ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ನಾನು ವಿರೋಧಿಸುವುದಿಲ್ಲ : ಬಿ.ಶ್ರೀರಾಮುಲು

KannadaprabhaNewsNetwork |  
Published : Mar 09, 2025, 01:49 AM ISTUpdated : Mar 09, 2025, 11:30 AM IST
ಬಳ್ಳಾರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ಜನವಿರೋಧಿಯಾಗಿದೆ ಎಂದು ದೂರಿದರು.  | Kannada Prabha

ಸಾರಾಂಶ

ನನಗೆ ಎಲ್ಲ ಧರ್ಮಿಯರೂ ಒಂದೇ. ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿದರು.

 ಬಳ್ಳಾರಿ : ನನಗೆ ಎಲ್ಲ ಧರ್ಮಿಯರೂ ಒಂದೇ. ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ಧರ್ಮಿಯ ಮತ್ತು ಎಲ್ಲ ಜಾತಿಯವರನ್ನು ಒಂದೇ ಭಾವನೆಯಿಂದ ನೋಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ನಮಗೆ ಏನು ಕೊಟ್ಟಿಲ್ಲ ಎಂಬುದನ್ನಷ್ಟೇ ಮಾತನಾಡುತ್ತೇನೆಯೇ ಹೊರತು, ಅವರಿಗೆ ಯಾಕೆ ಕೊಟ್ಟಿರಿ ಎಂದು ಕೇಳುವುದಿಲ್ಲ. ಪಕ್ಷದ ನಿರ್ಧಾರದಂತೆ ಅಲ್ಪಸಂಖ್ಯಾತರಿಗೆ ಆದ್ಯತೆ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದೆ. ಪಕ್ಷ ವಿರೋಧಿಸಿದರೆ ಅದು ಪಕ್ಷದ ವಿಚಾರ. ಈ ಕುರಿತು ಹೆಚ್ಚು ಪ್ರತಿಕ್ರಿಯಿಸಲಾರೆ ಎಂದರಲ್ಲದೆ, ನಾನೂ ಮುಂದಿನ ದಿನಗಳಲ್ಲಿ ಚುನಾವಣೆಗೆ ತೆರಳಬೇಕಿದೆ. ಎಲ್ಲ ಸಮುದಾಯದ ಜನರ ಬಳಿ ತೆರಳಬೇಕಾಗುತ್ತದೆ ಎಂದರು.

ಸ್ವಾರ್ಥದಿಂದ ಕೂಡಿದ ಬಜೆಟ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ನ್ನು ರಾಜಕೀಯ ಸ್ವಾರ್ಥಕ್ಕಾಗಿ ಮಂಡಿಸಿದ್ದಾರೆ. ಮೊದಲ ಬಾರಿಗೆ ರಾಜ್ಯದಲ್ಲಿ ನಾಲ್ಕು ಲಕ್ಷ ಕೋಟಿಗೂ ಅಧಿಕ ಬಜೆಟ್‌ ಮಂಡಿಸಿದ ಸಿಎಂ ಅವರ ಇಡೀ ಬಜೆಟ್, ಜನಪರವಾದ ಯೋಜನೆ- ಯೋಚನೆಯಿಲ್ಲದ ಬಜೆಟ್ ಆಗಿದೆ. ಪ್ರಮುಖವಾಗಿ ಆರೋಗ್ಯ ಇಲಾಖೆ, ಕೃಷಿ, ಶಿಕ್ಷಣ, ಮೂಲ ಸೌಕರ್ಯ ಕ್ಷೇತ್ರವನ್ನು ಕಡೆಗಣಿಸಲಾಗಿದೆ ಎಂದು ಶ್ರೀರಾಮುಲು ಆರೋಪಿಸಿದರು.

₹51 ಸಾವಿರ ಕೋಟಿ ಗ್ಯಾರಂಟಿಗೆ ಮೀಸಲಿಟ್ಟಿದ್ದಾರೆ. ಆದರೆ, ನಾಲ್ಕು ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿಯ ₹900 ಕೋಟಿ ಪಿಎಫ್‌ ವಂತಿಕೆ ಕಟ್ಟುವುದನ್ನು ಸರ್ಕಾರ ನಿಲ್ಲಿಸಿದೆ. ಸಾರಿಗೆ ಸಿಬ್ಬಂದಿಯ ರಕ್ಷಣೆ, ನಿಗಮಗಳ ಅಭಿವೃದ್ಧಿಯನ್ನು ಸಂಪೂರ್ಣ ಮರೆತಿದೆ. ರಾಜ್ಯದ ಮೇಲೆ ಏಳು ಲಕ್ಷ ಕೋಟಿ ಸಾಲವಿದ್ದು, ಇದರಲ್ಲಿ ಸುಮಾರು ಒಂದು ಲಕ್ಷ ಕೋಟಿ ಸಾಲವನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿಯೇ ಆಗಿದೆ. ಈ ಮೂಲಕ ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಲಾಗಿದೆ ಎಂದು ಟೀಕಿಸಿದರು.

ಎಸ್ಸಿ-ಎಸ್ಟಿಗಳಿಗೆ ಅನ್ಯಾಯ:

ಎಸ್ಸಿ, ಎಸ್ಟಿ ಸಮುದಾಯಕ್ಕೆ ರಾಜ್ಯ ಸರ್ಕಾರ ಬಹುದೊಡ್ಡ ಅನ್ಯಾಯ ಮಾಡಿದೆ. ಈ ಬಜೆಟ್‌ನಲ್ಲಿ ₹ 15ಸಾವಿರ ಕೋಟಿ ಬಳಕೆ ಮಾಡಿದ್ದು, ಇದಕ್ಕೆ ಯಾವ ಕಾನೂನಿನಲ್ಲಿ ಅವಕಾಶವಿದೆ ಎಂದು ಪ್ರಶ್ನಿಸಿದರು.

ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ವಿದ್ಯಾರ್ಥಿ ವೇತನವಿಲ್ಲ. ಬಜೆಟ್‌ನಲ್ಲಿ ಎಸ್ಸಿ, ಎಸ್ಟಿ ಹಣ ಮೀಸಲಿಡದೇ ಅದೇ ಸಮುದಾಯದ ಹಣ ಪಡೆಯಲಾಗುತ್ತದೆ. ಹೀಗಾಗಿ, 7ಸಿ ಕಾನೂನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ರಾಹುಲ್‌ ಗಾಂಧಿ ಅವರು ಬಳ್ಳಾರಿಗೆ ಪಾದಯಾತ್ರೆ ಮೂಲಕ ಆಗಮಿಸಿದ ವೇಳೆ ಜೀನ್ಸ್ ಅಪೆರಲ್‌ ಪಾರ್ಕ್‌ ಸ್ಥಾಪನೆ ಭರವಸೆ ನೀಡಿದ್ದರು. ಆದರೆ, ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕನ ಮಾತಿಗೆ ಬೆಲೆ ಇಲ್ಲದಂತಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ವ್‌ ಗೇಟ್‌ ಅಳವಡಿಕೆಗೆ ಸಂಬಂಧಿಸಿದಂತೆ ಯಾವುದೇ ಅನುದಾನವನ್ನು ಮೀಸಲಿಟ್ಟಿಲ್ಲ. ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗೆ ಆದ್ಯತೆ ನೀಡಿಲ್ಲ ಎಂದು ದೂರಿದರು.

ಬೆಂಗಳೂರಿನಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಲಾಗಲಿಲ್ಲ. ಜನಾರ್ದನ ರೆಡ್ಡಿ ಶಾಸಕರು, ಹೀಗಾಗಿ ಭೇಟಿ ಮಾಡಿರಬಹುದು. ಹೈಕಮಾಂಡ್‌ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಂದಿನ ದಿನಗಳಲ್ಲಿ ಭೇಟಿಯಾಗುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಬುಡಾ ಮಾಜಿ ಅಧ್ಯಕ್ಷ ಪಿ.ಪಾಲಣ್ಣ, ಮುಖಂಡ ಗುರುಲಿಂಗನಗೌಡ, ಪಾಲಿಕೆ ಸದಸ್ಯ ಗೋವಿಂದರಾಜುಲು, ಗುಡಿಗಂಟಿ ಹನುಮಂತಪ್ಪ, ವೇಮಣ್ಣ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ