ನಾಗನೂರ ಅರ್ಬನ್ ಸಹಕಾರಿ ಸಂಘಕ್ಕೆ ₹2.61 ಕೋಟಿ ಲಾಭ: ತಡಸನವರ

KannadaprabhaNewsNetwork |  
Published : Apr 18, 2025, 12:34 AM IST
ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ  ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಪ್ರಗತಿ ಕುರಿತು ಕರೆದಿದ್ದ ಸಭೆಯಲ್ಲಿ ಸಂಘದ ಅಧ್ಯಕ್ಷ ಬಸವರಾಜ ತಡಸನವರ  ಮಾತನಾಡಿದರು. | Kannada Prabha

ಸಾರಾಂಶ

ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಕಳೆದ ಮಾರ್ಚ್‌ ಅಂತ್ಯಕ್ಕೆ ₹2.61 ಕೋಟಿ ಲಾಭವನ್ನು ಗಳಿಸಿ, ಗ್ರಾಮೀಣ ಭಾಗದಲ್ಲಿ ಪ್ರಗತಿಯ ದಾರಿಯಲ್ಲಿ ಸಾಗಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ತಡಸನವರ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಕಳೆದ ಮಾರ್ಚ್‌ ಅಂತ್ಯಕ್ಕೆ ₹2.61 ಕೋಟಿ ಲಾಭವನ್ನು ಗಳಿಸಿ, ಗ್ರಾಮೀಣ ಭಾಗದಲ್ಲಿ ಪ್ರಗತಿಯ ದಾರಿಯಲ್ಲಿ ಸಾಗಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ತಡಸನವರ ಹೇಳಿದರು.

ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ ಸಂಘದ ಪ್ರಗತಿ ಕುರಿತು ಕರೆದಿದ್ದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಸಹಕಾರಿ ಸಂಘವು ಕಳೆದ ಮಾರ್ಚ್‌ ಅಂತ್ಯಕ್ಕೆ ₹97.30 ಲಕ್ಷ ಶೇರು ಬಂಡವಾಳ ಹೊಂದಿ, ₹140.90 ಕೋಟಿ ಠೇವು ಸಂಗ್ರಹಿಸಿ, ವಿವಿಧ ತೆರನಾದ ₹116.81 ಕೋಟಿ ಸಾಲಗಳು ವಿತರಿಸಿ, ₹32.5 ಕೋಟಿ ಶಾಸನ ಬದ್ಧ ಹೂಡಿಕೆ ಮಾಡಿ, ₹13.29 ಕೋಟಿ ನಿಧಿಗಳನ್ನು ಹೊಂದುವುದರೊಂದಿಗೆ ಒಟ್ಟು ₹158.13 ಕೋಟಿ ದುಡಿಯುವ ಬಂಡವಾಳ ಹೊಂದಿದೆ ಎಂದರು. ಸಹಕಾರಿ ಸಂಘವು ಈಗಾಗಲೇ 14 ಶಾಖೆಗಳನ್ನು ಹೊಂದಿ ಎಲ್ಲ ಶಾಖೆಗಳು ಪ್ರಗತಿಯಲ್ಲಿದ್ದು, ಮುಂಬರುವ ದಿನಗಳ ಇನ್ನೂ 5 ಶಾಖೆಗಳ ಆರಂಭಿಸುವ ಮತ್ತು ಶಾಖೆಗಳ ಸ್ವಂತ ಕಟ್ಟಡ ಹೊಂದಲು ನಿವೇಶ ಖರೀದಿಸುವ ಗುರಿ ಹೊಂದಲಾಗಿದೆ ಎಂದರು.ಪ್ರಧಾನ ವ್ಯವಸ್ಥಾಪಕ ಪ್ರಕಾಶ ಅಂಗಡಿ ಮಾತನಾಡಿ, ಸಹಕಾರಿ ಸಂಘದ ಗ್ರಾಹಕರು ಸಕಾಲಕ್ಕೆ ವ್ಯವಹಾರ ನಡೆಸಿದರಿಂದ ಪ್ರಗತಿ ಪತಥದತ್ತ ಸಾಗುತ್ತಿವೆ ಎಂದರು.ಸಭೆಯಲ್ಲಿ ಪಟ್ಟಣದ ಹಿರಿಯರಾದ ಬಾಳಗೌಡ ಪಾಟೀಲ, ಸಹಕಾರಿ ಸಂಘದ ಉಪಾಧ್ಯಕ್ಷ ಶಿವಲಿಂಗಪ್ಪ ಗೋಟೂರ, ನಿರ್ದೇಶಕರಾದ ವೆಂಕಪ್ಪ ಪೂಜೇರಿ, ಮಲ್ಲಪ್ಪ ಲಕ್ಷ್ಮಪ್ಪ ಬಂಡಿ, ರುದ್ರಪ್ಪ ಭಾಗೋಜಿ, ಸುಭಾಸ ಸಣ್ಣಕ್ಕಿ, ಶಿವಾನಂದ ದಡ್ಡಿ, ರಾಮಪ್ಪ ಪದ್ದಿ, ಕೆಂಪಣ್ಣ ನಿಡಸೋಸಿ, ಶ್ರೇಯಾಂಶ ಮೆಳವಂಕಿ, ಕೆಂಪಣ್ಣ ಕರಿಹೊಳಿ, ದುಂಡಪ್ಪ ಬೆಳಕೂಡ, ವಿಠಲ ಬೆಳಕೂಡ, ಬಾಳಪ್ಪ ಬಡಕುಂದ್ರಿ, ರಾಮಗೌಡ ತಡಸನವರ, ರತ್ನಾ ಪಾಟೀಲ, ಜಯಶ್ರೀ ಕರಿಹೋಳಿ, ಸಂಘದ ಹಣಕಾಸು ಅಭಿವೃದ್ಧಿ ಅಧಿಕಾರಿಗಳಾದ ಭೀಮಪ್ಪ ಬಂಡಿವಡ್ಡರ, ಶಿವಾನಂದ ಕರೋಳಿ ಹಾಗೂ ಎಲ್ಲಾ ಶಾಖೆಗಳ ಸಿಬ್ಬಂದಿ ವರ್ಗದವರು ಇದ್ದರು. ಸಿದ್ಧಾರೂಢ ಕೆಸರಗೊಪ್ಪ ನಿರೂಪಿಸಿದರು. ಪ್ರಕಾಶ ಅಂಗಡಿ ಸ್ವಾಗತಿಸಿದರು. ರಮೇಶ ಕಂಬಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''