-ವೈದ್ಯರು, ದಾದಿಯರು, ಗ್ರೂಪ್ ಡಿ. ನೌಕರರ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಕನ್ನಡಪ್ರಭ ವಾರ್ತೆ ಹೊಳಲ್ಕೆರೆ
ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಸಿಗುವಂತ ಎಲ್ಲಾ ರೀತಿಯ ಸೌಲಭ್ಯಗಳು ಗ್ರಾಮೀಣ ಆಸ್ಪತ್ರೆಗಳಲ್ಲಿಯೂ ಲಭ್ಯವಾಗುವಂತೆ ಮಾಡಿದ್ದೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.ತಾಲೂಕಿನ ರಾಮಗಿರಿಯಲ್ಲಿ ಎರಡು ಕೋಟಿ ರು. ವೆಚ್ಚದಲ್ಲಿ ವೈದ್ಯರ, ದಾದಿಯರ ಮತ್ತು ಗ್ರೂಪ್ ಡಿ. ನೌಕರರ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕೆರೆಕಟ್ಟೆ, ಗೋಕಟ್ಟೆ, ಚೆಕ್ಡ್ಯಾಂಗಳನ್ನು ಕಟ್ಟಿರುವುದರಿಂದ ಎಲ್ಲಾ ಕಡೆ ನೀರು ತುಂಬಿ ತುಳು ಕಾಡುತ್ತಿದೆ. ಗಣೇಶ ದೇವಸ್ಥಾನದ ಸಮೀಪ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಐದು ಅಂತಸ್ತಿನ ಹಾಸ್ಟೆಲ್ ನಿರ್ಮಾಣವಾಗಿದೆ. ವಾಲ್ಮೀಕಿ ಭವನ ಕಟ್ಟಿಸಿದ್ದೇನೆ. ಕ್ಷೇತ್ರದಲ್ಲಿ ಎಲ್ಲಿ ಯಾರು ಏನೂ ಕೇಳಲಿ ಬಿಡಲಿ ಎಲ್ಲೆಲ್ಲಿ ಏನೇನು ಸಮಸ್ಯೆಗಳಿದೆ ಎನ್ನುವುದನ್ನು ಅರ್ಥಮಾಡಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದೇನೆ ಎಂದು ತಿಳಿಸಿದರು.
ಗ್ರಾ.ಪಂ ಅಧ್ಯಕ್ಷೆ ಶಾರದಮ್ಮ, ಉಪಾಧ್ಯಕ್ಷೆ ಯಶೋಧಮ್ಮ, ಷಣ್ಮುಖಪ್ಪ, ಗ್ರಾ.ಪಂ.ಸದಸ್ಯರಾದ ಅನುಸೂಯಮ್ಮ, ರಾಜಣ್ಣ, ಕುಮಾರಣ್ಣ, ಚನ್ನಕೇಶವ, ರವಿಕುಮಾರ್, ಶಿವಶಂಕರ್, ಸರಸ್ವತಿ, ಸಿದ್ದೇಶ್ ಹಾಗೂ ವೈದ್ಯಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.-----
ಫೋಟೋ: ರಾಮಗಿರಿಯಲ್ಲಿ ವೈದ್ಯರು, ದಾದಿಯರು ಹಾಗೂ ಗ್ರೂಪ್ ಡಿ. ನೌಕರರ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಡಾ.ಎಂ.ಚಂದ್ರಪ್ಪ.