ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ನಡೆದ ಕೂಟಗಲ್ ಹೋಬಳಿಯ ಜೆಡಿಎಸ್ ಬಿಜೆಪಿ ಮುಖಂಡರು ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿದ ಅವರು, ಅಂಗಾಂಗದಾನ, ನೇತ್ರದಾನವನ್ನು ನೆನೆಯುತ್ತೇವೆ. ಅದೇ ರೀತಿ ಮತದಾನವೂ ತುಂಬಾ ಪವಿತ್ರವಾದದ್ದು. ಮತಗಳು ಮಾರಾಟದ ವಸ್ತು ಆಗಬಾರದು. ಮತಗಳು ಮಾರಾಟವಾದರೆ ಪ್ರಜಾಪ್ರಭುತ್ವ ಕಗ್ಗೋಲೆ ಆದಂತೆ. ತಮ್ಮ ಅಮೂಲ್ಯವಾದ ಮತದಾನವನ್ನು ನನಗೆ ನೀಡಿದರೆ ದೇಶದ ಸುಭದ್ರತೆ, ಸಮಗ್ರತೆಗೆ ನಂದಾದೀಪ ಆಗುತ್ತದೆ ಎಂದರು.
ನಾನು ರಾಜಕೀಯಕ್ಕೆ ಬರುತ್ತೇನೆಂದು ಕನಸಲ್ಲು ಅಂದುಕೊಂಡಿರಲಿಲ್ಲ. ರಾಜಕೀಯದ ನಡುವೆ ಇದ್ದರೂ ನಾವು ಯಾರ ಜೊತೆ ಒಡನಾಟ ಇಟ್ಟುಕೊಳ್ಳುತ್ತೇವೆಯೊ ಅದರ ನೇರ ಪರಿಣಾಮ ನಮ್ಮ ಮೇಲೆ ಬೀರುತ್ತದೆ. ಅದು ನನ್ನ ವಿಚಾರದಲ್ಲಿಯೂ ಆಗಿದೆ ಎಂದು ರಾಜಕೀಯ ಪ್ರವೇಶದ ಅನಿವಾರ್ಯತೆಯನ್ನು ತಿಳಿಸಿದರು.ನಾವು ಕಲಿತ ಶಿಕ್ಷಣ ಎಷ್ಟು ಸಂಸ್ಕಾರ ಕಲಿಸಿದೆ, ಎಷ್ಟು ಜನರ ಮುಖದಲ್ಲಿ ನಗು ತರಿಸಿದೆ, ಎಷ್ಟು ಜನರ ಮನೆಯಲ್ಲಿ ಬೆಳಕು ಚೆಲ್ಲಿದೆ ಎಂಬುದು ಮುಖ್ಯವಾಗುತ್ತದೆ. ಯಾವ ಪ್ರತಿಫಲವನ್ನು ಬಯಸದೆ ನಾವು ಮಾಡುವ ಸಹಾಯವೇ ನಿಜವಾದ ಸಮಾಜ ಸೇವೆ ಆಗಿದೆ. ದ್ವೇಷ ಮತ್ಸರ ಕಳೆದು ಪ್ರೀತಿ ಹಂಚಬೇಕು. ಆರೋಗ್ಯಕರ ಚುನಾವಣೆ ನಡೆಯಬೇಕು ಎಂದು ಮಂಜುನಾಥ್ ಹೇಳಿದರು.
ನಿಮ್ಮೆಲ್ಲರ ಉತ್ಸವ ನೋಡಿದರೆ ನನ್ನ ಗೆಲುವು ನಿಶ್ಚಿತವಾಗಿದೆ. ಮೊದಲು ಇದು ಜೆಡಿಎಸ್ ಭದ್ರಕೋಟೆಯಾಗಿತ್ತು, ಈಗ ಬಿಜೆಪಿ ಕೈ ಜೋಡಿಸಿರುವುದರಿಂದ ಸುಭದ್ರ ಕೋಟೆಯಾಗಿದೆ. ಪ್ರಮುಖ ಮುಖಂಡರ ಸಭೆಯಲ್ಲಿನ ವಿಚಾರಗಳನ್ನು ಮತದಾರರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಮಂಜುನಾಥ್ ತಿಳಿಸಿದರು.ಮಾಜಿ ಶಾಸಕ ಎ.ಮಂಜುನಾಥ್ ಮಾತನಾಡಿ, ಡಿಕೆ ಸಹೋದರರು ಜೆಡಿಎಸ್ - ಬಿಜೆಪಿ ಕಾರ್ಯಕರ್ತರಿಗೆ ಆಮಿಷವೊಡ್ಡಿ ವಿಫರಾಗುತ್ತಿರುವ ದೊಡ್ಡ ಪಟ್ಟಿಯೇ ಇದೆ. ಮೂರು ಬಾರಿ ಸಂಸದರಾಗಿರುವ ನೀವು ಕನಕಪುರ ಹೊರತು ಪಡಿಸಿ ಉಳಿದ 7 ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಕೆಲಸ ಮಾಡಿದ್ದರೆ ಏಕೆ ಆಮಿಷ ಒಡ್ಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು.
ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಜೆಡಿಎಸ್ ತಾಲೂಕು ಅಧ್ಯಕ್ಷ ರಾಜಶೇಖರ್ , ಮುಖಂಡರಾದ ಸುಬ್ಬಾಶಾಸ್ತ್ರಿ, ಗೌತಮ್ ಗೌಡ, ಪ್ರಸಾದ್ ಗೌಡ, ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.ಬಿಜೆಪಿ-ಜೆಡಿಎಸ್ ಸಹೋದರರಿದ್ದಂತೆ: ಸಿಪಿವೈದೇಶದ ಹಿತದೃಷ್ಟಿಯಿಂದ ಮೋದಿರವರು ಮತ್ತೊಮ್ಮೆ ಪ್ರಧಾನಿ ಅಗಬೇಕೆಂಬ ಉದ್ದೇಶದಿಂದ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಕನಿಷ್ಠ 25 ಸ್ಥಾನಗಳಲ್ಲಿ ಎನ್ ಡಿಎ ಮೈತ್ರಿಕೂಟ ಗೆಲವು ಸಾಧಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಕೆದಾಟು ನಿರ್ಮಾಣ ಮಾಡುತ್ತೇವೆಂದು ಪಾದಯಾತ್ರೆ ಮಾಡಿ ಜನರನ್ನು ನಂಬಿಸಿದರು. ಈಗ ಕಾಂಗ್ರೆಸ್ ನ ಪಾಟ್ನರ್ಸ್ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಯಾವ ಕಾರಣಕ್ಕೂ ಮೇಕೆದಾಟು ನಿರ್ಮಾಣವಾಗಲು ಬಿಡುವುದಿಲ್ಲ ಎಂದಿದ್ದಾರೆ. ಇದು ಕಾಂಗ್ರೆಸ್ ನ ದ್ವಿಮುಖ ನೀತಿ ತೋರಿಸುತ್ತಿದೆ ಎಂದು ಟೀಕಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಡಾ.ಸಿ.ಎನ್ .ಮಂಜುನಾಥ್ ಮೈತ್ರಿ ಅಭ್ಯರ್ಥಿಯಾಗಿರುವ ಕಾರಣ 8 ಕ್ಷೇತ್ರದಲ್ಲು ಪಕ್ಷತೀತ ವಾತಾವರಣ ಇದೆ. ಕೇಂದ್ರದಲ್ಲಿ ಮಂತ್ರಿಯಾದರೆ ದೇಶದ ಆರೋಗ್ಯ ಸುಧಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಯೋಗೇಶ್ವರ್ ಹೇಳಿದರು.