ಕನ್ನಡಪ್ರಭ ವಾರ್ತೆ ಮಂಗಳೂರು
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡದಂತೆ ರಾಜ್ಯ ಉಚ್ಚ ನ್ಯಾಯಾಲಯ ಸೂಚನೆ ನೀಡಿದ್ದರೂ, ಹೆದ್ದಾರಿಯಲ್ಲಿ ಕಿಕ್ಕಿರಿದು ಸೇರಿದ್ದ ಜನಸಮೂಹದಿಂದಾಗಿ ಸುಮಾರು ಎರಡೂವರೆ ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಕ್ಷರಶಃ ಸ್ತಬ್ಧವಾಗಿತ್ತು.
ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡೇ ಇರುವ ಅಡ್ಯಾರ್ ಷಾ ಗಾರ್ಡನ್ನಲ್ಲಿ ಸಾಗರೋಪಾದಿಯಲ್ಲಿ ಜನಸಮೂಹ ಸೇರಿದ್ದು, ಮೈದಾನದಲ್ಲಿ ಜಾಗವಿಲ್ಲದೆ ಹೆದ್ದಾರಿಯಲ್ಲೂ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಯಿಸಿದ್ದರು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.ಕೇವಲ ಧರ್ಮಗುರುಗಳ ನೇತೃತ್ವ:
ಕಾಯ್ದೆ ಜಾರಿಗೆ ಬಿಡಲ್ಲ:
ಬುಲ್ಡೋಜ್ ಮಾಡುವ ತಂತ್ರ:
ಮೇ 5ರವರೆಗೆ ವಕ್ಫ್ ಕುರಿತು ಸುಪ್ರೀಂ ಕೋರ್ಟ್ ಆದೇಶ ಬರುವವರೆಗೆ ನಮ್ಮ ಘೋಷಣೆ ನಿಲ್ಲೋದಿಲ್ಲ. ದೇಶದ ಜಾತ್ಯತೀತ ಸೌಧವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುತ್ತದೆ ಎಂಬ ಬಲವಾದ ವಿಶ್ವಾಸ ನಮ್ಮಲ್ಲಿದೆ. ವಕ್ಫ್ ಆಸ್ತಿಯಲ್ಲಿ ಯಾವುದೇ ಹಿಂದೂಗಳ, ರೈತರ ಭೂಮಿ ಇಲ್ಲ. ರಾಜ್ಯ ವಕ್ಫ್ ಮಂಡಳಿ ಎಂದೂ ಇತರ ಧರ್ಮೀಯರ ಜಾಗವನ್ನು ಮುಟ್ಟಲ್ಲ. ಗಾಂಧೀಜಿ, ಅಂಬೇಡ್ಕರ್ ಅವರ ಭಾರತದಲ್ಲಿ ವಕ್ಫ್ ಆಸ್ತಿ ಕಬಳಿಸಲು ಬಿಡುವ ಮಾತೇ ಇಲ್ಲ ಎಂದರು.
ಧರ್ಮಗುರು ಅಬ್ದುಲ್ ರಶೀದ್ ಝೈನಿ ಮಾತನಾಡಿ, ದೇಶ ಗಂಡಾಂತರ ಎದುರಿಸಿದಾಗೆಲ್ಲ ಉಲೆಮಾಗಳು ಹೋರಾಟ ಮಾಡಿದ್ದಾರೆ, ಸ್ವಾತಂತ್ರ್ಯ ಹೋರಾಟದಲ್ಲೂ ಉಲೆಮಾಗಳು ಸಮರ ಸಾರಿದ್ದರು. ಇದೀಗ ಮತ್ತೆ ಅಂಥ ಕಾಲ ಬಂದಿದೆ. ಎಲ್ಲೆಡೆ ಮುಸ್ಲಿಂ ಫೋಬಿಯಾ ಹರಡಲಾಗುತ್ತಿದೆ. ಮುಸಲ್ಮಾನರನ್ನು ಈ ದೇಶದಿಂದ ಇಲ್ಲವಾಗಿಸಲು ನಿಮಗೆ ಎಂದೂ ಸಾಧ್ಯವಿಲ್ಲ. ಎಲ್ಲ ಜಾತ್ಯತೀತರು ಒಗ್ಗಟ್ಟಾಗಿ ನಿಮ್ಮನ್ನು ಸಮುದ್ರಕ್ಕೆ ಎಸೆಯುವ ದಿನ ದೂರವಿಲ್ಲ ಎಂದು ಹೇಳಿದರು.
ಸಮಿತಿಯ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿ, ನಮ್ಮ ಈ ಹೋರಾಟವನ್ನು ಯಾರಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ. ಕಾಯ್ದೆಯನ್ನು ಹಿಂಪಡೆಯುವವರೆಗೆ ಹೋರಾಟ ಸಾಗಲಿದೆ. ಅವರ ಸಂಚನ್ನು ಸೋಲಿಸಲು ನಮಗೆ ತಾಕತ್ತಿದೆ. ಮುಸಲ್ಮಾನರನ್ನು 2ನೇ ದರ್ಜೆಯ ಪ್ರಜೆಗಳನ್ನಾಗಿ ಮಾಡುವ ನಿಮ್ಮ ಕನಸು ನನಸಾಗಲ್ಲ. ಸಂವಿಧಾನವನ್ನು ದುರ್ಬಲಗೊಳಿಸಲು ಈ ಮಣ್ಣಲ್ಲಿ ಯಾರೂ ಹುಟ್ಟಿಲ್ಲ. ಸಂವಿಧಾನ ಇರೋತನಕ ನಾವು ಈ ಮಣ್ಣಲ್ಲಿ ಎದ್ದು ನಿಲ್ಲುತ್ತೇವೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಸ್ತಬ್ಧ
ಪ್ರತಿಭಟನಾ ಸಮಾವೇಶಕ್ಕಾಗಿ ದ.ಕ. ಮಾತ್ರವಲ್ಲದೆ ಚಿಕ್ಕಮಗಳೂರು, ಉಡುಪಿ ಮತ್ತಿತರ ಜಿಲ್ಲೆಗಳಿಂದ ಸಹಸ್ರಾರು ಜನರು ಆಗಮಿಸಿದ್ದರು. ಸುಮಾರು 500ಕ್ಕೂ ಅಧಿಕ ಬಸ್ಸುಗಳಲ್ಲಿ ಜನರು ಬಂದಿದ್ದರು. ಪ್ರತಿಭಟನೆಗೆ ಆಗಮಿಸಿದ ಜನರ ವಾಹನಗಳು ಮತ್ತು ಇತರ ವಾಹನಗಳಿಂದಾಗಿ ಮಧ್ಯಾಹ್ನ 3 ಗಂಟೆಯ ವೇಳೆಗಾಗಲೇ ರಾ.ಹೆದ್ದಾರಿ 73ರ ಸಂಚಾರ ಹದಗೆಡಲು ಆರಂಭವಾಗಿತ್ತು. 2 ಕಿಮೀ ದೂರ ವಾಹನ ನಿಲ್ಲಿಸಿ ಪ್ರವಾಹೋಪಾದಿಯಲ್ಲಿ ಜನರು ಷಾ ಗಾರ್ಡನ್ನತ್ತ ತೆರಳುತ್ತಿದ್ದರು. 4 ಗಂಟೆ ವೇಳೆಗೆ ಹೆದ್ದಾರಿಯಲ್ಲಿ ಜನಸಾಗರವೇ ತುಂಬಿಕೊಂಡು ಸಂಪೂರ್ಣ ಸಂಚಾರ ಸ್ತಬ್ಧಗೊಂಡಿತ್ತು. ಕಿ.ಮೀ.ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಹೆದ್ದಾರಿಯ ನಡುವೆ ಯುವಕರ ಗುಂಪು ಘೋಷಣೆಗಳನ್ನು ಕೂಗತೊಡಗಿದ್ದರು. ಧರ್ಮಗುರುಗಳು, ಪೊಲೀಸ್ ಅಧಿಕಾರಿಗಳು ಈ ಕುರಿತು ಆಗಾಗ ತಿಳಿಹೇಳಿದರೂ ಯುವಕರ ಗುಂಪು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ರಾತ್ರಿ 7.30ರವರೆಗೂ ಈ ಭಾಗದಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಬಿಗಿ ಪೊಲೀಸ್ ಸರ್ಪಗಾವಲು
ಪ್ರತಿಭಟನೆ ಹಿನ್ನೆಲೆಯಲ್ಲಿ 2 ಸಾವಿರಕ್ಕೂ ಅಧಿಕ ಪೊಲೀಸ್, ಅರೆಸೇನಾಪಡೆಯ ಸರ್ಪಗಾವಲು ಹಾಕಲಾಗಿತ್ತು. 20 ಕೆಎಸ್ಸಾರ್ಪಿ ತುಕಡಿ, 20 ಶಸ್ತ್ರಾಸ್ತ್ರ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆ ಪ್ರದೇಶದಲ್ಲೇ ಸಾವಿರಕ್ಕೂ ಅಧಿಕ ಪೊಲೀಸರಿದ್ದರು. ಪ್ರತಿಭಟನಾ ಸ್ಥಳ ಮಾತ್ರವಲ್ಲದೆ, ಆಸುಪಾಸಿನ ಆಯಕಟ್ಟಿನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಬೆಳಗ್ಗಿನಿಂದಲೇ ನಗರದ ಆಯಕಟ್ಟಿನ ಜಾಗಗಳಲ್ಲಿ ಚೆಕ್ ಪೋಸ್ಟ್ ಅಳವಡಿಸಿ ತಪಾಸಣೆ ಬಿಗಿಗೊಳಿಸಲಾಗಿತ್ತು. ಐವರು ಎಸ್ಪಿ, ಮತ್ತು ಅಡಿಶನಲ್ ಎಸ್ಪಿಗಳು, 20 ಡಿವೈಎಸ್ಪಿಗಳು, 230 ಇನ್ಸ್ಪೆಕ್ಟರ್ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.