ಆಲೂರನ್ನು ಮಾದರಿ ಪಟ್ಟಣವನ್ನಾಗಿ ಮಾಡುವುದೇ ನನ್ನ ಮಹದಾಸೆ

KannadaprabhaNewsNetwork |  
Published : Jun 18, 2026, 01:30 AM IST
17ಎಚ್ಎಸ್ಎನ್3 :  | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರ ಬಡವರ ಪರವಾದ ಪಕ್ಷವಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದು, ತಾಲೂಕುಗಳಿಗೆ ಆಗಬೇಕಾದ ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಲಾಗುವುದು ಎಂದರು. ಹಾಸನ ಜಿಲ್ಲೆಯಲ್ಲಿಯೇ ಆಲೂರು ತಾಲೂಕು ಅತಿ ಚಿಕ್ಕ ಹಾಗೂ ಅಭಿವೃದ್ಧಿಯಲ್ಲಿ ಕುಂಠಿತವಾಗಿರುವ ತಾಲೂಕಾಗಿದ್ದು, ನನ್ನ ಅವಧಿಯಲ್ಲಿ ಸರ್ಕಾರದಿಂದ ಹಾಗೂ ನನ್ನ ಕೈಯಲ್ಲಿ ಆಗಬೇಕಾದ ಕೆಲಸಗಳನ್ನು ಮಾಡಿ ಆಲೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಮುಂದಾಗಿರುವುದಾಗಿ ಸಂಸದ ಶ್ರೇಯಸ್‌ ಪಟೇಲ್‌ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಆಲೂರು

ಆಲೂರು ಪಟ್ಟಣವನ್ನು ಅಭಿವೃದ್ಧಿ ಮಾಡುವ ಮೂಲಕ ಮಾದರಿ ಪಟ್ಟಣವನ್ನಾಗಿಸುವುದೇ ನನ್ನ ಮಹದಾಸೆ ಆಗಿದೆ ಎಂದು ಸಂಸದ ಶ್ರೇಯಸ್ ಎಂ ಪಟೇಲ್ ತಿಳಿಸಿದರು.ಪಟ್ಟಣದ ತಾಲೂಕು ಪಂಚಾಯಿತಿ ಪಕ್ಕ ಸುಮಾರು ₹ 64 ಲಕ್ಷ ರುಪಾಯಿ ಅಂದಾಜಿನಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಅಂಚೆ ಕಚೇರಿ ಕಟ್ಟಡ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಂಚೆ ಕಚೇರಿ ಕಾಮಗಾರಿ ಪ್ರಾರಂಭಗೊಂಡಿದ್ದು, ಉತ್ತಮ ಕಟ್ಟಡವನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹಲವು ವರ್ಷಗಳಿಂದ ಅಂಚೆಕಚೇರಿಗೆ ಸ್ಥಳ ಇದ್ದರೂ ಸಹ ಕಟ್ಟಡ ನಿರ್ಮಿಸಲು ಮುಂದಾಗಿರಲಿಲ್ಲ. ಕಟ್ಟಡ ನಿರ್ಮಿಸಲು ಸಾರ್ವಜನಿಕರು ಒತ್ತಾಯ ಮಾಡಿದ ಕಾರಣ ಕೇಂದ್ರ ಸಚಿವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನೆರವಿನಿಂದ ಸುಮಾರು ₹ 64 ಲಕ್ಷ ರುಪಾಯಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಬಡವರ ಪರವಾದ ಪಕ್ಷವಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದು, ತಾಲೂಕುಗಳಿಗೆ ಆಗಬೇಕಾದ ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಲಾಗುವುದು ಎಂದರು. ಹಾಸನ ಜಿಲ್ಲೆಯಲ್ಲಿಯೇ ಆಲೂರು ತಾಲೂಕು ಅತಿ ಚಿಕ್ಕ ಹಾಗೂ ಅಭಿವೃದ್ಧಿಯಲ್ಲಿ ಕುಂಠಿತವಾಗಿರುವ ತಾಲೂಕಾಗಿದ್ದು, ನನ್ನ ಅವಧಿಯಲ್ಲಿ ಸರ್ಕಾರದಿಂದ ಹಾಗೂ ನನ್ನ ಕೈಯಲ್ಲಿ ಆಗಬೇಕಾದ ಕೆಲಸಗಳನ್ನು ಮಾಡಿ ಆಲೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಮುಂದಾಗಿರುವುದಾಗಿ ಭರವಸೆ ನೀಡಿದರು. ಈಗಾಗಲೇ ಸಂಸದರ ಅನುದಾನದಲ್ಲಿ ತಾಲೂಕಿನ ಕ್ರೀಡಾಂಗಣದಲ್ಲಿ ಶೌಚಾಲಯ ಹಾಗೂ ಹೈಮಾಸ್ಕ್ ದೀಪಗಳನ್ನು ಅಳವಡಿಸಲಾಗಿದೆ. ಪಟ್ಟಣದ ವ್ಯಾಪಾರಸ್ಥರಿಗೆ ಫುಡ್‌ಕೋರ್ಟ್‌ ನಿರ್ಮಿಸಲು ಅನುದಾನವನ್ನು ತಂದಿದ್ದು, ಅತಿ ಶೀಘ್ರದಲ್ಲಿ ಫುಡ್‌ಕೋರ್ಟ್‌ ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಅಂಚೆ ನಿರೀಕ್ಷಕ ಸಂತೋಷ್ ಮಲೋತ್, ಅಂಚೆಪಾಲಕರಾದ ನಂದಿನಿ ಎಚ್ ಪಿ, ಅಂಚೆ ಮೇಲ್ವಿಚಾರಕ ಮಧು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಪೃಥ್ವಿ ಜಯರಾಮ್, ಆಲೂರು ಯೂತ್‌ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್, ರಾಜಶೇಖರ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರಾಳಾದ ಶಾಂತಕೃಷ್ಣ, ಶಿವಣ್ಣ, ಹರೀಶ್, ಸಂದೇಶ್, ನಾರಾಯಣ, ಯೋಗೀಶ್, ಪನೀಶ್, ರುದ್ರಕುಮಾರ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಭಾರ ಕುಲಪತಿ ಪ್ರೊ.ಶಿವಚಿತ್ತಪ್ಪರನ್ನು ವಜಾಗೊಳಿಸಿ: ಗೌರ್ನರ್ ಗೆ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಮನವಿ
ಟ್ಯಾಂಕರ್ ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಸಾವು