ಕರಡಹಳ್ಳಿ ಸೀತಾರಾಮು
ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು ಕೋಟಿ ರು. ಆರ್ಥಿಕ ಮೌಲ್ಯದ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಕಬಳಿಸಿರುವ ಪ್ರಕರಣ ತನಿಖೆ ಹಂತದಲ್ಲಿರುವಾಗಲೇ ತಾಲೂಕಿನಲ್ಲಿ ಮತ್ತೊಂದು ಭೂ ಕಬಳಿಕೆ ಪ್ರಕರಣ ಸದ್ದು ಮಾಡುತ್ತಿದೆ.
ತಾಲೂಕಿನ ಬೆಳ್ಳೂರು ಹೋಬಳಿಯ ಕತ್ತರಗುಪ್ಪೆ ಗ್ರಾಮದ ಸರ್ವೇ ನಂ.19ರ ಸರ್ಕಾರಿ ಗೋಮಾಳದ ಭೂಮಿಯಲ್ಲಿ ಸ್ಥಳೀಯರಲ್ಲದ ವ್ಯಕ್ತಿಯೊಬ್ಬರು ಅಕ್ರಮವಾಗಿ ತಂತಿಬೇಲಿ ಹಾಕಿ ಶೆಡ್ ನಿರ್ಮಿಸಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟಿಸಿ ಸರ್ಕಾರಿ ಗೋಮಾಳವನ್ನು ರಕ್ಷಿಸುವಂತೆ ತಹಸೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.ಕತ್ತರಗುಪ್ಪೆ ಗ್ರಾಮದ ಸರ್ವೇ ನಂ.19ರಲ್ಲಿ ಒಟ್ಟು 60.3 ಎಕರೆ ಸರ್ಕಾರಿ ಗೋಮಾಳವಿದೆ. ಈ ಭೂಮಿಯಲ್ಲಿ ಜಮೀನು ಮಂಜೂರು ಮಾಡಿಕೊಡುವಂತೆ 1988-89ರಲ್ಲಿ ಬಗರ್ಹುಕುಂ ಸಾಗುವಳಿ ಸಮಿತಿಗೆ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಕಾರ್ಯ ನಡೆಸಿ ಗ್ರಾಮದ 20ಕ್ಕೂ ಹೆಚ್ಚು ರೈತರಿಗೆ ತಲಾ 2 ರಿಂದ 2.5 ಎಕರೆಯಂತೆ ಕಳೆದ 2022ರಲ್ಲಿ ಕಿಮ್ಮತ್ತು ಕಟ್ಟಿಸಿಕೊಂಡು ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.ಇದೇ ಸರ್ವೇ ನಂಬರ್ನ ಸರ್ಕಾರಿ ಗೋಮಾಳದಲ್ಲಿ ಯಾವುದೇ ದಾಖಲೆಗಳು ಇಲ್ಲದಿದ್ದರೂ ಸಹ ಸ್ಥಳೀಯರಲ್ಲದ ವ್ಯಕ್ತಿಯೊಬ್ಬರು 30 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ಅಕ್ರಮವಾಗಿ ತಂತಿ ಬೇಲಿ ಹಾಕಿ ಶೆಡ್ ನಿರ್ಮಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಚಗರೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದೆ!:
ಅಕ್ರಮ ತಂತಿಬೇಲಿ ಮತ್ತು ಶೇಡ್ ತೆರವು:
ತಹಸೀಲ್ದಾರ್ ಜಿ.ಆದರ್ಶ ಅವರು ಸ್ಥಳ ಪರಿಶೀಲನೆ ನಡೆಸಿದ ವೇಳೆ ಮಹಿಳೆಯೊಬ್ಬರು ವಾಗ್ವಾದ ನಡೆಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಾಲೂಕಿನಲ್ಲಿ ಬಗೆದಷ್ಟು ಅಕ್ರಮ ಭೂ ಕಬಳಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಈ ಜಾಲದ ಹಿಂದೆ ಅದ್ಯಾವ ದೊಡ್ಡ ಶಕ್ತಿಗಳು ಕೆಲಸ ಮಾಡುತ್ತಿರಬಹುದೆಂಬುದು ಪ್ರಶ್ನೆಯಾಗಿದೆ.
- ಖಾಸಗಿ ವ್ಯಕ್ತಿ ಒಬ್ಬರಿಂದ ಅಕ್ರಮ ಶೆಡ್ ನಿರ್ಮಾಣ
- 30 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ಅಕ್ರಮ ತಂತಿ ಬೇಲಿ ನಿರ್ಮಾಣ
- ಚಗರೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದೆ ಎಂದ ಮಹಿಳೆ
- ಬಗೆದಷ್ಟು ಅಕ್ರಮ ಭೂ ಕಬಳಿಕೆ ಪ್ರಕರಣಗಳು ಬೆಳಕಿಗೆ