ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯುಳ್ಳ ಆಡಳಿತಗಾರ

KannadaprabhaNewsNetwork |  
Published : Jul 30, 2025, 12:46 AM IST
ಕೆಂಪೇಗೌಡರು ದೂರದೃಷ್ಟಿಯುಳ್ಳ ಆಡಳಿತಗಾರರಾಗಿದ್ದರು | Kannada Prabha

ಸಾರಾಂಶ

ಕೆಂಪೇಗೌಡರು ದೂರದೃಷ್ಟಿಯುಳ್ಳ ಆಡಳಿತಗಾರರಾಗಿದ್ದರು. ಅವರ ದೃಷ್ಟಿಕೋನದಿಂದ ಬೆಂಗಳೂರು ನಗರವು ಅಭಿವೃದ್ಧಿ ಹೊಂದಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದು ಕೊಳ್ಳೇಗಾಲ ಶಾಸಕ ಎ.ಅರ್.ಕೃಷ್ಣಮೂರ್ತಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕೆಂಪೇಗೌಡರು ದೂರದೃಷ್ಟಿಯುಳ್ಳ ಆಡಳಿತಗಾರರಾಗಿದ್ದರು. ಅವರ ದೃಷ್ಟಿಕೋನದಿಂದ ಬೆಂಗಳೂರು ನಗರವು ಅಭಿವೃದ್ಧಿ ಹೊಂದಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದು ಕೊಳ್ಳೇಗಾಲ ಶಾಸಕ ಎ.ಅರ್.ಕೃಷ್ಣಮೂರ್ತಿ ಹೇಳಿದರು.

ನಗರದ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ರವರ ಜಯಂತೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು

ಕೆಂಪೇಗೌಡರು ಬೆಂಗಳೂರನ್ನು ಯೋಜನಾಬದ್ಧವಾಗಿ ನಿರ್ಮಿಸಿದರು, ಎಲ್ಲಾ ಸಮುದಾಯಗಳಿಗೂ ಅವಕಾಶ ಕಲ್ಪಿಸಿದರು ಮತ್ತು ನಗರದ ಅಭಿವೃದ್ಧಿಗೆ ಹಲವು ಕೆರೆಗಳನ್ನು ನಿರ್ಮಿಸಿದರು ಎಂದರು.

ಕೆಂಪೇಗೌಡರು ಬೆಂಗಳೂರನ್ನು ನಿರ್ಮಿಸುವಾಗ, ನಗರವು ಭವಿಷ್ಯದಲ್ಲಿ ಹೇಗೆ ಬೆಳೆಯುತ್ತದೆ ಎಂದು ಯೋಚಿಸಿದ್ದರು. ಅವರು ನಗರವನ್ನು ನಾಲ್ಕು ದಿಕ್ಕುಗಳಲ್ಲಿ ವಿಸ್ತರಿಸಲು ಗಡಿ ಗೋಪುರಗಳನ್ನು ನಿರ್ಮಿಸಿದರು. ಇದು ನಗರವು ಅತೀ ವೇಗವಾಗಿ ಬೆಳೆಯಲು ಕಾರಣವಾಯಿತು. ಅವರು ಪ್ರತಿ ವೃತ್ತಿಯವರಿಗೂ ಪ್ರತ್ಯೇಕ ಪೇಟೆಗಳನ್ನು ನಿರ್ಮಿಸಿದರು, ಇದರಿಂದಾಗಿ ಎಲ್ಲಾ ಸಮುದಾಯದ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಯಿತು. ಅವರು ನೀರಿನ ಅಭಾವ ಉಂಟಾಗದಂತೆ ಅನೇಕ ಕೆರೆಗಳನ್ನು ನಿರ್ಮಿಸಿದರು ಎಂದರು.

ಕೆಂಪೇಗೌಡರ ದೂರದೃಷ್ಟಿಯಿಂದಾಗಿ, ಬೆಂಗಳೂರು ಇಂದು ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ. ಅವರ ಆಡಳಿತದಲ್ಲಿ, ನಗರವು ವ್ಯಾಪಾರ, ವಾಣಿಜ್ಯ ಮತ್ತು ಕೃಷಿಯಲ್ಲಿ ಅಭಿವೃದ್ಧಿ ಹೊಂದಿತು. ಅವರು ಬೆಂಗಳೂರನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಶ್ರಮಿಸಿದರು, ಮತ್ತು ಅವರ ಈ ಪ್ರಯತ್ನಗಳು ಇಂದಿಗೂ ಬೆಂಗಳೂರಿನಲ್ಲಿ ಕಾಣಸಿಗುತ್ತವೆ. ಕೆಂಪೇಗೌಡರು ನಗರದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಎಂದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ನಾಡುಪ್ರಭು ಕೆಂಪೇಗೌಡರು ನಿರ್ಮಿಸಿರುವ ಬೆಂಗಳೂರು ಬೃಹತ್ ಮಟ್ಟದಲ್ಲಿ ಬೆಳೆದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಪಡೆದುಕೊಂಡಿದೆ. ಅವರು ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿಶ್ಚಲಾನಂದ ಸ್ವಾಮೀಜಿ ಮಾತನಾಡಿ, ನಾಡಪ್ರಭು ಕೆಂಪೇಗೌಡರು 15, 16ನೇ ಶತಮಾನದಲ್ಲೇ ಬಬ್ಬ ವೈಜ್ಞಾನಿಕ ಚಿಂತಕನಾಗಿದ್ದು, ಒಬ್ಬ ದಾರ್ಶನಿಕನಾಗಿ, ಒಬ್ಬ ಶ್ರೇಷ್ಠ ಸಾಮಂತನಾಗಿ ದಕ್ಷಿಣ ಭಾರತದಲ್ಲಿ ವಿಜಯನಗರ ಸಾಮ್ರಾಜ್ಯಕ್ಕೆ ಹಿಂದೂಧರ್ಮವನ್ನು ರಕ್ಷಣೆ ಮಾಡಬೇಕು. ಭಾರತೀಯ ಸಂಸ್ಕೃತಿ ರಕ್ಷಣೆ ಮಾಡಬೇಕು. ಎಲ್ಲರೂ ಸಂತೋಷ, ನೆಮ್ಮದಿಯಿಂದ ಇರಬೇಕು ಎಂದು ಸಮಾಜದ ಏಕೈಕ ಸಾಮಂತರಾಗಿ ಸಾಮಂತಿಕ ನಿಷ್ಠೆಯನ್ನು ಎತ್ತಿ ತೋರಿಸಿದ್ದಾರೆ ಎಂದರು.

ಬೆಂಗಳೂರು ಸುಂದರನಗರವನ್ನು ಶಕ್ತಿ ಕೇಂದ್ರವನ್ನು ಅಂತಾರಾಷ್ಟ್ರೀಯ ಮಟ್ಟದ ಸಿಟಿಯನ್ನು ನಿರ್ಮಾಣ ಮಾಡುವುದಕ್ಕೆ ಸಂಕಲ್ಪದ ಬೀಜಗಳನ್ನು ಬಿತ್ತಿದ್ದದವರು ನಾಡಪ್ರಭು, ಮಹಾಪ್ರಭು ಕೆಂಪೇಗೌಡರು ಅವರನ್ನು ನಾವೆಲ್ಲರೂ ಗೌರವದಿಂದ ಗೌರವಿಸಬೇಕಾಗುತ್ತದೆ. ಅಂತಹ ಧೀಮಂತ ನಾಯಕರು ಹುಟ್ಟಬೇಕು. ಅವರ ನಮಗೆಲ್ಲ ಪ್ರೇರಣೆಯಾಗಬೇಕು ಆ ಮೂಲಕ ಒಂದು ಗ್ರಾಮ, ಒಂದು ಜಿಲ್ಲೆ, ತಾಲೂಕು ನಿರ್ಮಾಣ ಆಗಲು ಸಾಧ್ಯವಾಗುತ್ತದೆ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ ಎಂದರು.

ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಪ್ರಾಸ್ತಾವಿಕ ಭಾಷಣ ಮಾಡಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಾಜಿ ಶಾಸಕ ಆರ್.ನರೇಂದ್ರ, ಚೂಡಾಧ್ಯಕ್ಷ ಮಹಮ್ಮದ್ ಅಕ್ಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ‌ ಎಸ್.ಎಂ.ರವೀಂದ್ರ, ಗಣಿ ಉದ್ಯಮಿ ಶ್ರೀನಿಧಿಕುದರ್, ರೈತ ಮುಖಂಡ ಮೂಡ್ಲುಪುರ ನಾಗರಾಜು, ಕರಿಯನಕಟ್ಟೆ ಜಯಪ್ರಕಾಶ್ ಸೇರಿದಂತೆ

ಹಲವರಿಗೆ ನಾಡುಪ್ರಭು ಕೆಂಪೇಗೌಡರವರ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಯನ, ನಾಗೇಶ್ ರಾಗಿ ಮುದ್ದನಹಳ್ಳಿ, ಜಿ.ಪಂ.ಉಪ‌ಕಾರ್ಯದರ್ಶಿ ಶೃತಿ, ಚಾಮರಾಜನಗರ ವಿಶ್ವವಿದ್ಯಾಲಯ ಕುಲ ಸಚಿವ ಆರ್.ಲೋಕನಾಥ್, ಕಾವೇರಿ ನದಿ ಸಂರಕ್ಷಣಾ ಸಮಿತಿ ಎಚ್.ಕೆ.ರಾಮು, ಮೈಸೂರು ಸಿಂಡಿಕೇಟ್ ಮಾಜಿ ಸದಸ್ಯ ಡಾ.ಇ.ಸಿ.ನಿಂಗರಾಜೇಗೌಡ, ಸುಶೀಲ ನಂಜಪ,ಬ್ರೈಟ್ ಕಾಲೇಜ್ ಅಧ್ಯಕ್ಷ ಯದುನಂದನ್, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್‌ನಾಯಕ, ದೊಡ್ಡರಾಯಪೇಟೆ ರವಿಗೌಡ, ಪಣ್ಯದಹುಂಡಿರಾಜು, ಅರುಣ್‌ ಕುಮಾರ್ ಗೌಡ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''