ಶಿವಕುಮಾರ ಕುಷ್ಟಗಿ
ಪಂಢರಪುರದ ವಿಠ್ಠಲನ ದರ್ಶನಕ್ಕೆ ಹೋಗುವ ಸಾವಿರಾರು ಭಕ್ತರಿಗೆ ಈ ರೈಲು ಆಸರೆಯಾಗಿತ್ತು. ಆದರೆ, ಈಗ ತರಾತುರಿಯಲ್ಲಿ ಈ ರೈಲನ್ನು ಮುಖ್ಯ ನಿಲ್ದಾಣಗಳ ಬದಲಿಗೆ ಬೈಪಾಸ್ ಲೈನ್ ಮೂಲಕ ಓಡಿಸಲು ನಿರ್ಧರಿಸಿರುವುದು ಯಾವ ಉದ್ದೇಶಕ್ಕಾಗಿ ಮತ್ತು ಯಾರ ಹಿತಕ್ಕಾಗಿ ಎನ್ನುವುದನ್ನು ರೈಲ್ವೆ ಇಲಾಖೆ ಅಧಿಕಾರಿಗಳು ಸ್ಪಷ್ಟ ಪಡಿಸಬೇಕಿದೆ.
ಇತ್ತೀಚೆಗಷ್ಟೇ ಆರಂಭವಾದ ವಿಜಯಪುರ, ಯಶವಂತಪುರ ರೈಲು ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಸಂಚರಿಸುವಾಗ ಗದಗ ಬೈಪಾಸ್ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿತ್ತು. ನಂತರದ ದಿನಗಳಲ್ಲಿ ಅದನ್ನು ರದ್ದುಗೊಳಿಸಿದ್ದ ಇಲಾಖೆ ಈಗ ಪಂಢರಪುರ, ಮೈಸೂರು ರೈಲಿಗೆ ಗದಗ ಮತ್ತು ಹುಬ್ಬಳ್ಳಿ ಬೈಪಾಸ್ ನಲ್ಲಿ ಮಾತ್ರ ನಿಲುಗಡೆಗೆ ಅವಕಾಶ ನೀಡಿದೆ. ಆದರೆ, ಬೈಪಾಸ್ ರೈಲು ನಿಲ್ದಾಣಗಳಿಗೆ ತಲುಪಲು ಸಾರ್ವಜನಿಕರಿಗೆ ಸಾಧ್ಯವಾಗದ ಸ್ಥಿತಿ ಇದೆ. ಇದು ಇಲಾಖೆ ಅಧಿಕಾರಿಗಳಿಗೆ ಯಾಕೆ ಗೊತ್ತಾಗುತ್ತಿಲ್ಲ ಎನ್ನುವುದು ಆಶ್ಚರ್ಯದ ಸಂಗತಿಯಾಗಿದೆ.ಕಿಂಚಿತ್ತು ಗಮನ ನೀಡದ ಸಂಸದರು
ಗದಗ ಬೈಪಾಸ್ ನಿಲ್ದಾಣದಲ್ಲಿ ಯಾವುದೇ ಪ್ರಯಾಣಿಕ ರೈಲುಗಳನ್ನು ನಿಲ್ಲಿಸುವುದಿಲ್ಲ ಎಂದು ರೈಲ್ವೆ ಇಲಾಖೆ ಆರಂಭದಿಂದಲೂ ಜನರಿಗೆ ಭರವಸೆ ನೀಡುತ್ತ ಬಂದಿತ್ತು. ವಿಜಯಪುರ-ಯಶವಂತಪುರ ರೈಲು ಸಂಚಾರದ ವೇಳೆಯೂ ಇದೇ ಮಾತನ್ನು ಪುನರುಚ್ಚರಿಸಿತ್ತು. ಆದರೆ, ಕೊಟ್ಟ ಮಾತಿಗೆ ತಪ್ಪಿ ಕೆಲವೇ ದಿನಗಳಲ್ಲಿ ಹೊಸ ರೈಲನ್ನು ಇದೇ ಮಾರ್ಗದಲ್ಲಿ ಓಡಿಸುತ್ತಿದೆ. ಇದರಿಂದ ಕೇವಲ ಗದಗ ಜಿಲ್ಲೆ ಮಾತ್ರವಲ್ಲ ಅಕ್ಕ ಪಕ್ಕದ ಜಿಲ್ಲೆಯ ನಿತ್ಯವೂ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಲಿದೆ ಎಂದು ರೈಲ್ವೆ ಹೋರಾಟಗಾರ ಗಣೇಶಸಿಂಗ್ ಬ್ಯಾಳಿ ಹೇಳಿದರು.ಈ ಬಗ್ಗೆ ನೈರುತ್ಯ ರೈಲ್ವೆ ವಲಯ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರೈಲ್ವೆ ಮಂಡಳಿ ಆದೇಶ ಈಗಷ್ಟೆ ಬಂದಿದೆ ಎಂದು ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ಪಿ.ಆರ್.ಓ. ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.