ಮೈಸೂರು ದಸರಾ 2024 : ಜಂಬೂ ಸವಾರಿ ಆನೆಗಳೊಂದಿಗೆ ರೀಲ್ಸ್‌, ಫೋಟೋಗಿಲ್ಲ ಅವಕಾಶ ..!

Published : Sep 24, 2024, 12:05 PM IST
Mysuru dasara

ಸಾರಾಂಶ

ಇನ್ನು ಮುಂದೆ ಆನೆಗಳೊಂದಿಗೆ ರೀಲ್ಸ್ ಮಾಡಲು, ಅನುಚಿತವಾಗಿ ಭಾವಚಿತ್ರ ತೆಗೆಸಿಕೊಳ್ಳಲು ಅವಕಾಶ ನೀಡಬಾರದು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ತಿಳಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಮೈಸೂರು ದಸರಾ ಜಂಬೂ ಸವಾರಿ ಆನೆಗಳ ಜತೆಗೆ ಸಾರ್ವಜನಿಕರು ರೀಲ್ ಮಾಡುವುದು, ಫೋಟೋ ತೆಗೆಸುವುದಕ್ಕೆ ಅನುವು ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡುವವರೆಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ.

ಮೈಸೂರು ದಸರಾ ಜಂಬೂ ಸವಾರಿಗೆ ಕಾಡಿನಿಂದ ಬಂದಿರುವ ಆನೆಗಳೊಂದಿಗೆ ಸಾರ್ವಜನಿಕರು ರೀಲ್ಸ್ ಮಾಡಲು, ಫೋಟೋ ತೆಗೆಸಿಕೊಳ್ಳಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಅದರಿಂದ ಆನೆಗಳು ವಿಚಲಿತವಾಗಿದ್ದು, ಅನುಚಿತವಾಗಿ ವರ್ತಿಸುತ್ತಿವೆ. ಕೆಲದಿನಗಳ ಹಿಂದೆ ಕಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟವಾಗಲು ಇದೂ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಆನೆಗಳನ್ನು ವೀಕ್ಷಿಸಲು ಬರುವವರಲ್ಲಿ ಕೆಲವರು ರೀಲ್ಸ್ ಮಾಡುವುದರ ಜತೆಗೆ ಆನೆಗಳ ಸೊಂಡಿಲನ್ನು ತಬ್ಬಿಕೊಂಡು ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಶಿಬಿರದಿಂದ ಬಂದಿರುವ ಆನೆಗಳು ಸುರಕ್ಷಿತವಾಗಿ ಶಿಬಿರಕ್ಕೆ ವಾಪಾಸಾಗುವವರೆಗೂ ಯಾವುದೇ ಅನಾಹುತವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಇನ್ನು ಮುಂದೆ ಆನೆಗಳೊಂದಿಗೆ ರೀಲ್ಸ್ ಮಾಡಲು, ಅನುಚಿತವಾಗಿ ಭಾವಚಿತ್ರ ತೆಗೆಸಿಕೊಳ್ಳಲು ಅವಕಾಶ ನೀಡಬಾರದು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

PREV

Recommended Stories

ಭೂಮಿ ಇರುವ ತನಕ ಅರಸು ಕೊಡುಗೆ ಶಾಶ್ವತ: ಎಚ್.ಬಿ. ವಿಜಯಕುಮಾರ್
ಕೃಷಿಸಖಿಯರು ವಿವಿಧ ಯೋಜನೆಗಳನ್ನು ರೈತರಿಗೆ ತಲುಪಿಸಲು ಸಂಪರ್ಕ ಸೇತುವೆಯಾಗಿ: ಡಾ.ಹರಿಣಿಕುಮಾರ್