ಇಂದಿನಿಂದ ನಾಗಲಮಡಿಕೆ ಸುಬ್ರಮಣ್ಯೇಶ್ವರ ಜಾತ್ರೆ

KannadaprabhaNewsNetwork |  
Published : Jan 05, 2025, 01:31 AM IST
ಪಾವಗಡ,ಜ.5ರಂದು ತಾಲೂಕಿನ ನಾಗಲಮಡಿಕೆ ಗ್ರಾಮದ ಶ್ರೀ ಸುಬ್ರಮಣ್ಯಸ್ವಾಮಿಯ ಬ್ರಹ್ಮರಥೋತ್ಸವದ ಪ್ರಯುಕ್ತ ಪೂರ್ವ ಸಿದ್ದತೆ ಕುರಿತು ತಹಸೀಲ್ದಾರ್‌ ಡಿ.ಎನ್‌.ವರದರಾಜು ಹಾಗೂ ತಾಪಂ ಇಒ ಜಾನಕಿರಾಮ್‌ ಪರಿಶೀಲನೆ ನಡೆಸಿದರು.ಫೋಟೋ 4ಪಿವಿಡಿ5ತಾಲೂಕಿನ ನಾಗಲಮಡಿಕೆ ಗ್ರಾಮದ ಶ್ರೀಸುಬ್ರಮಣ್ಯಸ್ವಾಮಿ ಬ್ರಹ್ಮ ರಥೋತ್ಸವದ ಹಿನ್ನಲೆಯಲ್ಲಿ ಸಿದ್ದತೆಯಲ್ಲಿರುವ ಸುಬ್ರಮಣ್ಯಸ್ವಾಮಿ ದೇವರು   | Kannada Prabha

ಸಾರಾಂಶ

ತಾಲೂಕಿನ ನಾಗಲಮಡಿಕೆ ಗ್ರಾಮದ ಸುಪ್ರಸಿದ್ಧ ಶ್ರೀ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದು ಷಷ್ಟಿ ಪ್ರಯುಕ್ತ ಭಾನುವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯಸ್ವಾಮಿಯ ಬ್ರಹ್ಮರಥೋತ್ಸವ ಹಮ್ಮಿಕೊಂಡಿರುವುದಾಗಿ ತಹಸೀಲ್ದಾರ್ ಡಿ.ಎನ್.ವರದರಾಜು ಹಾಗೂ ತಾಪಂ ಇಒ ಜಾನಕಿರಾಮ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಪಾವಗಡ ತಾಲೂಕಿನ ನಾಗಲಮಡಿಕೆ ಗ್ರಾಮದ ಸುಪ್ರಸಿದ್ಧ ಶ್ರೀ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದು ಷಷ್ಟಿ ಪ್ರಯುಕ್ತ ಭಾನುವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯಸ್ವಾಮಿಯ ಬ್ರಹ್ಮರಥೋತ್ಸವ ಹಮ್ಮಿಕೊಂಡಿರುವುದಾಗಿ ತಹಸೀಲ್ದಾರ್ ಡಿ.ಎನ್.ವರದರಾಜು ಹಾಗೂ ತಾಪಂ ಇಒ ಜಾನಕಿರಾಮ್ ತಿಳಿಸಿದ್ದಾರೆ.ತಾಲೂಕು ಆಡಳಿತ ಹಾಗೂ ದೇವಸ್ಥಾನದ ಸಮಿತಿಯಿಂದ ಜ.5ರಿಂದ ಜ.10ರವರೆವಿಗೆ ಇಲ್ಲಿನ ಸುಪ್ರಸಿದ್ದ ತಾಲೂಕಿನ ನಾಗಲಮಡಿಕೆ ಗ್ರಾಮದ ಶ್ರೀ ಸುಬ್ರಮಣ್ಯಸ್ವಾಮಿ ಜಾತ್ರಾಮಹೋತ್ಸವ ಕೈಗೊಂಡಿದ್ದು ಅನೇಕ ರೀತಿಯ ಧಾರ್ಮಿಕ ವಿಧಿವಿಧಾನಗಳ ಮೂಲಕ ಪೂಜೆಗಳು ಜರುಗಲಿವೆ. ಜ.5ರಂದು ಹಮ್ಮಿಕೊಂಡಿದ್ದ ಶ್ರೀ ಸುಬ್ರಮಣ್ಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಎಚ್.ವಿ.ವೆಂಕಟೇಶ್ ಚಾಲನೆ ನೀಡಲಿದ್ದು, ಮಾಜಿ ಸಚಿವ ವೆಂಕಟರಮಣಪ್ಪ, ಪುರಸಭೆ ಅಧ್ಯಕ್ಷ ಪಿ.ಎಚ್.ರಾಜೇಶ್ ಹಾಗೂ ಸ್ಥಳೀಯ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.

ಮಡೆಸ್ನಾನಕ್ಕೆ ನಿರ್ಬಂಧ ಹೇರಿದ್ದು, ಉತ್ತರ ಪಿನಾಕಿನಿ ನದಿ ಡ್ಯಾಂನಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾದ ಕಾರಣ ತಾಲೂಕು ಆಡಳಿತದಿಂದ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ. ದೇವಸ್ಥಾನ ಮುಂಭಾಗದ ನದಿ ತೀರದಲ್ಲಿ ಸ್ನಾನ ಮಾಡಲು ಅವಕಾಶವಿದ್ದು ,ಬ್ಯಾರಿಕೇಡ್ಗಳ ನಿರ್ಮಾಣ ಕೈಗೊಳ್ಳಲಾಗಿದೆ. ಸರದಿ ಸಾಲಿನಲ್ಲಿ ದೇವಸ್ಥಾನಕ್ಕೆ ತೆರಳಿ ಶ್ರೀ ಸುಬ್ರಮಣ್ಯಸ್ವಾಮಿಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆಂಧ್ರಪ್ರದೇಶ, ತಮಿಳುನಾಡು ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಮುಂಜಾಗ್ರತ ಕ್ರಮ ವಹಿಸಲಾಗಿದೆ.ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ವ್ಯವಸ್ಥೆಗೆ ಭಕ್ತರು ಸಹಕರಿಸುವಂತೆ ತಹಸೀಲ್ದಾರ್ ವರದರಾಜು ಮನವಿ ಮಾಡಿದ್ದಾರೆ.

ಇದೇ ವೇಳೆ ಕಂದಾಯ ಇಲಾಖೆಯ ಆರ್‌ಐ ನಾರಾಯಣ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಹನುಮಂತರಾಯಪ್ಪ, ಕಂದಾಯ ಅಧಿಕಾರಿಗಳಾದ ಮಧು, ರವಿಕುಮಾರ್, ಪಾರುಪತ್ತೇದಾರ ಉಮಾಶಂಕರ್ ಇತರರಿದ್ದರು.

ಕೋಟ್‌

ಅನೇಕ ವರ್ಷಗಳಿಂದ ಆಚರಣೆ ಇದ್ದ ಮಡೆ ಸ್ನಾನವನ್ನು ನಿಷೇಧಿಸಿದ್ದು, ಆಚರಣೆ ಜಾರಿಯಾಗದಂತೆ ಕಂದಾಯ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳು ನಿಗಾವಹಿಸಿದ್ದಾರೆ. ಭಕ್ತಾಧಿಗಳು ದೇವಸ್ಥಾನ ಆವರಣ ಸೇರಿದಂತೆ ಎಲ್ಲಿಯೂ ಸಹ ಆಚರಣೆ ಮಾಡಬಾರದು. ಜಿಲ್ಲಾಡಳಿತ ಕೈಗೊಂಡಿರುವ ವ್ಯವಸ್ಥೆಗೆ ಸಹಕರಿಸಬೇಕು.

- ಜಾನಕಿರಾಮ್‌ ಇಒ ತಾಪಂ ಪಾವಗಡ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ವರ್ಷ: ದೇವಾಲಯಗಳಿಗೆ ಭಕ್ತರ ದಾಂಗುಡಿ
ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?