ಲಕ್ಷ್ಮೇಶ್ವರ: ತಾಲೂಕಿನ ಅಧಿಕ ರೈತರು ಹೆಸರು ಬೆಳೆ ಬೆಳೆದಿದ್ದಾರೆ, ಮಾರುಕಟ್ಟೆಯಲ್ಲಿ ಹೆಸರು ಕಾಳು ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದು. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ, ಆದ್ದರಿಂದ ಶೀಘ್ರದಲ್ಲಿ ಹೆಸರು ಕಾಳುಗಳನ್ನು ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಮಾಡಿ ರೈತರ ಜೀವ ಉಳಿಸುವ ಕಾರ್ಯ ಮಾಡಬೇಕು ಎಂದು ಕರವೇ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಗೆಸೊಪ್ಪಿನ ಗ್ರೇಡ್ರ-2 ತಹಸೀಲ್ದಾರ್ ಮಂಜುನಾಥ ಅಮಾಸಿಗೆ ಮನವಿ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆಯ ಲಕ್ಷ್ಮೇಶ್ವರ ತಾಲೂಕು ಹಾಗೂ ನಗರ ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ಮಾತನಾಡಿದರು.
ಈ ವೇಳೆ ತಹಸೀಲ್ದಾರ್ ಅವರು, ಜಿಲ್ಲಾಧಿಕಾರಿಗಳ ಗಮನಕ್ಕೆ ತರುವದಾಗಿ ಹೇಳಿದರು.
ಪ್ರತಿಭಟನೆಯಲ್ಲಿ ಸಿ.ಎಫ್. ಗಡ್ಡದೇವರಮಠ, ಲೋಕೇಶ ಸುತಾರ, ಪ್ರಕಾಶ ಕೊಂಚಿಗೇರಿಮಠ, ಪ್ರವೀಣ ಗೌರಿ, ಶಂಕರಗೌಡ ಪಾಟೀಲ, ಕುಮಾರ ನರೇಗಲ್ಲ, ಪ್ರವೀಣ ಗುಡಗೇರಿ, ರಮೇಶ ಸುತಾರ, ಚಂದ್ರು ನೀರಲಗಿ, ಯಶವಂತ ಶಿರಹಟ್ಟಿ, ಕಿರಣ ಬೇಂದ್ರೆ, ಪ್ರವೀಣ ಕಣವಿ, ಪ್ರಮೋದ ಉಮಚಗಿ, ಶಿವಲೀಲಾ ಪುರದ, ಸೀಮವ್ವ ಪೂಜಾರ, ರೇಣುಕಾ ಮಲ್ಲೂರ, ಲಕ್ಷ್ಮವ್ವ ಮಳ್ಳಳ್ಳಿ, ಪ್ರಭಾವತಿ ಶೆಟ್ಟರ್, ಮಾಯವ್ವ ಮಲ್ಲಿಗವಾಡ ಸೇರಿದಂತೆ ಅನೇಕರು ಇದ್ದರು.