ನಂದಿ ರಥಯಾತ್ರೆಗೆ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Mar 12, 2025, 12:51 AM IST
ಚಿತ್ರ:3. ಕನ್ನಡ ವೃತ್ತದಲ್ಲಿ ನಂದಿ ರಥಕ್ಕೆ ಸ್ವಾಗತ ಕೊರುತ್ತಿರುವುದು. | Kannada Prabha

ಸಾರಾಂಶ

ಮಂಗಳೂರಿನಿಂದ ಆರಂಭಗೊಂಡಿರುವ ನಂದಿ ರಥಯಾತ್ರೆಗೆ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಮಂಗಳೂರಿನಿಂದ ಆರಂಭಗೊಂಡಿರುವ ನಂದಿ ರಥಯಾತ್ರೆಗೆ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ಮಂಗಳವಾರ ಕನ್ನಡ ವೃತ್ತದಲ್ಲಿ ಜಮಾವಣೆಗೊಂಡಿದ್ದ ನಂದಿ ರಥಯಾತ್ರೆಯು ಆಗಮಿಸುತ್ತಿದ್ದಂತೆ ರಥಕ್ಕೆ ಕೊಡಗು ಜಿಲ್ಲಾ ವಿಶ್ವಹಿಂದೂ ಪರಿಷತ್ ಮಾಜಿ ಕಾರ್ಯದರ್ಶಿ ಡಿ.ನರಸಿಂಹ ಹಾಗೂ ಸುಂಟಿಕೊಪ್ಪ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ನಂತರ ಮೆರವಣಿಗೆಯೊಂದಿಗೆ ನಗರದ ಬೀದಿಗಳಲ್ಲಿ ಸಾಗಿ ಶ್ರೀ ಪುರಂ ಅಯ್ಯಪ್ಪ ದೇವಾಲಯದವರೆಗೆ ಸಾಗಿ ಅಲ್ಲಿಂದ ಕುಶಾಲನಗರ ಕಡೆಗೆ ಬೀಳ್ಕೊಡಲಾಯಿತು.

ಈ ಸಂದರ್ಭ ಗ್ರಾ.ಪಂ. ಬಿ. ಎಂ. ಸುರೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ, ಬಿ.ಕೆ.ಮೋಹನ್, ಸಹದೇವ, ಹರೀಶ್, ಬಿ.ಎಸ್.ಆನಂದ, ವಾಸು, ಮುರುಳೀಧರ್ ಕಾಮತ್, ಶಾಂತಿ ನಂಜುಂಡ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌