ಯಲಬುರ್ಗಾ:
ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಶನಿವಾರ ತಾಲೂಕು ಯಲಬುರ್ಗಾ-ಕುಕನೂರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜೂನ್, ಜುಲೈ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆ ಆಗಬಹುದು. ಈಗಿನಿಂದಲೇ ಕಾರ್ಯಕರ್ತರ ಜತೆ ಸಭೆ ನಡೆಸುವಂತೆ ಸಿಎಂ ಸೂಚಿಸಿದ್ದಾರೆ. ಶಾಸಕ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಿಂದ ಸಭೆ ಪ್ರಾರಂಭಿಸಿದ್ದು ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಹೀಗಾಗಿ 7 ಜಿಪಂ ಹಾಗೂ ಎಲ್ಲ ತಾಪಂ ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಬೇಕು. ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸಿ ಮತ ಕೇಳಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.ಶಾಸಕ ಬಸವರಾಜ ರಾಯರಡ್ಡಿ ಅವರು ತಳಕಲ್ನ ಎಂಜಿನಿಯರಿಂಗ್ ಕಾಲೇಜ್, ಗುನ್ನಾಳ ಪಾಲಟೆಕ್ನಿಕ್ ಕಾಲೇಜು, ತಳಬಾಳನ ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ನಿಲಯ ಮಂಜೂರು ಮಾಡುವಂತೆ ಕೋರಿದ್ದಾರೆ. ಜೂನ್ ತಿಂಗಳಲ್ಲಿ ಅವುಗಳನ್ನು ಪ್ರಾರಂಭಿಸಲು ಮಂಜೂರಾತಿ ಕೊಡಿಸುತ್ತೇನೆಂದು ಭರವಸೆ ನೀಡಿದರು.
ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಕೇಳುವ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
ನೂತನ ಪದಾಧಿಕಾರಿಗಳಾದ ರೇವಣೆಪ್ಪ ಸಂಗಟಿ, ಶರಣಪ್ಪ ಗಾಂಜಿ, ಆನಂದ ಉಳ್ಳಾಗಡ್ಡಿ, ಸಂಗಣ್ಣ ಟೆಂಗಿನಕಾಯಿ, ರಾಘವೇಂದ್ರ ಜೋಶಿ, ವೀರನಗೌಡ ಬಳೂಟಗಿ, ಹನುಮಂತಗೌಡ ಪಾಟೀಲ, ಬಿ.ಎಂ. ಶಿರೂರ, ಮಹೇಶ ಹಳ್ಳಿ, ಮಂಜುನಾಥ ಕಡೇಮನಿ, ಡಾ. ಶಿವನಗೌಡ ದಾನರಡ್ಡಿ ಇದ್ದರು.