ಕನ್ನಡಪ್ರಭ ವಾರ್ತೆ ನಂಜನಗೂಡು
ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಹಾ ಪೋಷಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಶಿಕ್ಷಣವು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ವ್ಯಕ್ತಿತ್ವ ನಿರ್ಮಾಣ, ಸಾಮಾಜಿಕ ಜವಾಬ್ದಾರಿ ಮತ್ತು ಜೀವನ ಕೌಶಲ್ಯಗಳ ಬೆಳವಣಿಗೆಯನ್ನೂ ಒಳಗೊಂಡಿರಬೇಕು ಎಂದು ತಿಳಿಸಿದರು. ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುವುದು ಪೋಷಕರ ಪ್ರಮುಖ ಕರ್ತವ್ಯವಾಗಿದೆ ಎಂದರು.ಮಕ್ಕಳ ಶೈಕ್ಷಣಿಕ ಸಾಧನೆಯ ಜೊತೆಗೆ ಅವರ ಮಾನಸಿಕ ಆರೋಗ್ಯ, ಮೌಲ್ಯಗಳು ಹಾಗೂ ಸಾಮಾಜಿಕ ನಡವಳಿಕೆಗಳ ಮೇಲೂ ಪೋಷಕರು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ನಿಯಮಗಳ ಕುರಿತು ಮಾತನಾಡಿದ ಹಿರಿಯ ಉಪನ್ಯಾಸಕ ಎಸ್. ಲಿಂಗಣ್ಣಸ್ವಾಮಿ ಅವರು, ವಿದ್ಯಾರ್ಥಿಗಳ ಹಾಜರಾತಿ, ಶಿಸ್ತು, ಪರೀಕ್ಷಾ ಕ್ರಮ, ಆಂತರಿಕ ಮೌಲ್ಯಮಾಪನ, ಗ್ರಂಥಾಲಯ ಬಳಕೆ ಹಾಗೂ ಕಾಲೇಜಿನ ವಿವಿಧ ಸೌಲಭ್ಯಗಳ ಕುರಿತು ಪೋಷಕರಿಗೆ ವಿವರವಾದ ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಫಲಿತಾಂಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ವೃತ್ತಿ ಮಾರ್ಗದರ್ಶನ ಹಾಗೂ ಮುಂದಿನ ಶೈಕ್ಷಣಿಕ ಯೋಜನೆಗಳ ಕುರಿತು ಪೋಷಕರೊಂದಿಗೆ ಮುಕ್ತ ಸಂವಾದ ನಡೆಯಿತು.