ಕನ್ನಡಪ್ರಭ ವಾರ್ತೆ ಕುಶಾಲನಗರ
ಮತ್ತೊಬ್ಬ ಅತಿಥಿ ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್ ಮಾತನಾಡಿ, ಗುಂಡುರಾವ್ ಬಡಾವಣೆ ಮೈದಾನವನ್ನು ಒಳಾಂಗಣ ಹಾಗೂ ಹೊರಾಂಗಣ ಸ್ಟೇಡಿಯಂ ಮತ್ತು ತರಬೇತಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ದೂರದೃಷ್ಟಿ ಹೊಂದಿದ್ದು, ಸಚಿವ ದಿನೇಶ್ ಗುಂಡುರಾವ್ ಅವರ ಮೂಲಕ ಕೇಂದ್ರ ಸರ್ಕಾರದ ಸಹಕಾರ ಪಡೆಯುವ ಚಿಂತನೆ ನಡೆಸಿದ್ದಾರೆ ಎಂದರು.ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್, ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಗೌರವಾಧ್ಯಕ್ಷ ಇಸ್ಮಾಯಿಲ್, ಕುಶಾಲನಗರ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಗರಾಧ್ಯಕ್ಷ ಎಂ.ಜೆ. ಇರ್ಫಾನ್, ಸುಂಟಿಕೊಪ್ಪದ ನಿಯಾಜ್ ಮಾತನಾಡಿದರು.
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಕುಶಾಲನಗರ ಜಾಮಿಯಾ ಮಸೀದಿ ಅಧ್ಯಕ್ಷ ಮೆಹತಾಬ್ ಅಹಮ್ಮದ್, ದಾನಿ ಅಂಜದ್, ಗರಗಂದೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಮುಸ್ತಾಫ, ಪ್ರಮುಖರಾದ ಫೈಸಲ್ ಇ ಪಾಯದತ್ ಉಪಸ್ಥಿತರಿದ್ದರು.ಟ್ರಸ್ಟ್ ಉಪಾಧ್ಯಕ್ಷ ಅಬ್ದುಲ್ ರಜಾಕ್ ಕೆ.ಎ., ಪ್ರಧಾನ ಕಾರ್ಯದರ್ಶಿ ಎಸ್. ಆದಂ, ಖಜಾಂಚಿ ಕೆ.ಎಂ. ಮುಜೀಬ್, ಕಾನೂನು ಸಲಹೆಗಾರ ಸುಫಿಯಾನ ಎಂ.ಎಂ., ನಿರ್ದೇಶಕರಾದ ಹ್ಯಾರಿಸ್ ಎನ್.ಪಿ., ರಜಾಕ್ ಎಂ.ಕೆ., ಅಶ್ರಫ್ ಪಿ.ಎ., ಬಾಷಾ ಎಂ.ಎಸ್., ಆರೀಸ್ ಎಂ.ಎಂ., ಅನೀಸ್, ಆತಿಫ್ ಮುನ್ನ ಮತ್ತಿತರರು ಇದ್ದರು. 7 ದಿನಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ 50ಕ್ಕೂ ಅಧಿಕ ತಂಡಗಳು ಭಾಗವಹಿಸಲಿವೆ.