ನಬಾರ್ಡ್ ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು

KannadaprabhaNewsNetwork |  
Published : Nov 28, 2024, 12:32 AM IST
ಅರಸೀಕೆರೆ :- ತಾಲೂಕಿನ ಕಣಕಟ್ಟೆ ಹೋಬಳಿ, ಜೆ.ಸಿ.ಪುರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಗುರುವಾರ ಲೋಕಾರ್ಪಣೆ ಮಾಡಿದರು. | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶಗಳಲ್ಲಿ ರೈತರುಗಳಿಗೆ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಬೆಳೆ ಸಾಲ, ಅಭಿವೃದ್ಧಿ ಸಾಲಗಳನ್ನು ವಿತರಿಸಿ ಅನುಕೂಲ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೇಂದ್ರ ಸರ್ಕಾರದ ಅಸಹಕಾರ ನೀತಿಯಿಂದ ನಬಾರ್ಡ್ ವತಿಯಿಂದ ಸಾಲ ಸೌಲಭ್ಯ ದೊರೆಯದೆ ರೈತರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರ ಈ ಧೋರಣೆ ಕೈ ಬಿಟ್ಟು ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಕಣಕಟ್ಟೆ ಹೋಬಳಿ, ಜೆ.ಸಿ.ಪುರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಗುರುವಾರ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಶಾಸಕರು, ಗ್ರಾಮೀಣ ಪ್ರದೇಶಗಳಲ್ಲಿ ರೈತರುಗಳಿಗೆ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಬೆಳೆ ಸಾಲ, ಅಭಿವೃದ್ಧಿ ಸಾಲಗಳನ್ನು ವಿತರಿಸಿ ಅನುಕೂಲ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೇಂದ್ರ ಸರ್ಕಾರದ ಅಸಹಕಾರ ನೀತಿಯಿಂದ ನಬಾರ್ಡ್ ವತಿಯಿಂದ ಸಾಲ ಸೌಲಭ್ಯ ದೊರೆಯದೆ ರೈತರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರ ಈ ಧೋರಣೆ ಕೈ ಬಿಟ್ಟು ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಬಲವರ್ಧನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳನ್ನು ಉತ್ತಮ ರೀತಿಯಲ್ಲಿ ಕಾಯ್ದುಕೊಳ್ಳುವುದು ಆಳುವ ಸರ್ಕಾರಗಳು ಸೇರಿದಂತೆ ಪ್ರತಿಯೊಬ್ಬರ ಕರ್ತವ್ಯ ಎಂದರು. ರೈತರು ಬ್ಯಾಂಕ್‌ನಿಂದ ಪಡೆದ ಸಾಲ ಸೌಲಭ್ಯವನ್ನು ಸಕಾಲದಲ್ಲಿ ಮರು ಪಾವತಿ ಮಾಡುವ ಮೂಲಕ ಬ್ಯಾಂಕ್ ಸಶಕ್ತ ನಡೆಗೆ ಸಹಕಾರ ನೀಡಬೇಕೆಂದರು.

ಕೇಂದ್ರ ಸರ್ಕಾರ ಆರಂಭದಿಂದಲೂ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅವರ ಪಕ್ಷದ ಸರ್ಕಾರಗಳು ಇರುವ ರಾಜ್ಯಗಳಿಗೆ ಒಂದು ನ್ಯಾಯ, ಅನ್ಯ ಪಕ್ಷಗಳು ಇರುವ ಸರ್ಕಾರಗಳು ಅಧಿಕಾರ ನಡೆಸುತ್ತಿರುವ ರಾಜ್ಯಗಳಿಗೆ ಬೇರೊಂದು ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ನಮ್ಮಿಂದ ಹೆಚ್ಚಿನ ಪ್ರಮಾಣದಲ್ಲಿ ಜಿಎಸ್‌ಟಿ ಹಣ ಪಡೆಯುವ ಕೇಂದ್ರ ಸರ್ಕಾರ, ಆ ಕಡೆಯಿಂದ ರಾಜ್ಯಕ್ಕೆ ಬರುವ ವಿವಿಧ ರೀತಿಯ ಅನುದಾನ ವಿಚಾರದಲ್ಲಿ ಜಿಪುಣತನ ಮಾತ್ರವಲ್ಲ ಹಗೆತನ ಪ್ರದರ್ಶನ ಮಾಡುತ್ತಿದ್ದು, ಈ ಧೋರಣೆ ನಿಲ್ಲಬೇಕು ಎಂದು ಹೇಳಿದರು. ಇಲ್ಲದಿದ್ದರೆ ಒಕ್ಕೂಟ ವ್ಯವಸ್ಥೆಗೆ ಅನ್ಯಾಯ, ಅಪಮಾನ ಮಾಡಿದಂತೆ ಆಗಲಿದೆ ಎಂದು ಎಚ್ಚರಿಸಿದರು. ರಾಜ್ಯದಲ್ಲಿರುವ ನಮ್ಮ ಸರ್ಕಾರ, ಪಂಚ ಗ್ಯಾರಂಟಿ ಜಾರಿ ಜೊತೆಗೆ ರೈತರು, ಬಡವರು ಸೇರಿದಂತೆ ಪ್ರತಿಯೊಬ್ಬರಿಗೆ ಬೇಕಾದ ಸವಲತ್ತು ಒದಗಿಸಿಕೊಡಲು ಸದಾ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಮಾರ್, ಸದಸ್ಯರಾದ ಮಂಜಣ್ಣ, ಜಯಣ್ಣ, ಶೋಭ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ, ಮುಖಂಡರಾದ ಕರಿಯಪ್ಪ, ಮಲ್ಲಿಕಾರ್ಜುನ, ರಾಂಪುರ ಸುರೇಶ, ತುಂಬಾಪುರ ನವೀನ್, ಮುರುಳಿ, ಮುಜು ಹಾಗೂ ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಕ್‌ ಜತೆ ರಾಜ್ಯ ಕಾಂಗ್ರೆಸ್‌ ಕೈಜೋಡಿಸಿದೆಯೇ? : ಬಿಜೆಪಿ
ಜಿ-ರಾಮ್‌ಜಿಯಿಂದ ದುರ್ಬಲರ ಹಕ್ಕಿಗೆ ಕುತ್ತು: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ