ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ತಾಲೂಕಿನ ಪ್ರತಿ ಗ್ರಾಮದಿಂದ ಅಂದು ಮಧ್ಯಾಹ್ನ 2 ಗಂಟೆ ಬೆಳ್ತಂಗಡಿ ಎಪಿಎಂಸಿಗೆ ಗೋಗ್ರಾಸವನ್ನು ತರಲಿದ್ದಾರೆ. ಅಲ್ಲಿಂದ ವಾಹನ ಮೆರವಣಿಗೆ ಮೂಲಕ ಅದನ್ನು ಕಳೆಂಜ ಗೋಶಾಲೆಗೆ ಸಮರ್ಪಿಸಲಾಗುವುದು. ಉಜಿರೆ, ಧರ್ಮಸ್ಥಳ, ನಿಡ್ಲೆ, ಕೊಕ್ಕಡದ ಭಾಗದವರು ಅಲ್ಲಲ್ಲಿ ಶೋಭಾಯಾತ್ರೆಯಲ್ಲಿ ಸೇರಿಕೊಳ್ಳಲಿದ್ದಾರೆ. ಗೋ ಪ್ರೇಮಿಗಳು ಹಸಿ ಹುಲ್ಲು, ಒಣಹುಲ್ಲು ಪಶು ಆಹಾರ, ಕೃಷಿ ಉತ್ಪನ್ನಗಳಾದ ಅಡಕೆ, ತೆಂಗಿನಕಾಯಿ, ಅಕ್ಕಿ ಇತ್ಯಾದಿಗಳನ್ನು ಹೊರೆಕಾಣಿಕೆಯಾಗಿ ಅರ್ಪಿಸಬಹುದಾಗಿದೆ ಎಂದು ತಿಳಿಸಿದರು. 26ರಂದು ನಂದಗೋಕುಲ ದೀಪೋತ್ಸವ: ಮೇ 26 ರಂದು ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಇಳಿಸಂಜೆ 6.30ಕ್ಕೆ ಗೋ ಶಾಲೆಯಲ್ಲಿ ನಂದಗೋಕುಲ ದೀಪೋತ್ಸವ ನಡೆಯಲಿದೆ. ದೀಪೋತ್ಸವ ಸಂಚಾಲನಾ ಸಮಿತಿಯ ಗೌರವಾಧ್ಯಕ್ಷ, ಉದ್ಯಮಿ ಶಶಿಧರ ಶೆಟ್ಟಿ ನನೇತೃತ್ವದಲ್ಲಿ ಗೋಮಾತೆಗೆ ನಮಿಸುವ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ ಎಂದು ಸುಬ್ರಹ್ಮಣ್ಯ ಕುಮಾರ್ ಅಗರ್ತ ಹೇಳಿದರು. ಸಮಿತಿ ಪ್ರಧಾನ ಸಂಚಾಲಕ ಶಶಿರಾಜ್ ಶೆಟ್ಟಿ ಮಾತನಾಡಿ, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ಎಲ್ಲ ತಯಾರಿ ನಡೆಸಲಾಗುತ್ತಿದೆ. ಸುಮಾರು ಐದು ವರ್ಷಕ್ಕೆ ಬೇಕಾದಷ್ಟು ಗೋ ಗ್ರಾಸ ಸಂಗ್ರಹಿಸುವ ಗುರಿ ಇಟ್ಟು ಕೊಳ್ಳಲಾಗಿದೆ. ತಾಲೂಕಿನ ಪ್ರತಿ ಮನೆಗೆ ಆಮಂತ್ರಣ ಪತ್ರಿಕೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಪಂಚಶ್ರೀ, ಪದ್ಮಕುಮಾರ್ ಎಚ್. ಇದ್ದರು.