ಮಿಡಲ್.. ಕುಟುಂಬ ರಾಜಕಾರಣ ಕೊನೆಗಾಣಿಸಲು ನನ್ನ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ

KannadaprabhaNewsNetwork |  
Published : Mar 30, 2024, 12:52 AM IST
ಫೋಟೋ 29 ಎ, ಎನ್, ಪಿ,1 ಆನಂದಪುರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ  ಕಾರ್ಯಕರ್ತರನ್ನು ಭೇಟಿ ಮಾಡಿದರು. | Kannada Prabha

ಸಾರಾಂಶ

ಹೊಂದಾಣಿಕೆ ರಾಜಕಾರಣ ಹಾಗೂ ಕುಟುಂಬ ರಾಜಕಾರಣಕ್ಕೆ ಮುಕ್ತಾಯ ಹಾಡಲು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನನ್ನ ಈ ನಿಲುವಿಗೆ ಪಕ್ಷಾತೀತವಾಗಿ ಹಿಂದೂ ಸಮುದಾಯ ನನ್ನ ಬೆಂಬಲಿಸುತ್ತಿದೆ. ರಾಜ್ಯದಲ್ಲಿ ಅಸಮಾಧಾನಗೊಂಡ ಬಿಜೆಪಿ ನಾಯಕರ ಸಮಾಧಾನ ಮಾಡುವಲ್ಲಿ ರಾಜ್ಯದ ತಂಡ ಯಶಸ್ವಿಯಾಗಿದೆ ಆದರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರಿಗೆ ಯಾರು ಸಮಾಧಾನ ಮಾಡಿದರೂ ಕೇಳಲ್ಲ.

ಕನ್ನಡಪ್ರಭ ವಾರ್ತೆ ಆನಂದಪುರ

ಬಿ.ಎಸ್‌.ಯಡಿಯೂರಪ್ಪನವರ ಹೊಂದಾಣಿಕೆ ಹಾಗೂ ಕುಟುಂಬ ರಾಜಕಾರಣ ಅಂತಿಮಗೊಳಿಸಲು ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಆನಂದಪುರದಲ್ಲಿ ಶುಕ್ರವಾರ ಸಂಜೆ ಕಾರ್ಯಕರ್ತರ ಭೇಟಿಯಾಗಿ ಮಾತನಾಡಿ, ಯಡಿಯೂರಪ್ಪನವರಿಗೆ ಹೊಂದಾಣಿಕೆ ರಾಜಕಾರಣ ಹೊಸದಲ್ಲ. ರಾಜ್ಯದಲ್ಲಿ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲೂ ವರುಣ ಮತ್ತು ಶಿಕಾರಿಪುರ ಕ್ಷೇತ್ರದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಗೆಲುವು ಸಾಧಿಸಿದ್ದು, ರಾಜ್ಯದ ಜನತೆಗೆ ತಿಳಿದಿದೆ. ಈಗಲೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂದು ಆಪಾದಿಸಿದರು. ಚುನಾವಣೆಯಲ್ಲಿ ತಕ್ಕ ಉತ್ತರ:

ಇಂಥ ಹೊಂದಾಣಿಕೆ ರಾಜಕಾರಣ ಹಾಗೂ ಕುಟುಂಬ ರಾಜಕಾರಣಕ್ಕೆ ಮುಕ್ತಾಯ ಹಾಡಲು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನನ್ನ ಈ ನಿಲುವಿಗೆ ಪಕ್ಷಾತೀತವಾಗಿ ಹಿಂದೂ ಸಮುದಾಯ ನನ್ನ ಬೆಂಬಲಿಸುತ್ತಿದೆ. ರಾಜ್ಯದಲ್ಲಿ ಅಸಮಾಧಾನಗೊಂಡ ಬಿಜೆಪಿ ನಾಯಕರ ಸಮಾಧಾನ ಮಾಡುವಲ್ಲಿ ರಾಜ್ಯದ ತಂಡ ಯಶಸ್ವಿಯಾಗಿದೆ ಆದರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರಿಗೆ ಯಾರು ಸಮಾಧಾನ ಮಾಡಿದರೂ ಕೇಳಲ್ಲ ಎಂದು ಹೈಕಮಾಂಡ್ ಗೆ ತಿಳಿದಿದೆ. ಹೀಗಾಗಿ ಹೈಕಮಾಂಡ್ ಈಶ್ವರಪ್ಪನ ಗೆಲುವಿಗೆ ಆಶೀರ್ವದಿಸಿದಂತೆ ಕಾಣುತ್ತದೆ. ಯಡಿಯೂರಪ್ಪನವರ ಕುಟುಂಬ ರಾಜಕಾರಣಕ್ಕೆ ಶಿವಮೊಗ್ಗ ಕ್ಷೇತ್ರದ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಾರಾಯಣ್, ಸತೀಶ್, ಗಣಪತಿ, ಅರುಣ್, ಆನಂದ, ಸಾಗರದ ಕುರಿ ಮಂಜಣ್ಣ, ಶಿವಮೊಗ್ಗದ ಹೇಮಾರವಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ