ್ಸುರಿ ಜುಗಲ್‌ಬಂದಿ ಕಛೇರಿಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಯುವ ತಬಲಾ ಕಲಾವಿದ ಹೇಮಂತ್ ಜೋಷಿ ಸಾಥ್ ನೀಡಲಿದ್ದಾರೆ

ಕನ್ನಡಪ್ರಭ ವಾರ್ತೆ ಮಂಗಳೂರು

ಸಪ್ತಕ ಬೆಂಗಳೂರು, ಚಿರಂತನ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ಹಾಗೂ ಶ್ರೀ ರಾಮಕೃಷ್ಣ ಮಠ ಮಂಗಳೂರು ವತಿಯಿಂದ ಹಿರಿಯ ತಬಲಾ ಕಲಾವಿದ ಪಂ.ಓಂಕಾರ್ ಗುಲ್ವಾಡಿ ಅವರ 80ನೇ ಜನ್ಮ ಸಂವತ್ಸರ ಆಚರಣೆಯ ಸಂಭ್ರಮ ಹಾಗೂ ಸಂಗೀತ ಸನ್ಮಾನ ಕಾರ್ಯಕ್ರಮ ಏ.13ರಂದು ಸಂಜೆ 5ಕ್ಕೆ ನಗರದ ರಾಮಕೃಷ್ಣ ಮಠದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರಿನ ಯುವ ಸಿತಾರ್ ಕಲಾವಿದ ಅಂಕುಶ್ ನಾಯಕ್ ಹಾಗೂ ಯುವ ಬಾನ್ಸುರಿ ಕಲಾವಿದ ಕಾರ್ತಿಕ್ ಭಟ್ ಅವರ ಸಿತಾರ್- ಬಾನ್ಸುರಿ ಜುಗಲ್‌ಬಂದಿ ಕಛೇರಿಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಯುವ ತಬಲಾ ಕಲಾವಿದ ಹೇಮಂತ್ ಜೋಷಿ ಸಾಥ್ ನೀಡಲಿದ್ದಾರೆ ಎಂದು ಚಿರಂತನ ಚಾರಿಟೇಬಲ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಭಾರವಿ ದೇರಾಜೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೂಲತಃ ಮಂಗಳೂರಿನವರಾದ ಪಂ.ಓಂಕಾರ್ ಗುಲ್ವಾಡಿ ಅವರಿಗೆ ಗೌರವಾರ್ಪಣಾ ಕಾರ್ಯಕ್ರಮ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಂಗಳೂರಿನಲ್ಲಿ ಶಾಸೀಯ ಸಂಗೀತದ ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಸಂಸ್ಥೆಗಳಾದ ಸಂಗೀತ್ ಭಾರತಿ ಫೌಂಡೇಶನ್, ಸ್ವರಾನಂದ್ ಪ್ರತಿಷ್ಠಾನ, ಸುರಭಿ, ಕಲಾಸಾಧನಾ, ಅಕಾಡೆಮಿ ಆಫ್‌ ಹಿಂದುಸ್ಥಾನಿ ಮ್ಯೂಸಿಕ್, ಅಭಿನವ ಸ್ವರಶಾಲಾ, ಧ್ಯಾನ್ ಸಂಗೀತ್ ಅಕಾಡೆಮಿ, ನಾರಾಯಣಿ ಸಂಗೀತ ಕಲಾಕೇಂದ್ರ, ಕಲಾ ಕೋಸ್ಟ್, ಮ್ಯಾಕ್ಸ್ ಮೀಡಿಯಾ ಸಂಸ್ಥೆಗಳು ಪಂ.ಓಂಕಾರ್ ಗುಲ್ವಾಡಿ ಅವರನ್ನು ಸನ್ಮಾನಿಸಲಿವೆ ಎಂದು ಅವರು ತಿಳಿಸಿದರು.ಸನ್ಮಾನ ಕಾರ್ಯಕ್ರಮದ ಬಳಿಕ ಪಂ.ವೆಂಕಟೇಶ್ ಕುಮಾರ್ ಧಾರವಾಡ ಅವರ ಶಾಸೀಯ ಸಂಗೀತ ಕಛೇರಿ ನಡೆಯಲಿದೆ. ಪಂ. ಓಂಕಾರ್ ಗುಲ್ವಾಡಿ ಅವರು ತಬಲಾ ಹಾಗೂ ಪಂ. ಸುಧೀರ್ ನಾಯಕ್ ಸಂವಾದಿನಿಯಲ್ಲಿ ಸಾಥ್ ನೀಡಲಿದ್ದಾರೆ ಎಂದರು.

ಧ್ಯಾನ್ ಸಂಗೀತ್ ಅಕಾಡೆಮಿ ಸ್ಥಾಪಕ, ಗುರು ಅಮಿತ್ ಕುಮಾರ್ ಬೆಂಗ್ರೆ ಸುದ್ದಿಗೋಷ್ಠಿಯಲ್ಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾನೂನಿನ ಜ್ಞಾನ ಪಡೆಯುವುದು ಅರಣ್ಯವಾಸಿಯ ಮೂಲಭೂತ ಕರ್ತವ್ಯ: ರಂಜಿತಾ
ನೋಂದಾಯಿಸಿದ ಎಲ್ಲ ರೈತರ ಮೆಕ್ಕೆಜೋಳ ಖರೀದಿ: ಸೋಮಣ್ಣ ಉಪನಾಳ