ತಾಲೂಕಿನ ಗೋಣಿತುಮಕೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ತುರುವೇಕೆರೆ
ತಾಲೂಕಿನ ಗೋಣಿತುಮಕೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದಿನ ಅಧ್ಯಕ್ಷೆ ಕಲ್ಪನಾ ಆಶೋಕ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ೧೪ ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಗೆ ೧೦ ಸದಸ್ಯರು ಭಾಗವಹಿಸಿದ್ದರು. ೪ ಸದಸ್ಯರು ಗೈರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಗ್ರೇಡ್ ೨ ಸುಮತಿ ಕರ್ತವ್ಯ ನಿರ್ವಹಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕೃಷ್ಣಯ್ಯ ಮುಂದುವರೆದಿದ್ದಾರೆ. ನೂತನ ಅಧ್ಯಕ್ಷರ ಬೆಂಬಲಿಗರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಮ್ಮ, ಲಕ್ಷ್ಮಮ್ಮ, ಕಲ್ಪನಾ, ಬೇಬಿತ್ಯಾಗರಾಜು, ಚಂದ್ರಯ್ಯ, ಕೆ.ವಿ.ಶಂಕರ್, ಜಯಲಕ್ಷ್ಮಮ್ಮ, ಎಂ.ಬಿ.ನೇತ್ರಾವತಿ ಪಿಡಿಒ ಸೋಮಶೇಖರ್, ಕಾರ್ಯದರ್ಶಿ ಲೋಕೇಶ್ ನಾಯಕ್, ಗುತ್ತಿಗೆದಾರರಾದ ಬಡಗರಹಳ್ಳಿ ತ್ಯಾಗರಾಜು, ಪ್ರಕಾಶ್ ಸೇರಿ ಇತರರು ಅಭಿನಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.