ನಂದಿ ಸಕ್ಕರೆ ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ

KannadaprabhaNewsNetwork |  
Published : Apr 24, 2025, 12:04 AM IST
 ಸಚಿವ ಎಂ. ಬಿ. ಪಾಟೀಲ ಅವರು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಹಿತರಕ್ಷಣೆ ಕುರಿತು ವಿಜಯಪುರ ನಗರದಲ್ಲಿ ಕಾರ್ಖಾನೆಯ ನಿರ್ದೇಶಕರು ಮತ್ತು ರೈತ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು.   | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಈ ಭಾಗದ ಅಸ್ಮಿತೆಯಾಗಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಲು ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದು, ಒಂದು ವಾರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಈ ಭಾಗದ ಅಸ್ಮಿತೆಯಾಗಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಲು ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದು, ಒಂದು ವಾರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ನಗರದಲ್ಲಿರುವ ಸಚಿವರ ಗೃಹ ಕಚೇರಿಯಲ್ಲಿ ಕಾರ್ಖಾನೆ ಹಿತರಕ್ಷಣೆ ಕುರಿತು ರೈತರೊಂದಿಗೆ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆ ಉಳಿವಿಗೆ ಎನ್‌ಸಿಡಿಸಿ ಯೋಜನೆಯಡಿ ಸಾಲ ಒದಗಿಸುವಂತೆ ನಾನು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಆದ್ಯತೆಯ ಆಧಾರದ ಮೇಲೆ ಕಾರ್ಖಾನೆಯ ಮನವಿಯನ್ನು ಪರಿಗಣಿಸಿ ನೆರವು ನೀಡುವಂತೆ ಕೋರಿದ್ದೇನೆ. ಇನ್ನು ಮುಂದೆ ಸಚಿವರಾದ ಎಚ್.ಕೆ.ಪಾಟೀಲ, ಶಿವಾನಂದ ಪಾಟೀಲ, ಶಾಸಕ ಜೆ.ಟಿ.ಪಾಟೀಲ ಮತ್ತು ನಾನಾ ಮುಖಂಡರೊಂದಿಗೆ ಸಿಎಂ ಭೇಟಿ ಮಾಡಿ ನೆರವು ನೀಡುವಂತೆ ವಿನಂತಿ ಮಾಡುವುದಾಗಿ ತಿಳಿಸಿದರು.

ಇಂದು ಕೂಡ ನಾನು ಸಿಎಂ ಕಚೇರಿಗೆ ಕರೆ ಮಾಡಿ ಭೇಟಿಗೆ ದಿನಾಂಕ ನಿಗದಿಪಡಿಸಲು ಕೇಳಿದ್ದೇನೆ. ಒಂದು ವಾರದಲ್ಲಿ ದಿನಾಂಕ ನಿಗದಿಯಾಗಲಿದ್ದು, ಈ ಸಭೆಗೆ ಸಂಬಂಧಿಸಿದ ಎಲ್ಲ ಮುಖಂಡರು ಬರಬೇಕು. ವಿಜಯಪುರ ಮತ್ತು ಕಾರ್ಖಾನೆಗೆ ಸಂಬಂಧಿಸಿದ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿದಿಗಳನ್ನೂ ಸಭೆಗೆ ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು.

ಒಂದು ಕಾಲದಲ್ಲಿ ದೇಶದಲ್ಲಿಯೇ ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ಮೊದಲ ಸ್ಥಾನದಲ್ಲಿದ್ದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅನೇಕ ಪ್ರಶಸ್ತಿ ಮತ್ತು ಪ್ರಶಂಸೆಗಳನ್ನು ಪಡೆದಿತ್ತು. ಆದರೆ, ವಿಸ್ತರಣೆ ಯೋಜನೆ ಕೈಗೊಂಡ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿದೆ. ನಾನು ಈ ಹಿಂದೆ ನೀಡಿದ ಭರವಸೆಯಂತೆ ಷೇರುಗಳನ್ನು ಪಡೆಯುತ್ತೇನೆ. ಅಲ್ಲದೇ, ಕಾರ್ಖಾನೆಯನ್ನು ಗತವೈಭವಕ್ಕೆ ತರಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಕಾರ್ಖಾನೆ ಅಧ್ಯಕ್ಷ ಆನಂದಕುಮಾರ ದೇಸಾಯಿ, ನಿರ್ದೇಶಕರಾದ ಶಶಿಕಾಂತಗೌಡ ಪಾಟೀಲ, ಮುಖಂಡರಾದ ಶಿವನಗೌಡ ಪಾಟೀಲ ಯಡಹಳ್ಳಿ, ಬಸವರಾಜ ದೇಸಾಯಿ, ಬಿ.ಡಿ.ಪಾಟೀಲ, ಆರ್.ಪಿ.‌ಕೊಡಬಾಗಿ, ಟಿ.ಆರ್.ಪಚ್ಚಣ್ಣವರ, ಜೆ.ಡಿ.ದೇಸಾಯಿ, ಎಲ್.ಎಸ್.ನಿಡೋಣಿ, ಆರ್.ಪಿ.ರಾಘಾ, ಲಕ್ಷ್ಮಣ ಚಿಕದಾನಿ, ಉಮೇಶ ಮಲ್ಲಣ್ಣವರ, ಎಚ್.ಬಿ.ಹರನಟ್ಟಿ, ಸುರೇಶ ದೇಸಾಯಿ, ಬಿ.ಬಿ.ಪಾಟೀಲ, ಮಲ್ಲು ದಳವಾಯಿ, ರಮೇಶ ಬಡ್ರಿ, ಅಪ್ಪುಗೌಡ ಪಾಟೀಲ, ಡಾ.ಕೆ.ಎಚ್.ಮುಂಬಾರಡ್ಡಿ ಮುಂತಾದವರು ಉಪಸ್ಥಿತರಿದ್ದರು.

------

ಕೋಟ್‌

ಒಂದು ಕಾಲದಲ್ಲಿ ದೇಶದಲ್ಲಿಯೇ ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ಮೊದಲ ಸ್ಥಾನದಲ್ಲಿದ್ದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅನೇಕ ಪ್ರಶಸ್ತಿ ಮತ್ತು ಪ್ರಶಂಸೆಗಳನ್ನು ಪಡೆದಿತ್ತು. ಆದರೆ, ವಿಸ್ತರಣೆ ಯೋಜನೆಯನ್ನು ಕೈಗೊಂಡ ಹಿನ್ನೆಲೆಯಲ್ಲಿ ಇದೀಗ ಸಂಕಷ್ಟದಲ್ಲಿದೆ. ನಾನು ಈ ಹಿಂದೆ ನೀಡಿದ ಭರವಸೆಯಂತೆ ಷೇರುಗಳನ್ನು ಪಡೆದು ಕಾರ್ಖಾನೆಯನ್ನು ಮತ್ತೆ ಗತವೈಭವಕ್ಕೆ ತರಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ.

ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆ ಹೋಗಲಾಡಿಸಿ: ಪೂರ್ಣಿಮಾ
ಬಡವರಿಗೆ ನಲ್ಲೂರು ಕುಟುಂಬ ಕೊಡುಗೆ ಅಪಾರ: ಓಂಕಾರ ಶ್ರೀ