ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಕಸಾಪ ಭವನದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ನಡೆದ ತಾಲೂಕು ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಎಂದರೆ ಅದಕ್ಕೆ ಸರ್ಕಾರಗಳ ನೀತಿಗಳೇ ಕಾರಣ ಹೊರತು ಶಿಕ್ಷಕರಲ್ಲ. ಶಾಲೆಗಳಿಗೆ ಉನ್ನತೀಕರಣಗೊಳಿಸಿ ಅದಕ್ಕೆ ಬೇಕಿರುವ ಅಗತ್ಯ ಸೌಕರ್ಯ ಒದಗಿಸದ ಕಾರಣ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಎಂದರು.ಶಿಕ್ಷಕರನ್ನು ಸದೃಢಗೊಳಿಸುವ ಕೆಲಸವನ್ನು ಸರ್ಕಾರಗಳು ಮಾಡಬೇಕು. ಶಿಕ್ಷಕರಿಗೆ ಸಮಸ್ಯೆಗಳು ಉಲ್ಬಣಿಸಿದ ಸಂದರ್ಭದಲ್ಲಿ ನಾವು ಸದಾ ನಿಮ್ಮಪರವಾಗಿ ಸದನದ ಒಳಗೆ-ಹೊರಗೆ ಹೋರಾಟ ನಡೆಸಲು ಸಿದ್ಧರಿದ್ದೇವೆ. ಯಾವುದೇ ಕಾರಣಕ್ಕೂ ಶಿಕ್ಷಕರು ಎದೆಗುಂದಬಾರದು ಎಂದರು.
ಸಭಾ ಭವನ ನಿರ್ಮಾಣ:
ರಾಜ್ಯಾಧ್ಯಕ್ಷ ಸಿದ್ದಬಸಪ್ಪ ಮಾತನಾಡಿ, ಶಿಕ್ಷಕರ ಹಲವು ಬೇಡಿಕೆಗಳ ಪರವಾಗಿ ನಿರಂತರವಾಗಿ ಹೋರಾಟ ನಡೆಸುವ ಜತೆಗೆ ಸರ್ಕಾರ ಹಾಗೂ ಅಧಿಕಾರಿಗಳೊಂದಿಗೆ ನಿರಂತರ ಚರ್ಚಿಸಲಾಗುತ್ತಿದೆ. ಶಿಕ್ಷಕರೊಂದಿಗೆ ನಾವು ಹೋರಾಟ ನಡೆಸಲಿದ್ದೇವೆ ಎಂದರು.
ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ತಾಲೂಕು ಅಧ್ಯಕ್ಷ ಕೇಶಮೂರ್ತಿ ಮಾತನಾಡಿ, ಸರ್ಕಾರ ಶಿಕ್ಷಕರ ಹಲವು ಸಮಸ್ಯೆಗಳ, ಬೇಡಿಕೆ ಈಡೇರಿಸಬೇಕು. ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಬಡ್ತಿ ಶಿಕ್ಷಕರಿಗೆ ಕಾಲಮಿತಿ ಬಡ್ತಿ, ಪಿಯು ಉಪನ್ಯಾಸಕರ ಹುದ್ದೆಗೆ ಪರೀಕ್ಷೆ ಬೇಡ ಹಾಗೂ ಹಿಂದಿ ಶಿಕ್ಷಣ ಮುಂದುವರೆಸಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜೇಗೌಡ, ಮಾಜಿ ಅಧ್ಯಕ್ಷ ಎಚ್.ಕೆ.ಮಂಜುನಾಥ್, ಜಿಲ್ಲಾಧ್ಯಕ್ಷ ರಮೇಶ್, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎಂ.ರಮೇಶ್, ಕಾರ್ಯದರ್ಶಿ ವಿಜಯಕುಮಾರ್, ದೈ.ಶಿ.ಸ.ಅಧ್ಯಕ್ಷ ಶಿವಕುಮಾರ್, ಖಜಾಂಚಿ ಯತ್ರೀಂದ್ರಕುಮಾರ್, ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್ ಸೇರಿದಂತೆ ಮಂಡ್ಯ, ಹಾಸನ ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸಿದ್ದರು.