ಸಂಸ್ಕೃತಿ, ಪರಂಪರೆಯ ಉಳಿವಿಗಾಗಿ ಶ್ರಮಿಸಿ

KannadaprabhaNewsNetwork |  
Published : Oct 22, 2024, 12:04 AM IST
12 | Kannada Prabha

ಸಾರಾಂಶ

ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು

ಕನ್ನಡಪ್ರಭ ವಾರ್ತೆ ಮೈಸೂರುನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ. ಪ್ರತಿಯೊಬ್ಬರು ಅದಕ್ಕಾಗಿ ಶ್ರಮಿಸಬೇಕು ಎಂದು ಸಮಾಜ ಸೇವಕ ಕೆ. ರಘುರಾಮ್ ವಾಜಪೇಯಿ ಕರೆ ನೀಡಿದರು.ನಗರದ ರಾಮಾನುಜ ರಸ್ತೆಯಲ ನಮೋ ಯೋಗ ಭವನದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ಸೋಮವಾರ ಆಯೋಜಿಸಿದ್ದ ದಸರಾ ಮನೆ ಮನೆ ಗೊಂಬೆ ಕೂರಿಸುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ತಿಳಿಸಿದರು.ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್ ಮಾತನಾಡಿ, ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು. ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ. ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ, ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ, ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ ಎಂದರು.ಮೈಸೂರಿನ ಮನೆ ಮನೆಗಳಲ್ಲಿ ಗೊಂಬೆ ಕೂರಿಸುವ ಮೂಲಕ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.ಈ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 80 ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು. ಕಾಂಗ್ರೆಸ್ ಮುಖಂಡ ಎನ್.ಎಂ. ನವೀನ್ ಕುಮಾರ್, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಎನ್ಐಇ ಕಾಲೇಜಿನ ಪ್ರೊ.ಸಿ.ಕೆ. ವನಮಾಲ, ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷೆ ಸವಿತಾ ಘಾಟ್ಕೆ, ಗ್ರಾಜಿಯೇಟ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ವರಲಕ್ಷ್ಮಿ ಅಜಯ್, ಚಕ್ರಪಾಣಿ, ಮಹಾನ್ ಶ್ರೇಯಸ್, ಜಯಶ್ರೀ ಶಿವರಾಂ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ