ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ

KannadaprabhaNewsNetwork |  
Published : Apr 28, 2026, 01:45 AM IST
26ಕೆಎಂಎನ್ ಡಿ26 | Kannada Prabha

ಸಾರಾಂಶ

ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಗುತ್ತಿಗೆದಾರ ರಸ್ತೆ ಪಕ್ಕ ಫುಟ್ ಪಾತ್ ನಿರ್ಮಿಸುವ ಬದಲು ವ್ಯಾಪಾರಿಗಳಿಗೆ ಅನುಕೂಲವಾಗವಂತೆ ಜಾಗಬಿಟ್ಟು ರಸ್ತೆಯಲ್ಲಿಯೇ ಫುಟ್ ಪಾತ್ ನಿರ್ಮಾಣ ಮಾಡುತ್ತಿದ್ದಾನೆ. ಇದರಿಂದ ಪಾದಚಾರಿಗಳು ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣ ವ್ಯಾಪ್ತಿಯ ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಗುತ್ತಿಗೆದಾರ ರಸ್ತೆ ಪಕ್ಕ ಫುಟ್ ಪಾತ್ ನಿರ್ಮಿಸುವ ಬದಲು ವ್ಯಾಪಾರಿಗಳಿಗೆ ಅನುಕೂಲವಾಗವಂತೆ ಜಾಗಬಿಟ್ಟು ರಸ್ತೆಯಲ್ಲಿಯೇ ಫುಟ್ ಪಾತ್ ನಿರ್ಮಾಣ ಮಾಡುತ್ತಿದ್ದಾನೆ. ಇದರಿಂದ ಪಾದಚಾರಿಗಳು ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಮೈಸೂರು-ಚನ್ನರಾಯಪಟ್ಟಣ ಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಚಾರಿ ಒತ್ತಡವಿದೆ. ಪಟ್ಟಣದ ಎಪಿಎಂಸಿ ಮಾರುಕಟ್ಟೆ, ಎಲ್ಐಸಿ ಕಟ್ಟಡ, ಖಾಸಗಿ ಆಸ್ಪತ್ರೆ, ಚಿತ್ರಮಂದಿರ, ದಲಿತ ವಿದ್ಯಾರ್ಥಿ ನಿಲಯ, ಪ್ರವಾಸಿ ಮಂದಿರ, ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜು ಸೇರಿದಂತೆ ಹಲವು ಸಾರ್ವಜನಿಕ ಸಂಪರ್ಕ ಕೇಂದ್ರಗಳು ಮತ್ತು ಪ್ರಮುಖ ವ್ಯಾಪಾರ ಕೇಂದ್ರಗಳು ಈ ರಸ್ತೆಯ ಎರಡೂ ಬದಿಗಳಲ್ಲಿವೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಕಾಲೇಜುಗಳು, ಪೊಲೀಸ್ ಠಾಣೆ ಸೇರಿದಂತೆ ಹತ್ತು ಹಲವು ಕಡೆ ಹೋಗಬೇಕಾದ ಸಾವಿರಾರು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇಲ್ಲಿನ ಪ್ರವಾಸಿ ಮಂದಿರ ವೃತ್ತದ ಮೂಲಕವೇ ಹಾದುಹೋಗಬೇಕು. ಸದರಿ ರಸ್ತೆಯ ಮೇಲಿನ ಸಂಚಾರ ದಟ್ಟಣೆ ಕಡಿಮೆ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಸದರಿ ರಸ್ತೆಯನ್ನು ಅಗಲೀಕರಣ ಮಾಡಿ ರಸ್ತೆ ಎರಡೂ ಬದಿಯಲ್ಲಿಯೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಫುಟ್ ಪಾತ್ ನಿರ್ಮಿಸಿ ಡಿವೈಡರ್ ನಿರ್ಮಿಸುವಂತೆ ರಸ್ತೆ ಅಭಿವೃದ್ಧಿ ಪಡಿಸಲು 4.5 ಕೋಟಿ ರು. ಅನುದಾನ ನೀಡಿದೆ.

ಈ ಅನುದಾನವನ್ನು ಬಳಕೆ ಮಾಡಿ ಪಟ್ಟಣದ ಹೊರವಲಯದ ಕಾಗುಂಡಿ ಹಳ್ಳದಿಂದ ನ್ಯಾಯಾಲಯ ಸಂಕೀರ್ಣದವರೆಗೆ ಒಟ್ಟು 4 ಕಿ.ಮೀ ರಸ್ತೆ ಅಭಿವೃದ್ಧಿ ಮಾಡಬೇಕು. ಈ ಕಾಮಗಾರಿಯನ್ನು ಶಾಸಕ ಎಚ್.ಟಿ.ಮಂಜು ಉದ್ಘಾಟನೆ ಮಾಡಿದ್ದು, ನಾಗಮಂಗಲ ಮೂಲದ ಗುತ್ತಿಗೆದಾರ ಸದರಿ ಕಾಮಗಾರಿಯನ್ನು ನಿರ್ವಹಿಸುತ್ತಿದ್ದಾನೆ.

ನಿಯಮಾನುಸಾರ ರಸ್ತೆ ಅಭಿವೃದ್ಧಿ ಮಾಡಬೇಕಾದ ಗುತ್ತಿಗೆ ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳದೆ ಹಾಲಿ ಇರುವ ರಸ್ತೆ ಮೇಲೆ ಡಾಂಬರು ಹಾಕಿ ರಸ್ತೆಗೆ ಸೇರಿದ ಜಾಗದಲ್ಲಿಯೇ ಎರಡೂ ಬದಿಗಳಲ್ಲಿ ಫುಟ್ ಪಾತ್ ನಿರ್ಮಿಸಿ ಜನರ ಸುಗಮ ಸಂಚಾರಕ್ಕೆ ಸ್ಥಳವೇ ಇಲ್ಲದಂತೆ ಮಾಡಿದ್ದಾನೆ.

ರಸ್ತೆಯ ಎರಡೂ ಬದಿಗಳಲ್ಲಿ ಪಾದಚಾರಿ ರಸ್ತೆ ನಿರ್ಮಿಸುವ ಬದಲು ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಜಾಗಬಿಟ್ಟು ರಸ್ತೆ ಎರಡೂ ಬದಿಗಳಲ್ಲಿಯೂ ಕಟ್ಟೆ ಕಟ್ಟಿದ್ದಾನೆ. ಇದರ ಲಾಭ ಪಡೆದ ಫುಟ್ ಪಾತ್ ವ್ಯಾಪಾರಿಗಳು ತಮ್ಮ ವ್ಯಾಪಾರದ ಅಂಗಡಿಗಳನ್ನು ಹೊಸದಾಗಿ ನಿರ್ಮಿಸಿರುವ ಫುಟ್ ಪಾತ್ ಗೂ ವಿಸ್ತರಿಸಿಕೊಂಡಿದೆ.

ಈಗ ಜನ ಸಂಚಾರವಿರಲಿ ವಾಹನಗಳ ಸುಗಮ ಸಂಚಾರಕ್ಕೂ ಅಡ್ಡಿಯಾಗಿದೆ. ರಸ್ತೆ ಬಂದಿ ಪುಟ್ ಪಾತ್ ಅಂಗಡಿಗಳು ತಲೆ ಎತ್ತಿ ಮಕ್ಕಳ ಶೈಕ್ಷಣಿಕ ಚಟಿವಟಿಕೆಗಳಿಗೆ ಅಡ್ಡಿಯಾಗುತ್ತಿದೆ. ತೆರವಿಗಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದರೂ ಸರ್ಕಾರಿ ಆಡಳಿತ ಮಾತ್ರ ನಿಷ್ಕ್ರಿಯವಾಗಿದೆ.

ಪಟ್ಟಣದ ಎಲ್ಲಾ ಪ್ರಮುಖ ರಸ್ತೆಗಳು ಫುಟ್ ಪಾತ್ ವ್ಯಾಪಾರಿಗಳಿಂದ ತುಂಬಿ ತುಳುಕುತ್ತಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಕ್ರಮ ವಹಿಸುತ್ತಿಲ್ಲ. ಸಾವಿರಾರು ಜನರು, ವಿದ್ಯಾರ್ಥಿಗಳು ಜೀವ ಕೈಯಲ್ಲಿ ಹಿಡಿದುಕೊಂಡು ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ನಿತ್ಯ ಅಲಲ್ಲಿ ಒಂದಲ್ಲ ಒಂದು ಅವಘಡಗಳು ಉಂಟಾಗುತ್ತಿವೆ. ಅವೈಜ್ಞಾನಿಕ ರಸ್ತೆ ಅಭಿವೃದ್ದಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರನ ವಿರುದ್ದ ಕ್ರಮ ಜರುಗಿಸಿ ನಿಯಮಾನುಸಾರ ರಸ್ತೆ ಅಭಿವೃದ್ಧಿ ಪಡಿಸುವಂತೆ ಜಿಲ್ಲಾ ರೈತಸಂಘದ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದ ಯೋಜನೆ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಭೀಮಣ್ಣ ನಾಯ್ಕ
ಅಕ್ಟೋಬರ್‌-ನವೆಂಬರ್‌ನಲ್ಲಿ ವುಮೆನ್ಸ್ ಪ್ರೋ ಮಿನಿ ಫುಟ್‌ಬಾಲ್ ಲೀಗ್‌