ಜಿಲ್ಲಾಸ್ಪತ್ರೆ ರಸ್ತೆ ಗುಣಮಟ್ಟ ಪರಿಶೀಲಿಸಿದ ನಳಿನ್ ಅತುಲ್

KannadaprabhaNewsNetwork |  
Published : Jan 18, 2026, 02:30 AM IST
ಹೊಸಪೇಟೆ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾಸ್ಪತ್ರೆಗೆ ಕೆಕೆಆರ್‌ಡಿಬಿ ಕಾರ್ಯದರ್ಶಿ ನಳಿನ್ ಅತುಲ್ ಅವರು ಶನಿವಾರ ಭೇಟಿ ನೀಡಿದರು. | Kannada Prabha

ಸಾರಾಂಶ

ಕೆಕೆಆರ್‌ಡಿಬಿಯ ₹16.5 ಕೋಟಿ ಅನುದಾನದಲ್ಲಿ ಜಿಲ್ಲಾಸ್ಪತ್ರೆ ಒಳಾವರಣ, ಹೊರರಸ್ತೆಗಳು ಮತ್ತು ಚರಂಡಿಗಳ ನಿರ್ಮಾಣ ಕಾಮಗಾರಿಯನ್ನು ಪಿಡಬ್ಲುಡಿಗೆ ನೀಡಲಾಗಿದೆ.

ಹೊಸಪೇಟೆ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾಸ್ಪತ್ರೆಗೆ ಕೆಕೆಆರ್‌ಡಿಬಿ ಕಾರ್ಯದರ್ಶಿ ನಳಿನ್ ಅತುಲ್ ಶನಿವಾರ ಭೇಟಿ ನೀಡಿ, ಪಿಡಬ್ಲುಡಿ ನಿರ್ಮಿಸುತ್ತಿರುವ ರಸ್ತೆ ಗುಣಮಟ್ಟ ಪರಿಶೀಲಿಸಿ ಅಧಿಕಾರಿಗಳ ವಿರುದ್ಧ ಗರಂ ಆದರು.ಇಲ್ಲಿನ ನೂರು ಹಾಸಿಗೆಗಳ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಜಿಲ್ಲಾಸ್ಪತ್ರೆ ಆವರಣದಲ್ಲಿ ರಸ್ತೆ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ರಸ್ತೆ ಅಗೆಸಿ ತಾವೇ ಸ್ಕೇಲ್ ಹಿಡಿದು, ರಸ್ತೆ ನಿರ್ಮಾಣ ಸಮರ್ಪಕವಾಗಿಲ್ಲ. ಇದನ್ನು ಸರಿಪಡಿಸಿ ಎಂದು ಸ್ಥಳದಲ್ಲಿದ್ದ ಪಿಡಬ್ಲುಡಿ ಇಇ ದೇವದಾಸ್‌ಗೆ ಸೂಚಿಸಿದರು.

ಕೆಕೆಆರ್‌ಡಿಬಿಯ ₹16.5 ಕೋಟಿ ಅನುದಾನದಲ್ಲಿ ಜಿಲ್ಲಾಸ್ಪತ್ರೆ ಒಳಾವರಣ, ಹೊರರಸ್ತೆಗಳು ಮತ್ತು ಚರಂಡಿಗಳ ನಿರ್ಮಾಣ ಕಾಮಗಾರಿಯನ್ನು ಪಿಡಬ್ಲುಡಿಗೆ ನೀಡಲಾಗಿದೆ. ಆಸ್ಪತ್ರೆಯೇ ಮುಂದೆ ರಸ್ತೆಯ ಎರಡು ಕಡೆಗಳಲ್ಲಿ ಅಗೆಸಿ ನೋಡಿದ ಅವರು, ನೆಲಮಟ್ಟದಿಂದ ರಸ್ತೆ ನಿಯಮಾನುಸಾರ ಮತ್ತು ಮಟಿರಿಯಲ್ ಕೂಡ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಜಿಲ್ಲಾಸ್ಪತ್ರೆ ಕಟ್ಟದಲ್ಲಿ ಓಟಿ ಸೇರಿದಂತೆ ಇತರೆ ಸೌಕರ್ಯಗಳನ್ನು ಪರಿಶೀಲಿಸಿದ ಅವರು, ಜತೆಗಿದ್ದ ಜಿಪಂ, ಸಿಇಒ ಅಕ್ರಂ ಷಾ ಅವರಿಂದ ಮಾಹಿತಿ ಪಡೆದರು. ಆಸ್ಪತ್ರೆ ಆರಂಭಕ್ಕೆ ಬೇಕಾದ ಅಗತ್ಯ ವೈದ್ಯಕೀಯ ಉಪಕರಣಗಳು ಸೇರಿದಂತೆ ಇತರೆ ಮಾಹಿತಿಗಳನ್ನು ಡಿಎಚ್‌ಒ ಡಾ.ಎಲ್.ಆರ್.ಶಂಕರನಾಯ್ಕ ಅವರಿಂದ ಪಡೆದುಕೊಂಡ ಅವರು, ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದ ಪ್ರಸ್ತಾವವನ್ನು ಮತ್ತೊಮ್ಮೆ ಕಳಿಸಲು ತಿಳಿಸಿದರು.

ಹೊಸಪೇಟೆ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾಸ್ಪತ್ರೆಗೆ ಕೆಕೆಆರ್‌ಡಿಬಿ ಕಾರ್ಯದರ್ಶಿ ನಳಿನ್ ಅತುಲ್ ಅವರು ಶನಿವಾರ ಭೇಟಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ