ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಪಟ್ಟಣದ ಮೂಲನಂದೀಶ್ವರ ದೇವಸ್ಥಾನದ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ನಂದಿ ಸತ್ಯಾಗ್ರಹದ ಮುಕ್ತಾಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಂದಿ ಕೃಷಿಯೊಂದಿಗೆ ಆಧುನಿಕ ತಂತ್ರ ಜ್ಞಾನಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನ ಮಾಡಬೇಕಾಗಿದೆ. ಅದಕ್ಕಾಗಿ, ಜೋಡೆತ್ತಿನ ಕೃಷಿಕರಿಗೆ ಪ್ರೋತ್ಸಾಹ ಧನವನ್ನು ನೀಡುವ ಯೊಜನೆಯೊಂದನ್ನು ಜಾರಿಗೆ ತರಲು ಸರ್ಕಾರದ ಮಟ್ಟದಲ್ಲಿ ಸತತವಾಗಿ ಪ್ರಯತ್ನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನಂದಿ ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಬಸವರಾಜ ಬಿರಾದಾರ ಮಾತನಾಡಿ, ಕಳೆದ 11 ದಿನಗಳಿಂದ ನಡೆದ ನಂದಿ ಸತ್ಯಾಗ್ರಹಕ್ಕೆ ವಿವಿಧ ಸ್ಥಳಗಳ ಸ್ವಾಮೀಜಿಗಳು ಹಾಗೂ ಹಿರಿಯರ ನೇತೃತ್ವದಲ್ಲಿ ಕೃಷಿಕರು ಅಗಮಿಸಿ ನಿರಂತರವಾಗಿ ಬೆಂಬಲವನ್ನು ನೀಡಿದ್ದಾರೆ. ವಿವಿಧ ರೈತ ಸಂಘಟನೆಗಳು, ವಿವೇಕ ಬ್ರಿಗೇಡ್, ಸ್ಥಳೀಯ ಗೊಬ್ಬರ ಮಾರಾಟಗಾರರ ಸಂಘ, ಪಂಚಸೇನಾ ಹಾಗೂ ಇತರ ಸಂಘ ಸಂಸ್ಥೆಗಳು ಬೆಂಬಲವನ್ನು ನೀಡಿವೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್, ಬಸವನಬಾಗೇವಾಡಿ ಘಟಕದ ವತಿಯಿಂದ ಕವಿಗೋಷ್ಠಿ ಆಯೋಜಿಸಿ ಬಹು ಜನರಿಗೆ ಜೋಡೆತ್ತಿನ ಕೃಷಿಕರ ಮಹತ್ವ ತಿಳಿಸುವ ಪ್ರಯತ್ನ ಮಾಡಿದೆ ಎಂದು ಮಾಹಿತಿ ನೀಡಿದರು.ಗುರು-ಶಿಷ್ಯ ಪರಂಪರೆಯ ಪುನಃಸ್ಥಾಪನೆಯ ಉದ್ದೇಶದಿಂದ ಪ್ರಾರಂಭಿಸಿದ ನಂದಿ ಸತ್ಯಾಗ್ರಹವು ಮೊದಲ ಹಂತದಲ್ಲಿ ಯಶಸ್ವಿಯಾಗಿದೆ ಎಂದರು.
ಸಾನಿಧ್ಯ ವಹಿಸಿದ್ಧ ಕರಭಂಟನಾಳದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಮುಂದಿನ ದಿನಗಳಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಯ ವಿಷಯವು ಬೃಹತ್ ವೇದಿಕೆಗಳಲ್ಲಿ ವ್ಯಕ್ತವಾಗುವಂತೆ ಪ್ರಯತ್ನಿಸಲಾಗುವುದು. ಸರ್ವರ ಒಳಿತನ್ನು ಒಳಗೊಂಡ ಈ ಕಾರ್ಯಕ್ಕೆ ಆದಷ್ಟು ಬೇಗನೆ ಯಶಸ್ಸು ಲಭಿಸಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಪೋಟೋ: ಬಸವನಬಾಗೇವಾಡಿಯ ಮೂಲನಂದೀಶ್ವರ ದೇವಸ್ಥಾನದ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ನಂದಿ ಸತ್ಯಾಗ್ರಹದಲ್ಲಿ ಶನಿವಾರ ಅಂತರಾಷ್ಟ್ರೀಯ ವಿಜ್ಞಾನಿ ಡಾ. ಚಂದ್ರಶೇಖರ ಬಿರಾದಾರ ಮಾತನಾಡಿದರು.
ಜೋಡೆತ್ತಿನ ರೈತರಿಗೆ ₹11000 ಪ್ರೋತ್ಸಾಹ ಧನದ ಬೇಡಿಕೆಗೆ ವಿವಿಧ ಗ್ರಾಮಗಳ ಗುರು-ಶಿಷ್ಯರು ಒಂದಾಗಿ ಬೆಂಬಲ ನೀಡಿದಂತೆ, ರಾಜ್ಯದ ಎಲ್ಲ ಸ್ಥಳಗಳಲ್ಲಿರುವ ಗುರು-ಶಿಷ್ಯ ಬಳಗ ಒಂದಾಗಿ ಬೆಂಬಲ ನೀಡಿದರೆ ಕೇವಲ ಒಂದು ತಿಂಗಳಲ್ಲಿ ಯೋಜನೆಯನ್ನು ಜಾರಿಗೆ ತರಲು ಸಾಧ್ಯವಿದೆ. ಬಸವನ ಬಾಗೇವಾಡಿಯ ನಂದಿ ಸತ್ಯಾಗ್ರಹವು ರಾಜ್ಯದ ಎಲ್ಲ ಗುರು-ಶಿಷ್ಯ ಬಳಗಕ್ಕೆ ಮಾದರಿಯಾಗಿ ನಿಲ್ಲಲಿದೆ. ಮುಂದಿನ ದಿನಗಳಲ್ಲಿ ಜೋಡೆತ್ತಿನ ಕೃಷಿ ಪುನಶ್ಚೇತನಕ್ಕಾಗಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಗುರು-ಶಿಷ್ಯರ ಸಮಾವೇಶ ಹಮ್ಮಿಕೊಳ್ಳುವ ಯೋಚನೆ ಇದೆ.