ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನ (ಯುಎಚ್ಆರ್ಎಸ್ಎಫ್) ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಂದಿ ಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಇದೇ ವೇಳೆ ಪರಿಸರಕ್ಕೆ ಮಾರಕವಾದ ಚಟುವಟಿಕೆಗಳೂ ನಡೆಯುತ್ತಿವೆ ಎಂದರು.
ರೋಪ್ ವೇನಿಂದ ಆಪತ್ತುಪ್ರವಾಸಿಗರನ್ನು ಆಕರ್ಷಿಸಲು ಸರ್ಕಾರ ಕೈಗೆತ್ತಿಕೊಂಡಿರುವ ರೋಪ್ ವೇ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದಾಗಿ ನಂದಿ ಬೆಟ್ಟಕ್ಕೆ ತೀವ್ರ ಆಪತ್ತು ಎದುರಾಗಿದೆ. ನಂದಿ ಬೆಟ್ಟವು ಭೂ ತಾಯಿಯ ವಕ್ಷ ಸ್ಥಳವಾಗಿದ್ದು ಅದನ್ನು ಬಗೆದು ರೋಪ್ ವೇ ಮಾಡಿದಲ್ಲಿ, ಭೂಕುಸಿತವಾಗುವ ಆತಂಕವಿದೆ. ತಕ್ಷಣವೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ತೀವ್ರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ‘ಅಪಾಯದ ಅಂಚಿಗೆ ಸಿಲುಕಿರುವ ನಂದಿ ಬೆಟ್ಟದ ಬಗ್ಗೆ ವ್ಯಾಪಕ ಅಧ್ಯಯನ ಕೈಗೊಳ್ಳಲಾಗಿದೆ. ಬೆಟ್ಟದಲ್ಲಿ ಪ್ರವಾಸಿಗರ ಸಂಖ್ಯೆ ವಿಪರೀತ ಏರಿಕೆಯಾಗುತ್ತಿದ್ದು, ರೆಸಾರ್ಟ್ಗಳು ಹೆಚ್ಚಾಗುತ್ತಿರುವ ಜತೆಗೆ ಅಲ್ಲಿನ ಪ್ರಕೃತಿಯ ಸೊಬಗಿನ ಮೇಲೆ ಒತ್ತಡ ತೀವ್ರಗೊಂಡಿದೆ. ಇದರಿಂದಾಗಿ ನಿಸರ್ಗ ಮುನಿಸಿಕೊಳ್ಳುವ ಸಾಧ್ಯತೆಯಿದೆ. ಆದ್ದರಿಂದ ರೋಪ್ ವೇ ಸೇರಿ ವಿವಿಧ ಅಭಿವೃದ್ದಿ ಚಟುವಟಿಕೆಗಳನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.
ನಂದಿ ಬೆಟ್ಟ ಉಳಿಸಿ ಎಂದು ಸರ್ಕಾರದ ವಿವಿಧ 11 ಇಲಾಖೆಗಳಿಗೆ ಈಗಾಗಲೇ ವರದಿ ಸಲ್ಲಿಸಲಾಗಿದೆ. ಆದರೆ, ಯಾವ ಇಲಾಖೆಯಿಂದಲೂ ನಮಗೆ ಪ್ರತಿಸ್ಪಂದನೆ ದೊರೆತಿಲ್ಲ. ಉಚ್ಚ ನ್ಯಾಯಾಲಯದಲ್ಲಿ ಸಹ ರೋಪ್ ವೇ ಬೇಡ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಸರ್ಕಾರಕ್ಕೆ ನ್ಯಾಯಾಲಯ ವರದಿ ಸಲ್ಲಿಸುವಂತೆ ಸೂಚಿಸಿದೆ ಎಂದರು.
ವಿಶ್ವಪಾರಂಪರಿಕ ತಾಣವಾಗಲಿ
ಸುದ್ದಿಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮುಷ್ಟೂರು ಶ್ರೀಧರ್, ಸಾಮಾಜಿಕ ಹೋರಾಟಗಾರರಾದ ಕ್ಯಾತಪ್ಪ, ರಫೀಕ್, ಜ್ಯೋತಿ ಇದ್ದರು.